ಚಿತ್ರದುರ್ಗ | ಕವಾಡಿಗರಹಟ್ಟಿ ಪ್ರಕರಣ; ಹಲವರು ಗುಣಮುಖ

Date:

Advertisements

ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರಿನಿಂದಾಗಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಹುತೇಕರು ಗುಣಮುಖರಾಗಿ, ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಹೊಸದಾಗಿ ದಾಖಲಾಗುವವರ ಸಂಖ್ಯೆಯೂ ಇಳಿಮುಖಗೊಂಡಿದೆ. ನೀರಿನ 03 ಮಾದರಿಗಳ ವರದಿ ಕೂಡ ಬಂದಿದ್ದು, ನೀರಿನಲ್ಲಿ ಯಾವುದೇ ವಿಷಕಾರಿ ರಾಸಾಯನಿಕ ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಹಲವರು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ ಎಂದು ಅವರು ತಿಳಿಸಿದ್ದಾರೆ. “ಸಾರ್ವಜನಿಕರು ಕಾಯಿಸಿ, ಆರಿಸಿದ ನೀರನ್ನೇ ಉಪಯೋಗಿಸಬೇಕು. ಯಾವುದೇ ಆಹಾರ ಸೇವನೆಗೂ ಮುನ್ನ ಕೈ-ಕಾಲುಗಳನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು, ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ರಂಗನಾಥ್ ಅವರು ಪ್ರಕರಣಕ್ಕೆ ಸಂಬಂಧಿಸಿದ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. “ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿನ ಐಎಡಿಎಫ್‌ಸಿ ಕೇಂದ್ರಕ್ಕೆ ಕವಾಡಿಗರ ಹಟ್ಟಿಯಲ್ಲಿ ಸಂಗ್ರಹಿಸಲಾದ ನೀರಿನ 03 ಮಾದರಿಗಳನ್ನು ಕಳುಹಿಸಿಕೊಡಲಾಗಿತ್ತು. ನೀರಿನಲ್ಲಿ ಯಾವುದೇ ರಾಸಾಯನಿಕ ಅಂಶಗಳು ಕಂಡುಬಂದಿಲ್ಲವೆಂದು ವರದಿ ಹೇಳಿದೆ. ಆದರೆ, ಕಾಲರಾಕ್ಕೆ ಕಾರಣವಾಗಬಹುದಾದ ಸೂಕ್ಷ್ಮಾಣು ಜೀವಿಗಳು ಪತ್ತೆಯಾಗಿವೆ. ಈಗಾಗಲೆ ಕವಾಡಿಗರ ಹಟ್ಟಿಗೆ ಪ್ರತ್ಯೇಕವಾಗಿ ಶುದ್ಧ ನೀರು ಪೂರೈಕೆ ಮಾಡಲಾಗುತ್ತಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

Advertisements

“ಈವರೆಗೆ ಒಟ್ಟು 226 ಜನ ದಾಖಲಾಗಿದ್ದು, 188 ಗುಣಮುಖರಾಗಿದ್ದಾರೆ. ಬುಧವಾರ 18 ಮಂದಿ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ. ಪ್ರಸ್ತುತ ಇಬ್ಬರು ಜಿಲ್ಲಾಸ್ಪತ್ರೆ ಹಾಗೂ 31 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ವಿವರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X