ಶಿವಮೊಗ್ಗ | ಸಕ್ರೆಬೈಲು ಆನೆ ಬಿಡಾರಕ್ಕೆ ಮತ್ತೊಂದು ಕಾಡಾನೆ ಆಗಮನ

Date:

Advertisements

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಎನ್.ಪುರ ತಾಲೂಕಿನಲ್ಲಿ ಕಳೆದ ಆರು ತಿಂಗಳಿನಿಂದ ಬೀಡುಬಿಟ್ಟು ರೈತರ ಹೊಲಗದ್ದೆಗಳಿಗೆ ಘೀಳಿಟ್ಟು ಬೆಳೆ ಹಾನಿಮಾಡುತ್ತಿದ್ದ ಪುಂಡಾನೆಯನ್ನು ನಿನ್ನೆ ಸೆರೆ ಹಿಡಿಯಲಾಗಿದೆ. ಕಳೆದ ವಾರದ ಹಿಂದೆ ಇದೇ ಭಾಗದಲ್ಲಿ ಒಂದು ಕಾಡಾನೆಯನ್ನು ಸೆರೆಹಿಡಿಯಲಾಗಿತ್ತು. ಈ ಸಂದರ್ಭದಲ್ಲಿ ಸಕ್ರೆಬೈಲು ಬಿಡಾರದಿಂದ ನಾಲ್ಕು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು. ಕಾಡಾನೆ ಸೆರೆಹಿಡಿದ ನಂತರ ಕುಮ್ಕಿ ಆನೆಗಳು ಬಿಡಾರಕ್ಕೆ ವಾಪಸ್ಸಾಗಿದ್ದವು.

ಇದರ ಬೆನ್ನಲ್ಲೇ ಮತ್ತೆ ಕುಪ್ಪೂರು ಮಡಬೂರು ಬಳಿ ಕಾಡಾನೆ ಉಪಟಳ ನೀಡುತ್ತಿದ್ದರಿಂದ ಮಲೆನಾಡಿನ ಜನತೆ ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದಿದ್ದರು.ಆ ಭಾಗದಲ್ಲಿ ಕಾಡಾನೆ ದಾಳಿಗೆ ಮೂವರು ಬಲಿಯಾಗಿದ್ದಲ್ಲದೆ, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕಾಡಾನೆ ಸೆರೆಗೆ ಸ್ಥಳೀಯರು ಪಟ್ಟು ಹಿಡಿದು ಎನ್.ಪುರ ಖಾಂಡ್ಯ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕಾಡಾನೆ ಸೆರೆಗೆ ಅನುಮತಿ ನೀಡಿತು. ಕಳೆದ ವಾರ ಇದೇ ಭಾಗದಲ್ಲಿ ಒಂದು ಕಾಡಾನೆ ಸೆರೆಯಾಗಿತ್ತು. ಇದಾದ ಬಳಿಕ 04-08-25 ರಂದು ಮಡಬೂರು ಮತ್ತು ಕುಪ್ಪೂರು ಬಳಿಯಿದ್ದ ಕಾಡಾನೆಯನ್ನು ಸೆರೆಹಿಡಿಯಲಾಯಿತು. ಕಳೆದ 6 ತಿಂಗಳಿಂದ ಮಡಬೂರು, ಕುಪ್ಪೂರು ಸೇರಿ ಸುತ್ತಮುತ್ತ ಕೃಷಿ ಭೂಮಿ ಹಾನಿಮಾಡಿದ್ದ ಪುಂಡಾನೆ ಸೆರೆಗೆ ಜನರಿಂದ ಭಾರಿ ಒತ್ತಡವಿತ್ತು.

Advertisements

ಡಿ.ಎಫ್.ಓ ಶಿವಶಂಕರ್, ಆರ್.ಎಫ್.ಓ. ಪ್ರವೀಣ್, ಸಕ್ರೆಬೈಲು ವೈದ್ಯ ಮುರುಳಿ ಹಾಗೂ ಸಿಬ್ಬಂದಿಗಳು ಸೇರಿದಂತೆ ಮಾವುತ ಕಾವಾಡಿ ಟ್ರಾಕರ್ ಗಳ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X