ಇಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಇಡೀ ರಾಜ್ಯದ ಹಲವೆಡೆ ಕೆಎಸ್ಆರ್ಟಿಸಿ ಸೇರಿ ಸಾರಿಗೆ ನಿಗಮಗಳ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ.
ಕೋಲಾರ ನಗರದ ಹೊಸ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ಓಡಾಡದೆ ಇಡೀ ಬಸ್ ನಿಲ್ದಾಣ ಸ್ಥಬ್ದವಾಗಿತ್ತು. 10 ಗಂಟೆ ವೇಳೆಗೆ ಅಧಿಕಾರಿಗಳು ಒಂದೆರಡು ಬಸ್ಸುಗಳನ್ನು ನಿಲ್ದಾಣಕ್ಕೆ ಕಳುಹಿಸಿದ್ದಾರೆ. ಈ ವೇಳೆ ಕಿಡಿಗೇಡಿಯಿಂದ ಕಲ್ಲು ತೂರಾಟ ನಡೆದಿದ್ದು, ಬಸ್ಸಿನ ಕಿಟಿಕಿ ಗಾಜು ಪುಡಿಯಾಗಿದೆ.
ಇದನ್ನು ಓದಿದ್ದೀರಾ? ಮೆಟ್ರೋ ಯೋಜನೆಯಲ್ಲಿ ಕೇಂದ್ರದ ಜೊತೆಗೆ ರಾಜ್ಯ ಸರ್ಕಾರದ ಪಾಲೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಘಟನೆಯ ಬಗ್ಗೆ ಮಾಹಿತಿ ಅರಿತ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ.

