ಮಂಗಳೂರು | ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ನೇಕಾರರಿಗೆ ಆರ್ಥಿಕ ನೆರವು

Date:

Advertisements

ಸರ್ಕಾರದ ಯೋಜನೆಯಾದ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್‍ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ.5 ಸಾವಿರ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ ಮೂಲಕ (ನೇರಾ ನಗದು ವರ್ಗಾವಣೆ) ನೀಡಲಾಗುತ್ತಿದೆ.

2024-25ನೇ ಸಾಲಿನಲ್ಲಿ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಪಟ್ಟಿಯಲ್ಲಿ ಪ್ರಸ್ತುತ ಸಾಲಿನಲ್ಲಿ ಮೃತರಾಗಿರುವ, ನೇಕಾರಿಕೆ  ವೃತ್ತಿ ಬಿಟ್ಟಿರುವ, ಬೇರೆ ಕಡೆ ಸ್ಥಳಾಂತರಗೊಂಡಿರುವ ನೇಕಾರರನ್ನು ಹೊರತುಪಡಿಸಿ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಮತ್ತು 2025-26ನೇ ಸಾಲಿನ ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ (PMJJBY) ಮತ್ತು ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ (PMSBY)ಯಡಿ ನೋಂದಣಿಯಾಗಿರುವ ಕೈಮಗ್ಗ ನೇಕಾರರು ಹಾಗೂ ಕಳೆದ ಸಾಲಿನಲ್ಲಿ ನೋಂದಣಿಯಾಗದೇ ಇರುವ ನೇಕಾರರ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರು ಅರ್ಜಿ ನಮೂನೆಗಳನ್ನು ತಮ್ಮ ನೇಕಾರ ಸಹಕಾರ ಸಂಘಗಳಿಂದ/ ಈ ಕಚೇರಿಯಿಂದ ಪಡೆದು ಸಂಘದ ಮೂಲಕ ಈ ಕಚೇರಿಗೆ ಸಲ್ಲಿಸಬೇಕಾಗಿರುತ್ತದೆ. ವೈಯಕ್ತಿಕ ನೇಕಾರರಾಗಿದ್ದಲ್ಲಿ ನೇಕಾರ್ ಸಮ್ಮಾನ್ ಅರ್ಜಿ ನಮೂನೆಗಳನ್ನು ಈ ಕಚೇರಿಯಿಂದ ಪಡೆದು ಸಲ್ಲಿಸಬಹುದು.

ಇದನ್ನೂ ಓದಿ: ಧರ್ಮಸ್ಥಳ | ಗುಂಪುಗಳ ನಡುವೆ ವಾಗ್ವಾದ: ವಾಹನಗಳ ಮೇಲೆ ಕಲ್ಲು ತೂರಾಟ; ಸ್ಟೇಷನ್ ಮುಂದೆ ಧರಣಿ

Advertisements

ಕೈಮಗ್ಗ ನೇಕಾರರು ಸಲ್ಲಿಸಬೇಕಾದ  ದಾಖಲಾತಿಗಳು: ಆಧಾರ್ ಕಾರ್ಡ್, ರೇಷನ್ ಕಾರ್ಡ್, ನೇಕಾರ್ ಸಮ್ಮಾನ್ ಐಡಿ / ಪೆಹಚಾನ್ ಕಾರ್ಡ್, ಆಧಾರ್ (Linked) ಬ್ಯಾಂಕ್ ಖಾತೆ ಪಾಸ್‍ಬುಕ್ ಪ್ರತಿ, ಕೈಮಗ್ಗ ನೇಕಾರಿಕೆ ವೃತ್ತಿಯಲ್ಲಿ ಇರುವ ಫೋಟೋ, ಕೈಮಗ್ಗದಲ್ಲಿ ಕಾರ್ಯನಿರ್ವಹಿಸುವ ಕೂಲಿ ನೇಕಾರರ ಮಜೂರಿ ಪಾವತಿ ರಶೀದಿ.

ಇದನ್ನೂ ಓದಿ: ಮಂಗಳೂರು | ಕೂಳೂರು ಬಳಿ ಮತ್ತೆ ಟ್ರಾಫಿಕ್‌ ಜಾಮ್; ಹೈರಾಣಾದ ಸವಾರರು

ವಿದ್ಯುತ್ ಮಗ್ಗ ನೇಕಾರರು ಸಲ್ಲಿಸಬೇಕಾದ ದಾಖಲಾತಿಗಳು: ಘಟಕದ ಮಾಲೀಕರು /ನೇಕಾರರು/ ಕಾರ್ಮಿಕ ಆಧಾರ್ (Linked) ಬ್ಯಾಂಕ್ ಖಾತೆ ಪಾಸ್‍ಬುಕ್ ಪ್ರತಿ, ವಿದ್ಯುತ್ ಮಗ್ಗ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಲಾನುಭವಿಯ ಫೋಟೋ, ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್.ನಂ. ನ ವಿದ್ಯುತ್ ಬಿಲ್, ಘಟಕದ ಉದ್ಯೋಗ್ ಆಧಾರ್ / ಪಿ.ಎಂ.ಟಿ / ಉದ್ದಿಮೆದಾರರ ಪರವಾನಿಗೆ ಪತ್ರದ ಪ್ರತಿ, ಘಟಕದಲ್ಲಿ ಕಾರ್ಯನಿರ್ವಹಿಸುವ ನೇಕಾರರು / ಕಾರ್ಮಿಕರ ವಿವರಗಳನ್ನು ಒಳಗೊಂಡ ಮಜೂರಿ ಪಾವತಿಯ ಪ್ರತಿ, ಮಾಲೀಕರಿಂದ ನೇಕಾರರು/ಕಾರ್ಮಿಕರ ಬಗ್ಗೆ ದೃಢೀಕರಣ ಪ್ರತಿ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಅಥವಾ  ಭರ್ತಿ ಮಾಡಿದ ಅರ್ಜಿಗಳನ್ನು ಯೆಯ್ಯಾಡಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ (ದೂರವಾಣಿ ಸಂಖ್ಯೆ: 0824-2225056) ಗೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X