ಹೊನ್ನಾವರ | ಕಟ್ಟಡ ಕಾಮಗಾರಿ ಸಾಮಾಗ್ರಿಗಳ ಹೊತ್ತೊಯ್ದಿದ್ದ ಕಳ್ಳರ ಬಂಧನ

Date:

Advertisements

ಕಟ್ಟಡ ಕಾಮಗಾರಿ ಸ್ಥಳದಿಂದ ಕಬ್ಬಿಣದ ಸೆಂಟ್ರಿಂಗ್ ಸೀಟ್‌ಗಳನ್ನು ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳರ ತಂಡವೊಂದನ್ನು ಹೊನ್ನಾವರ ಪೊಲೀಸರು ಬಂಧಿಸಿ ಆರೋಪಿಗಳಿಂದ ₹5 ಲಕ್ಷ ಮೌಲ್ಯದ ಕಳವು ಮಾಡಿದ ಸ್ವತ್ತು ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತವೀರ ಅಹಮ್ಮದ್, ಷಹಾದ್-ಉಲ್ಲಾ, ಮಹ್ಮದ್ ಮನ್ಸೂರ್ ಮತ್ತು ಕಲೀಮುಲ್ಲಾ ಅಲಿಯಾಸ್ ಕಲೀಂ ಬಂಧಿತ ಆರೋಪಿಗಳು.

ಕಳೆದ ತಿಂಗಳು ಕಾಸರಕೋಡ ರೋಷನ್ ಮೊಹಲ್ಲಾದಲ್ಲಿನ ಮಸೀದಿ ಹತ್ತಿರ ನಿರ್ಮಾಣವಾಗುತ್ತಿದ್ದ ಕಟ್ಟಡವೊಂದರ ಬಳಿ ಇಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್ ಸೀಟ್‌ಗಳು ಕಳುವಾಗಿತ್ತು. ಜುಲೈ 15ರ ರಾತ್ರಿ 7 ಗಂಟೆಯಿಂದ ಜುಲೈ 16ರ ಬೆಳಗ್ಗೆ 9 ಗಂಟೆಯ ನಡುವಿನ ಅವಧಿಯಲ್ಲಿ ಈ ಕೃತ್ಯ ನಡೆದಿತ್ತು. ಈ ಬಗ್ಗೆ ರಾಮ ಲಕ್ಷ್ಮಣ ನಾಯ್ಕ ಅವರು ನೀಡಿದ ದೂರಿನ ಮೇರೆಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ತಾಂತ್ರಿಕ ಹಾಗೂ ಖಚಿತ ಮಾಹಿತಿಯ ಆಧಾರದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisements

ಬಂಧಿತರಿಂದ ₹2 ಲಕ್ಷ ಮೌಲ್ಯದ 180 ಕಬ್ಬಿಣದ ಸೆಂಟ್ರಿಂಗ್ ಸೀಟ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ₹3 ಲಕ್ಷ ಮೌಲ್ಯದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಕಳ್ಳತನವನ್ನು ಒಪ್ಪಿಕೊಂಡಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಹೊನ್ನಾವರ | ಸಾರಿಗೆ ನೌಕರರ ಮುಷ್ಕರ: ತಹಶೀಲ್ದಾರ್‌ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಸಭೆ

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್ (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಿ. ಕೃಷ್ಣಮೂರ್ತಿ ಮತ್ತು ಎಂ. ಜಗದೀಶ್, ಹಾಗೂ ಭಟ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಮಹೇಶ ಕೆ, ಹೊನ್ನಾವರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಿದ್ದರಾಮೇಶ್ವರ ಎಸ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜಶೇಖರ ವಂದಲಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಗಜಾನನ ನಾಯ್ಕ, ವಿಠ್ಠಲ ಗೌಡ, ಮನೋಜ ಡಿ, ರವಿ ನಾಯ್ಕ, ಚಂದ್ರಶೇಖರ ನಾಯ್ಕ, ಅನಿಲ ಲಮಾಣಿ, ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X