ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ಗೆ ಎಸ್ಐಟಿ ತಂಡ ಭೇಟಿ ನೀಡಿ ಹಲವು ಮಹತ್ವದ ದಾಖಲೆಗಳನ್ನು ವಶ ಪಡಿಸಿಕೊಂಡಿರುವುದಾಗಿ ಮಾಹಿತಿ ತಿಳಿದು ಬಂದಿದೆ.
ಎಸ್ಐಟಿ ಅಧಿಕಾರಿಗಳ ತಂಡವು ಗ್ರಾಮ ಪಂಚಾಯತ್ ನಿಂದ 1995 ರಿಂದ 2014 ರವರೆಗೆ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸಿದ ಪಿಡಿಒಗಳು, ವಿ.ಎಗಳು ಸೇರಿದಂತೆ ಇತರೆ ಅಧಿಕಾರಿಗಳ ದಾಖಲೆಗಳನ್ನು ಎಸ್ಐಟಿ ತಂಡ ವಶಕ್ಕೆ ಪಡೆದುಕೊಂಡಿದೆ. ಎಸ್ಐಟಿ ಇನ್ಸೆಕ್ಟರ್ ಸಂಪತ್ ನೇತೃತ್ವದ ತಂಡ ಆಗಸ್ಟ್ 6 ರಂದು ಗ್ರಾಮ ಪಂಚಾಯತಿಗೆ ಆಗಮಿಸಿ ದಾಖಲೆ ಪಡೆದುಕೊಂಡಿದ್ದಾರೆ ಎಂದು ಈ ದಿನ.ಕಾಮ್ಗೆ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
