ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದು ನೋಡಿದ್ದೇವೆ: ಗ್ರಾಮಸ್ಥರಿಂದ 3ನೇ ದೂರು ದಾಖಲು

Date:

Advertisements

“ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದನ್ನು ನಾವು ನೋಡಿದ್ದೇವೆ, ನಾವು ಭಯದಲ್ಲಿ ಬದುಕುತ್ತಿದ್ದೇವೆ” ಎಂದು ಮತ್ತೊಂದು ದೂರು ದಾಖಲಾಗಿದೆ. ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಮೇಲೆ ದಾಖಲಾಗಿರುವ ಮೂರನೇ ದೂರು ಇದಾಗಿದೆ.

ಬೆಳ್ತಂಗಡಿಯಲ್ಲಿರುವ ಎಸ್.ಐ.ಟಿ.‌ ಕಚೇರಿಗೆ ನೀಡಿರುವ ದೂರಿನ ಪ್ರತಿ ಈ ದಿನಕ್ಕೆ ಲಭ್ಯವಾಗಿದೆ.

ಧರ್ಮಸ್ಥಳ ಗ್ರಾಮದ ಸಾಕ್ಷಿದಾರರು (ದೂರುದಾರರು) ದೂರು ನೀಡುವ ವೇಳೆ ಇದ್ದರೆಂದು ತಿಳಿದುಬಂದಿದೆ.

Advertisements

ದೂರು ಸ್ವೀಕರಿಸಿದ ಎಸ್.ಐ.ಟಿ. “ತಾವು ನೀಡಿದ ಅರ್ಜಿಯನ್ನು ಸ್ವೀಕರಿಸಿ, ಪರಿಶೀಲಿಸಿರುತ್ತೇವೆ. ಯಾವುದೇ ಅಪರಾಧ ಕೃತ್ಯದ ಕುರಿತು ಮಾಹಿತಿಯನ್ನು/ದೂರನ್ನು ಸ್ಥಳೀಯ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮುಂದಿನ ಕ್ರಮ ಜರುಗಿಸುವ ಕುರಿತು‌ ಸಲ್ಲಿಸುವುದು” ಎಂದು ಹಿಂಬರಹ ನೀಡಿ ಕಳುಹಿಸಿದೆ.

ದೂರಿನಲ್ಲಿ ಏನಿದೆ?

“ಧರ್ಮಸ್ಥಳದ ಗ್ರಾಮಸ್ಥರು ಮತ್ತು ಧರ್ಮಸ್ಥಳಕ್ಕೆ ಹೊಂದಿಕೊಂಡ ಪ್ರದೇಶದ ಗ್ರಾಮಸ್ಥರಾದ ನಾವು ನಿವೇದಿಸಿ ಕೊಳ್ಳುವುದೇನೆಂದರೆ, ನಾವು ಇಲ್ಲಿಯವರೆಗೆ ಭಯದಲ್ಲಿಯೇ ಬದುಕಿರುತ್ತೇವೆ. ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳ ನಿಷ್ಪಕ್ಷಪಾತ ತನಿಖೆಗಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಸ್ಥಾಪಿಸಲಾದ ವಿಶೇಷ ತನಿಖಾದಳವು ನಡೆಸುತ್ತಿರುವ ಕಾರ್ಯಾಚರಣೆಯು ನಮಗೆ ಭಯದಿಂದ ಹೊರಬರಲು ನೆರವಾಗುತ್ತಿದೆ” ಎಂದು ಗ್ರಾಮಸ್ಥರು ದೂರಿನಲ್ಲಿ ವಿವರಿಸಿದ್ದಾರೆ.

ದೃಶ್ಯ ಮಾಧ್ಯಮದಲ್ಲಿ ತೋರಿಸುತ್ತಿರುವ ದೂರುದಾರ ವ್ಯಕ್ತಿಯನ್ನು ಗ್ರಾಮಸ್ಥರಾದ ನಾವು ಗುರುತಿಸಿರುತ್ತೇವೆ. ಆತ ರಹಸ್ಯವಾಗಿ ಜನರಿಗೆ ಕಾಣದಂತೆ ಧರ್ಮಸ್ಥಳ ಗ್ರಾಮದ ವಿವಿಧೆಡೆ ಶವಗಳನ್ನು ಕೊಂಡೊಯ್ದು ಹೂತು ಹಾಕಿರುವುದನ್ನು ನಾವು ವಿವಿಧ ಸ್ಥಳಗಳಲ್ಲಿ ನೋಡಿರುತ್ತೇವೆ” ಎಂದು ತಿಳಿಸಿದ್ದಾರೆ.

