ಶಿವಮೊಗ್ಗ | ಇಂಜಿನ್,ಬೋಗಿ ಸಂಪರ್ಕ ಕಡಿತಗೊಂಡು ಚಲಿಸಿದ ರೈಲು : ಭಯಭೀತರಾದ ಪ್ರಯಾಣಿಕರು

Date:

Advertisements

ಶಿವಮೊಗ್ಗದಲ್ಲಿ ಇಂದು ಮೈಸೂರು-ಶಿವಮೊಗ್ಗ ರೈಲಿನಲ್ಲಿ ರೈಲು ಚಲುಸುವವಾಗಲೇ ಇಂಜಿನ್ ಮತ್ತು ಬೋಗಿ ಸಂಪರ್ಕ ಕಳೆದು ಕೊಂಡು, ಆರ್ಧ ರೈಲು ಚಲಿಸಿದ ದೃಶ್ಯ ಲಭ್ಯವಾಗಿದೆ. ಬೋಗಿಗಳನ್ನು ಬಿಟ್ಟು ಇಂಜಿನ್ ದೂರ ಚಲಿಸಿದ ಘಟನೆ ವರದಿಯಾಗಿದೆ.

ಶಿವಮೊಗ್ಗ ನಗರದೊಳಗೆ ಇರುವ ತುಂಗಾ ಸೇತುವೆ ಮೇಲೆ ಘಟನೆ ನಡೆದಿದೆ. ತುಂಗಾ ಸೇತುವೆ ಮೇಲೆ ಸ್ವಲ್ಪ ದೂರ ಇಂಜಿನ್ ಇಲ್ಲದೇ ಬೋಗಿಗಳು ಚಲಿಸಿವೆ. ಘಟನೆ ಗಮನಿಸಿದ ಪ್ರಯಾಣಿಕರಲ್ಲಿ ಆತಂಕ ಹೆಚ್ಚಿದೆ. ತುಂಗಾನದಿಯ ರೈಲ್ವೆ ಹಳಿಗಳ ಮೇಲೆ ಇಂಜಿನ್ ಒಂದೇ ಚಲಿಸಿದೆ. 50 ನಿಮಿಷಗಳ ಕಾಲ ಇಂಜಿನ್ ಬಿಟ್ಟು ಸೇತುವೆಯ ಒಂದು ತುದಿಯಲ್ಲಿ ಬೋಗಿಗಳು ಚಲಿಸಿವೆ. ಇದರಿಂದ ಸ್ವಲ್ಪಕಾಲ ಪ್ರಯಾಣಿಕರು ಭಯಭೀತರಾಗಿದ್ದಾರೆ.

1002017358

ನಂತರ ಸ್ಥಳಕ್ಕೆ ಆಗಮಿಸಿದ ರೈಲ್ವೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಸ್ಯೆ ಬಗೆ ಹರಿಸಿದ್ದಾರೆ. ನಂತರ ಪ್ರಯಾಣಿಕರು ನಿಟ್ಟುಸಿರು ಬಿಟ್ಟು ಪ್ರಯಾಣ ಮುಂದುವರೆಸಿದ್ದಾರೆ.

Advertisements

ತಾಳಗುಪ್ಪದಿಂದ ಮೈಸೂರು ಕಡೆಗೆ ಹೊರಟಿದ ರೈಲು ತುಂಗ ನದಿಯ ರೈಲ್ವೆ ಸೇತುವೆ ಬಳಿ ಬಂದಾಗ ಇಂಜಿನ್ ನಿಂದ 8 ನೇ ಬೋಗಿ ಕಳಚಿಕೊಂಡಿತ್ತು.ಶಿವಮೊಗ್ಗ ರೈಲ್ವೆ ನಿಲ್ದಾಣ ಬಿಟ್ಟು ವಿದ್ಯಾನಗರದ ಮಹದೇವಿ ನಿಲ್ದಾಣಕ್ಕೆ ಸಾಗುವ ವೇಳೆ ಈ ಘಟನೆ ನಡೆದಿದೆ.

1002017390

ಇಂದು ಸಂಜೆ 5 ಗಂಟೆಗೆ ಈ ಘಟನೆ ನಡೆದಿದ್ದು 50 ನಿಮಿಷ ಬೋಗಿ ಜೋಡಣೆ ಮಾಡಲು ಸಮಯ ತೆಗೆದುಕೊಂಡಿದೆ. ರೈಲ್ವೆ ಇಂಜಿನಿಯರ್, ಆರ್ ಪಿಎಫ್ ಸೇರಿದಂತೆ ಹಲವು ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಭಾಗಿಯಾಗಿ ಮುಂದಿನ ಪ್ರಯಾಣವನ್ನ ಅನುವು ಮಾಡಿಕೊಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

Download Eedina App Android / iOS

X