ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ; ತಪ್ಪಿತಸ್ಥರ ಬಂಧನಕ್ಕೆ ಡಿವೈಎಫ್ಐ ಒತ್ತಾಯ

Date:

Advertisements

ಧರ್ಮಸ್ಥಳ ಸುತ್ತಮುತ್ತ ನಡೆದಿದೆ ಎನ್ನಲಾದ ಅತ್ಯಾಚಾರ, ಅಸಹಜ ಸಾವಿನ ಕುರಿತು ಕಳೆದ ಹಲವು ವರುಷಗಳಿಂದ ವಸ್ತುನಿಷ್ಠ ವರದಿ ಮಾಡುತ್ತಾ ಬಂದಿರುವ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ನ ವರದಿಗಾರ, ಪತ್ರಕರ್ತ ಅಜಯ್ ಅಂಚನ್ ಮೇಲೆ ಆ ಭಾಗದ ಗೂಂಡಾ ಗುಂಪೊದು ಧರ್ಮಸ್ಥಳದ ಹೆಸರು ಕೆಡಿಸುತ್ತೀರಿ ಎಂಬ ನೆಪ ಮುಂದಿಟ್ಟುಕೊಂಡು ಅಜಯ್ ಅಂಚನ್, ಸಂತೋಷ್ ಸಹಿತ ಇತರ ಮಾಧ್ಯಮ ವರದಿಗಾರರ ಮೇಲೆ ದಾಳಿ, ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸುತ್ತದೆ ಹಾಗೂ ಹಲ್ಲೆ ನಡೆಸಿದ ಗೂಂಡಾಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸುತ್ತದೆ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಸಹಿತ, ಪದ್ಮಲತಾ, ವೇದವಲ್ಲಿ, ಆನೆ ಮಾವುತ ಹೀಗೆ ಧರ್ಮಸ್ಥಳದ ಸುತ್ತಮುತ್ತಲು ನಡೆದಿವೆ ಎನ್ನಲಾದ ಹಲವು ಅತ್ಯಾಚಾರ, ಕೊಲೆ, ಅಸಹಜ ಸಾವಿನ ಕುರಿತು ತನಿಖೆಗೆ ಆಗ್ರಹಿಸಿ ನಡೆಯುತ್ತಿದ್ದಂತಹ ಹೋರಾಟಗಳನ್ನು ವಸ್ತುನಿಷ್ಠವಾಗಿ ವರದಿ ಮಾಡುತ್ತಾ ಬಂದಿದ್ದ ಪತ್ರಕರ್ತ ಅಜಯ್ ಅಂಚನ್ ಈ ನಾಡಿನ ಜನರ ಗಮನ ಸೆಳೆದಿದ್ದರು. ಅಲ್ಲದೆ ಈ ಎಲ್ಲಾ ಪ್ರಕರಣವನ್ನು ಪ್ರತಿಯೊಂದು ಆಯಾಮಗಳಲ್ಲೂ ಅವಲೋಕಿಸಿ ತನಿಖಾ ವರದಿ ರೀತಿಯಲ್ಲಿ ಸುದ್ಧಿ ಬಿತ್ತರಿಸುವ ಪ್ರಯತ್ನವನ್ನು ನಡೆಸುತ್ತಾ ಬಂದಿರುತ್ತಾರೆ. ಎಷ್ಟೇ ಒತ್ತಡ, ಬೆದರಿಕೆಗಳಿದ್ದರೂ ಆತ ವರದಿ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: BREAKING NEWS | ಧರ್ಮಸ್ಥಳದಲ್ಲಿ ಗೂಂಡಾಗಿರಿ: ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ

Advertisements

“ಇದ್ಯಾವುದನ್ನು ಲೆಕ್ಕಿಸದೆ ಅನ್ಯಾಯಕ್ಕೊಳಗಾದವರ ಪರವಾಗಿ ನಿಂತು ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಕರಣಗಳ ಕುರಿತು ವಸ್ತುನಿಷ್ಠವಾಗಿ ವರದಿ ಮಾಡುತ್ತಾ ಬಂದಿರುವ ಅಜಯ್ ಅಂಚನ್ ಎದೆಗಾರಿಕೆಯನ್ನು ನಾಗರೀಕ ಸಮಾಜ ಮೆಚ್ಚಬೇಕಾಗಿದೆ. ಇತ್ತೀಚೆಗೆ ಅನಾಮಿಕನೊಬ್ಬ ಧರ್ಮಸ್ಥಳದ ಸುತ್ತಮುತ್ತಲ ಕಾಡಿನಲ್ಲಿ ಹೂತುಹಾಕಿರುವ ಶವಗಳ ತೋರಿಸಿ ಕೊಡಲು ಮುಂದಾಗುವ ಕುರಿತು ದೂರು ನೀಡಿದ ಹಿನ್ನಲೆಯಲ್ಲಿ ಆ ನಂತರ ನಡೆದ ಎಲ್ಲಾ ಬೆಳವಣೆಗೆಗಳು ಹಾಗೂ ಎಸ್.ಐ.ಟಿ ಈ ಕುರಿತು ತನಿಖೆ ಪ್ರಾರಂಭಿಸಲು ಮುಂದಾದ ದಿನದಿಂದಲೂ ಅಜಯ್ ಅಂಚನ್ ಧರ್ಮಸ್ಥಳದಲ್ಲಿ ನಡೆಯುತ್ತಿರುವ ದಿನನಿತ್ಯ ಬೆಳವಣೆಗೆಯನ್ನು ವರದಿ ಮಾಡುತ್ತಲೇ ಬಂದಿದ್ದಾರೆ. ಈ ರೀತಿ ವರದಿ ಮಾಡುವುದನ್ನು ಸಹಿಸದ ಕೆಲವೊಂದು ಶಕ್ತಿಗಳು ಅಜಯ್ ಅಂಚನ್ ಮೇಲೆ ಮುಗಿಬಿದ್ದು ಮಾರಣಾಂತಿಕ ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದಿದ್ದಾರೆ. ಆ ಮೂಲಕ ಪತ್ರಿಕಾ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಧಮನಿಸಲು ಹೊರಟಿದ್ದಾರೆ. ದೈಹಿಕ ದಾಳಿಗಳನ್ನು ನಡೆಸುವ ಮೂಲಕ ಬೆದರಿಸಲು, ಬಾಯಿಮುಚ್ಚಿಸಲು ಪ್ರಯತ್ನಿಸಿದ್ದಾರೆ. ಈ ಪ್ರಕರಣವನ್ನು ಸರಕಾರ, ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು, ಗೂಂಡಾಗಿರಿ ಮೆರೆದ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣಕ್ರಮಕ್ಕೆ ಒಳಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ | ಜಿಪಿಆರ್ ಸಲಕರಣೆಗಳ ಅಭಾವ? ವಕೀಲರ ಕಳವಳ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X