“ಆತ ರಹಸ್ಯವಾಗಿ ಹೂತುಹಾಕಿರುವುದಾಗಿ ಭಾವಿಸಿದ್ದರೂ, ಗ್ರಾಮಗಳಲ್ಲಿ ಇಂತಹ ವಿಷಯಗಳು ರಹಸ್ಯವಾಗಿ ಉಳಿಯುವುದಿಲ್ಲವೆಂಬುದು ತಮಗೆ ತಿಳಿದಿರುತ್ತದೆ. ಜನರ ರಕ್ಷಣೆಗೆಂದು ಮಾನ್ಯಮುಖ್ಯಮಂತ್ರಿಗಳು ಸ್ಥಾಪಿಸಿರುವ ಈ‌ ವಿಶೇಷ ತನಿಖಾದಳಕ್ಕೆ ನಾವು ಸಹಕಾರ ನೀಡಲೇಬೇಕು ಎಂದು ತೀರ್ಮಾನಿಸಿರುತ್ತೇವೆ” ಎಂದಿದ್ದಾರೆ.

ಮೂರನೇ ದೂರು

ಇದನ್ನೂ ಓದಿ ‘ಭೂ ಹಗರಣಕ್ಕೂ ಸಾವುಗಳಿಗೂ ಸಂಬಂಧ ಇದೆ’- ಎಡಪಂಥೀಯರ ನಿಯೋಗದ ಮುಂದೆ ಧರ್ಮಸ್ಥಳ ಜನರ ಅಹವಾಲು

ಮುಂದುವರಿದು, “ದೂರುದಾರನು ತೋರಿಸುತ್ತಿರುವ ಸ್ಥಳಗಳಲ್ಲಿ ಮೃತದೇಹಗಳ ಕಳೇಬರಗಳನ್ನು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ನಮ್ಮನ್ನೂ ಒಳಪಡಿಸಲು ಕೋರುತ್ತೇವೆ. ಪ್ರತ್ಯೇಕವಾಗಿ ಆತನು ಹೂತು ಹಾಕುತ್ತಿದ್ದ ಸ್ಥಳಗಳನ್ನು ನಾವು ಎಲ್ಲೆಲ್ಲಿ ನೋಡಿದ್ದೇವೆ ಎಂದು ಸ್ವತಂತ್ರವಾಗಿ ತೋರಿಸುವ ಅವಕಾಶವನ್ನೂ ಕೋರುತ್ತೇವೆ” ಎಂದು ಮನವಿ ಮಾಡಿಕೊಂಡಿದ್ದಾರೆ

yathiraj 2
ಯತಿರಾಜ್‌ ಬ್ಯಾಲಹಳ್ಳಿ
+ posts

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರಾದ ಯತಿರಾಜ್, ಮೈಸೂರು ವಿವಿಯಲ್ಲಿ ಸ್ನಾತಕ ಪದವಿ, ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ 'ಈದಿನ.ಕಾಂ'ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. 'ಪ್ರಜಾವಾಣಿ', 'ಆಂದೋಲನ' ಪತ್ರಿಕೆಯಲ್ಲಿ ಕೆಲಕಾಲ ಕೆಲಸ ಮಾಡಿದ್ದರು. ರಾಜಕಾರಣ, ಸಿನಿಮಾ, ದಲಿತ, ಅಲ್ಪಸಂಖ್ಯಾತ ವಿಷಯಗಳಲ್ಲಿ ಆಸಕ್ತರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಯತಿರಾಜ್‌ ಬ್ಯಾಲಹಳ್ಳಿ
ಯತಿರಾಜ್‌ ಬ್ಯಾಲಹಳ್ಳಿ
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರಾದ ಯತಿರಾಜ್, ಮೈಸೂರು ವಿವಿಯಲ್ಲಿ ಸ್ನಾತಕ ಪದವಿ, ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ 'ಈದಿನ.ಕಾಂ'ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. 'ಪ್ರಜಾವಾಣಿ', 'ಆಂದೋಲನ' ಪತ್ರಿಕೆಯಲ್ಲಿ ಕೆಲಕಾಲ ಕೆಲಸ ಮಾಡಿದ್ದರು. ರಾಜಕಾರಣ, ಸಿನಿಮಾ, ದಲಿತ, ಅಲ್ಪಸಂಖ್ಯಾತ ವಿಷಯಗಳಲ್ಲಿ ಆಸಕ್ತರು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X