ಒಳ ಮೀಸಲಾತಿ | ನಾಗಮೋಹನ್ ದಾಸ್ ಶಿಫಾರಸ್ಸುಗಳ ಯಥವಾತ್ತಾಗಿ ಜಾರಿಗೆ ಒತ್ತಾಯ

Date:

Advertisements

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಆಶಯದಂತೆ ಆತನ ಪಾಲು ದೊರೆಯಬೇಕು ಎಂಬ ಸಾಮಾಜಿಕ ನ್ಯಾಯದ ತತ್ವಕ್ಕೆ ಒತ್ತು ನೀಡಿ ನ್ಯಾ.ನಾಗಮೋಹನ್ ದಾಸ್ ಅವರು ಒಳಮೀಸಲಾತಿ ಕುರಿತಂತೆ ನೀಡಿರುವ ಶಿಫಾರಸ್ಸುಗಳನ್ನು ಸ್ವಾಗತಿಸುತ್ತಾ,ಆಗಸ್ಟ್ 11 ರಿಂದ ಆರಂಭವಾಗುವ ಅಧಿವೇಶದಲ್ಲಿ ವರದಿಯನ್ನು ಮಂಡಿಸಿ,ಯಥವಾತ್ತಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ನಿರ್ಣಯ ಕೈಗೊಂಡಿದೆ.

ನಗರದ ಟೌನ್‌ಹಾಲ್ ಬಳಿ ಇರುವ ಮುರುಘಾ ರಾಜೇಂದ್ರ ಸಭಾಂಗಣದಲ್ಲಿ ನಡೆದ ಒಳಮೀಸಲಾತಿ ಹೋರಾಟ ಸಮಿತಿಯಲ್ಲಿ ಕಳೆದ ಮೂವತ್ತು ವರ್ಷಗಳಿಂದ ನಡೆದ ಒಳಮೀಸಲಾತಿ ಕುರಿತ ಸುಧೀರ್ಘ ಹೋರಾಟವನ್ನು ನೆನಪು ಮಾಡಿಕೊಳ್ಳುತ್ತಾ, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

1001848097

ಈ ವೇಳೆ ಮಾತನಾಡಿದ ಒಳಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ, ಮಾದಿಗ ಸಮುದಾಯದ ಮೂವತ್ತು ಹೋರಾಟಕ್ಕೆ ಕೊನೆಗೂ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸ ಮೂಡಿದೆ.ನ್ಯಾ ನಾಗಮೋಹನ್ ದಾಸ್ ಸಮಿತಿಯ ವರದಿಯ ಅಂಕಿ ಅಂಶಗಳ ಕುರಿತು ನಡೆಯುತ್ತಿರುವ ಚರ್ಚೆಯ ಪ್ರಕಾರವೇ ಮಾದಿಗ ಸಮುದಾಯಕ್ಕೆ ಶೇ7 ಮೀಸಲಾತಿ ಲಭಿಸಬೇಕಿತ್ತು.ಆದರೆ ಅಲೆಮಾರಿ ಸಮುದಾಯಗಳಿಗೆ, ಹಿಂದುಳಿದ ಸಮುದಾಯಗಳಿಗೆ ತಲಾ ಶೇ 1 ಮೀಸಲಾತಿ ನೀಡಿರುವುದು ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿದಂತಾಗುತ್ತದೆ ಎಂಬ ಹಿನ್ನೆಲೆಯಲ್ಲಿ,ಈಗ ನೀಡಿರುವ ಮೀಸಲಾತಿ ಪ್ರಮಾಣವನ್ನು ಒಪ್ಪಿಕೊಂಡಿದ್ದು,ಇನ್ನೂ ಮೀನಾಮೇಷ ಎಣಿಸದೆ, ಆಗಸ್ಟ್ 11 ರಿಂದ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ, ಜಾರಿಗೆ ತರಬೇಕೆಂದು ಆಗ್ರಹಿಸುತ್ತೇವೆ. ಒಂದು ವೇಳೆ ಸರಕಾರ ಹಿಂದೇಟು ಹಾಕಿ ವಿಳಂಭ ಮಾಡಿದರೆ, ಆಗಸ್ಟ್ 16 ರಿಂದ ಉಗ್ರ ಹೋರಾಟಕ್ಕೆ ಅಣಿಯಾಗುವುದಾಗಿ ತಿಳಿಸಿದರು.

Advertisements

ಸಭೆಯಲ್ಲಿ ಹಿರಿಯ ಚಿಂತಕರಾದ ಕೆ.ದೊರೆರಾಜು,ಹಂಪಣ್ಣ ವಾಲಿಕಾರ್, ಬಸವರಾಜ ಕೌತಾರ್,ಎಂ.ಆರ್.ಹೆಚ್.ಎಸ್‌ನ ಕೇಶವಮೂರ್ತಿ, ಕುಂದೂರು ತಿಮ್ಮಯ್ಯ, ರಾಜಸಿಂಹ, ನರಸಿಂಹಮೂರ್ತಿ ಸೇರಿದಂತೆ ನೂರಕ್ಕೂ ಹೆಚ್ಚು ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X