ಬಾಗಲಕೋಟೆ | ‘ಜನಸಮುದಾಯ ವ್ಯವಸ್ಥಿತವಾಗಿ ಬದುಕಲು ಸಂವಿಧಾನದ ಸಂರಕ್ಷಣೆ ಅತ್ಯಗತ್ಯ’

Date:

Advertisements

ದೇಶದ ಜನಸಮುದಾಯ ವ್ಯವಸ್ಥಿತವಾಗಿ ಬದುಕಲು ಸಂವಿಧಾನದ ಸಂರಕ್ಷಣೆ ಅತ್ಯಗತ್ಯ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ್ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೆವೂರು ಆದರ್ಶ ವಿದ್ಯಾವರ್ಧಕ ಸಂಘ, ಮಹಾವಿದ್ಯಾಲಯ, ಆದರ್ಶ ಸಂಯುಕ್ತ ಪದವಿಪೂರ್ವ ಕಲಾ ಮಹಾವಿದ್ಯಾಲಯ ಹಾಗೂ ಸತ್ಯಶೋಧನ ಸಂಸ್ಥೆಯ ಸಹಯೋಗದಲ್ಲಿ ಸಂಸ್ಥೆಯ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನಯಾನ ಕಾರ್ಯಕ್ರಮದದಲ್ಲಿ ಅವರು ಮಾತನಾಡಿದರು.

”ಸರ್ವರಿಗೂ ಸಮಬಾಳು, ಸಮಪಾಲು ಸಂವಿಧಾನದ ಆಶಯವಾಗಿದೆ. ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಒದಗಿಸುವ ಅಂಶಗಳು ಸಂವಿಧಾನದಲ್ಲಿ ಅಡಕಗೊಂಡಿವೆ” ಎಂದರು.

ಪ್ರಾಚಾರ್ಯ ವಿ.ಬಿ.ಅರಹುಣಸಿ ಮಾತನಾಡಿ, “ವಿದ್ಯಾರ್ಥಿಗಳು ಸಂವಿಧಾನದ ಮಹತ್ವವನ್ನು ಅರಿತಾಗ ಗೌರವಯುತ ನಾಗರಿಕರಾಗಿ ಬಾಳಲು ಸಾಧ್ಯ” ಎಂದು ಹೇಳಿದರು.

ಇದನ್ನೂ ಓದಿ: ಬಾಗಲಕೋಟೆ | ಪಿಎಚ್‌ಸಿಗೆ ಕಾಯಂ ವೈದ್ಯರ ನೇಮಕಕ್ಕೆ ಮೆಟಗುಡ್ಡ ಗ್ರಾಮಸ್ಥರ ಆಗ್ರಹ: ಟಿಎಚ್‌ಒ ಭರವಸೆ

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಜಿ.ಜಿ.ಮಾಗನೂರ, ಉಪಾಧ್ಯಕ್ಷ ರತನ್ ಕುಮಾರ ವೈಜಾಪುರ, ಗ್ರಾಪಂ ಸದಸ್ಯ ಶರಣಪ್ಪ,ಮಾಗನೂರ, ಸತ್ಯಶೋಧಕ ಸಂಸ್ಥೆಯ ಸಂಚಾಲಕ ಎ.ಬಿ.ಕಲಾಲ್, ಮುಖ್ಯಗುರು ಯೋಗೇಶ್ ಲಮಾಣಿ, ಉಪನ್ಯಾಸಕರಾದ ಜೆ. ಕೆ.ಮಲ್ಲಾಪುರ, ಎಸ್.ಎನ್.ಬಾರ್ಕಿ, ಪ್ರಕಾಶ ತಳವಾರ, ಎಸ್.ಬಿ.ಹಂಚಿನಾಳ, ಜಿ.ಎಸ್. ಗೌಡರ, ಡಿ.ವೈ.ಬುಡ್ಡಿ, ವಸಂತ್‌ ಕುಮಾರ ನಿಲುಗಲ್, ಎಸ್.ಕೆ.ಮಾದಳ್ಳಿ, ಮಾಗನೂರ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X