ತುರುವೇಕೆರೆ | ಗಾಂಜಾ ಮಾರಾಟ, ಸೇವನೆ : ಮೂವರ ಬಂಧನ

Date:

Advertisements

ಗಾಂಜಾ ಸೊಪ್ಪು ಸೇವನೆ ಮತ್ತು ಮಾರಾಟ ಮಾಡಿದ ಆರೋಪದಡಿ ಮೂವರು ಯುವಕರನ್ನು ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ತುರುವೇಕೆರೆ  ಪಟ್ಟಣದ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (21), ತಿಪಟೂರು ಟೌನ್ ನಿವಾಸಿ ಪಿ.ರಾಕೇಶ್ (25), ಖಾಸಗೀ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರು ಹೆಬ್ಬಾಳದ ಸುಮಂಗಲಿ ಸೇವಾಶ್ರಮದ ನಿವಾಸಿ ಆರ್. ತ್ರಿನೇಶ್ (22) ಎಂದು ಹೇಳಲಾಗಿದೆ.

ತುರುವೇಕೆರೆ ತಾಲ್ಲೂಕಿನ ಅಮ್ಮಸಂದ್ರ ಫ್ಯಾಕ್ಟರಿಯ ಬಳಿ ಇರುವ ನೀಲಗಿರಿ ತೋಪಿನಲ್ಲಿ ಆರೋಪಿ ಅಭಿಷೇಕ್ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದಾನೆ ಎಂಬ ಬಗ್ಗೆ ಖಚಿತ ಮಾಹಿತಿ ಆಧರಿಸಿ ತುರುವೇಕೆರೆ ಸಿಪಿಐ ಲೋಹಿತ್ ಮತ್ತು ದಂಡಿನಶಿವರ ಪಿಎಸ್ಐ ಕೆ.ವಿ.ಮೂರ್ತಿ ನೇತೃತ್ವದ ಪೊಲೀಸ್ ತಂಡ ಆರೋಪಿ ಅಭಿಷೇಕ್ ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವನಲ್ಲಿ ಸುಮಾರು 615 ಗ್ರಾಂ ಗಾಂಜಾ ಸೊಪ್ಪು ಪತ್ತೆಯಾಯಿತು. ಆರೋಪಿ ಅಭಿಷೇಕ್‌ ನನ್ನು ಹೆಚ್ಚು ವಿಚಾರಣೆ ಮಾಡಿದ ವೇಳೆ ರಾಕೇಶ್ ಮತ್ತು ತ್ರಿನೇಶ್ ಎಂಬುವವರು ತಿಪಟೂರು ಮತ್ತು ಬೆಂಗಳೂರಿನಿಂದ ತಂದು ತುರುವೇಕೆರೆಗೆ ಗಾಂಜಾ ಸೊಪ್ಪು ಮಾರುತ್ತಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ. ಗಾಂಜಾ ಸೊಪ್ಪು ಮಾರಿದ್ದ ರಾಕೇಶ್‌ ಮತ್ತು ತ್ರಿನೇಶ್‌ ನನ್ನು ಪೊಲೀಸರು ಸೆರೆ ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 

Advertisements

ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X