ಬೀದರ್‌ | ಮಳೆ : ಜಲಾವೃತಗೊಂಡ ರಸ್ತೆಗಳು, ಜನರ ಪರದಾಟ

Date:

Advertisements

ಬೀದರ್‌ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಅಬ್ಬರಿಸಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ರಸ್ತೆಗಳೆಲ್ಲವೂ ಜಲಾವೃತಗೊಂಡು ಕೆರೆಗಳಾಗಿ ಮಾರ್ಪಟ್ಟಿದ್ದವು.

ಸುಮಾರು ಎರಡೂವರೆ ಗಂಟೆಗಳ ಕಾಲ ಸುರಿದ ಬಿರುಸಿನ ಮಳೆಯಿಂದಾಗಿ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದವು. ಗುಂಪಾ ರಸ್ತೆ ಹಾರೂರಗೇರಿ ಕಮಾನ್‌, ಹಳೆ ಜಿಲ್ಲಾಧಿಕಾರಿ ಕಚೇರಿ, ನಗರಸಭೆ ಮುಂದಿನ ಹರಳಯ್ಯ ವೃತ್ತದಲ್ಲಿ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡು ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಸಂಕಷ್ಟಕ್ಕೀಡಾದರು.

ಭಾನುವಾರದಿಂದ ಆರಂಭಗೊಂಡ ಮಳೆ ಸತತ ಮೂರನೇ ದಿನವೂ ಮುಂದುವರೆಯಿತು. ಮಳೆಯಿಂದ ವಾಹನ ಸವಾರರು, ಪಾದಚಾರಿಗಳು ಪರದಾಡಿದರು.

Advertisements

ಜಿಲ್ಲೆಯ ಔರಾದ್‌ ಸೇರಿದಂತೆ ನಾನಾ ಕಡೆ ಬೆಳಿಗ್ಗೆಯಿಂದಲೇ ಮೋಡ ಕವಿದು ಮಧ್ಯಾಹ್ನ ಮಳೆಯಾಯಿತು. ಗ್ರಾಮೀಣ ಭಾಗದಲ್ಲಿ ಸುರಿದ ಜಿಟಿಜಿಟಿ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ತೊಡಕಾಯಿತು.

ಇದನ್ನೂ ಓದಿ : ಬೀದರ್‌ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್‌ ಖುಷ್!

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X