ಮೈಸೂರು | ಆ.10 ರಂದು ಬ್ಯಾರಿ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ: ಕುಟುಂಬ ಸಮ್ಮಿಲನ ಕಾರ್ಯಕ್ರಮ; ಉಮರ್ ಯು ಹೆಚ್

Date:

Advertisements

ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಕೊಡಮಾಡುವ 2024 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮತ್ತು ಪಿರ್ಸಪ್ಪಾಡ್‌ ಬ್ಯಾರಿ ಕುಟುಂಬ ಸಮ್ಮಿಲನವು ಆಗಸ್ಟ್‌ 10ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಉಮರ್ ಯು. ಹೆಚ್. ಅವರು ಮಾಹಿತಿ ನೀಡಿದರು.

ಮೈಸೂರಿನ ಬ್ಯಾರಿ ವೆಲ್ಫೇರ್ ಅಸೋಸಿಯೇಶನ್‌ ಸಹಯೋಗದೊಂದಿಗೆ, ತಿಲಕ ನಗರದ ಈದ್ಗಾ ಮೈದಾನ ಮುಂಭಾಗದಲ್ಲಿರುವ ಎ. ಆರ್. ಕನ್ವೆನ್ಷನ್ ಸೆಂಟರ್ ನಲ್ಲಿ ಸಂಜೆ 4ಕ್ಕೆ ನಡೆಯಲಿರುವ ಸಮಾರಂಭದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ‘ ಬೆಲ್ಕಿರಿ ‘ ದ್ವೈಮಾಸಿಕ ಬಿಡುಗಡೆ ಮಾಡಲಿದ್ದು, ಶಾಸಕ ಕೆ. ಹರೀಶ್ ಗೌಡ ‘ ಪೆರಿಮೆ ‘ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಬೆಂಗಳೂರಿನ ದಿ ಬ್ಯಾರೀಸ್‌ ವೆಲ್ಫೇರ್‌ ಅಸೋಸಿಯೇಶನ್‌ ನ ಮಾಜಿ ಅಧ್ಯಕ್ಷ ಡಾ. ಮಕ್ಸೂದ್‌ ಅಹ್ಮದ್‌ ಮುಲ್ಕಿ (ಬ್ಯಾರಿ ಭಾಷೆ ಮತ್ತು ಸಂಘಟನೆ), ಹಿರಿಯ ಬ್ಯಾರಿ ಹಾಡುಗಾರ, ಕವಿ ಪಿ.ಎ. ಹಸನಬ್ಬ ಮೂಡುಬಿದರೆ (ಬ್ಯಾರಿ ಕಲೆ ಮತ್ತು ಸಂಸ್ಕೃತಿ) ಹಾಗೂ ಬ್ಯಾರಿ ಕವಿ ಮತ್ತು ಬರಹಗಾರ ಹೈದರ್‌ ಅಲಿ ಕಾಟಿಪಳ್ಳ (ಬ್ಯಾರಿ ಸಾಹಿತ್ಯ) ಗೌರವ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Advertisements

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್‌ ಯು.ಹೆಚ್.‌ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ದಿ ಬ್ಯಾರೀಸ್‌ ವೆಲ್ಫೇರ್‌ ಅಸೋಸಿಯೇಶನ್‌ನ ಕಾರ್ಯಕಾರಿ ಸಮಿತಿ ಸದಸ್ಯ ಅತ್ತೂರು ಚೆಯ್ಯಬ್ಬ ಅಭಿನಂದನಾ ಭಾಷಣ ಮಾಡಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ. ಎನ್.‌ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದ.ಕ. ಮತ್ತು ಕರಾವಳಿ ಜಿಲ್ಲಾ ಸಂಘಗಳ ಒಕ್ಕೂಟದ ಅಧ್ಯಕ್ಷ ಗ್ರೇಶಿಯಸ್ ರೋಡ್ರಿಗಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 11ಕ್ಕೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಅಝೀಝ್ (ಅಬ್ದುಲ್ಲ) ವಿವಿಧ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಲಿದ್ದಾರೆ.

ದಿನವಿಡೀ ನಡೆಯಲಿರವ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಬ್ಯಾರಿ ಸಾಂಪ್ರದಾಯಿಕ ಆಹಾರ ಮತ್ತು ಮೆಹಂದಿ ವಿನ್ಯಾಸ, ಮಕ್ಕಳಿಗೆ ಬ್ಯಾರಿ ಹಾಡು ಹಾಗೂ ಪುರುಷ, ಮಹಿಳೆ ಮತ್ತು ಮಕ್ಕಳಿಗೆ ಬ್ಯಾರಿ ಕ್ವಿಝ್ ಸ್ಪರ್ಧೆ ಏರ್ಪಡಿಸಲಾಗಿದೆ. ದಫ್ ಕುಣಿತ, ಒಪ್ಪನೆ ಹಾಡು, ಕೋಲಾಟ, ಬ್ಯಾರಿ ಹಾಡುಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಜೈವಿಕ – ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಒತ್ತು : ಶೈಖ್ ತನ್ವಿರ್ ಆಸೀಫ್

ಪತ್ರಿಕಾಗೋಷ್ಠಿಯಲ್ಲಿ ಬ್ಯಾರಿ ವೆಲ್ಫೇರ್ ಅಸೋಸಿಯೇಶನ್ ಜಿಲ್ಲಾ ಅಧ್ಯಕ್ಷರಾದ ಹಾಜಿ ಯು.ಕೆ. ಹಮೀದ್, ಪ್ರಧಾನ ಕಾರ್ಯದರ್ಶಿ ಎಂ. ಐ. ಅಹ್ಮದ್ ಬಾವ, ಕೋಶಾಧಿಕಾರಿ ಆರಂಗಳ ಅಬ್ದುಲ್‌ ಹಮೀದ್, ಕಾರ್ಯಕಾರಿ ಸಮಿತಿ ಸದಸ್ಯ ಮುಹಮ್ಮದ್‌ ಫಯಾಝ್‌ ಪಟ್ಟು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X