ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದ ತೆಲುಗು ದೇಶಂ ಸಂಸದರ ನಿಯೋಗ

Date:

Advertisements

ಆಂಧ್ರ ಪ್ರಶದ ಉಕ್ಕು ಕ್ಷೇತ್ರದ ಬೆಳವಣಿಗೆ ಕುರಿತಂತೆ ಆ ರಾಜ್ಯದ ತೆಲುಗು ದೇಶಂ ಪಕ್ಷದ ಎಲ್ಲ ಸಂಸದರು ಸಂಸತ್ತಿನ ಕಚೇರಿಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕೇಂದ್ರ ಸಚಿವ ಕೆ. ರಾಮ್ ಮೋಹನ್ ನಾಯ್ಡು ಅವರ ನೇತೃತ್ವದಲ್ಲಿ ಸಂಸತ್ ಭವನದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ತೆಲುಗು ದೇಶಂ ಸಂಸದರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪುನಶ್ಚೇತನ ಪ್ಯಾಕೇಜ್ ನೀಡಿದ ನಂತರ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಸ್ಥಾವರದ (RINL) ಕಾರ್ಯನಿರ್ವಹಣೆ, ಅಭಿವೃದ್ಧಿ, ಉದ್ಯೋಗ ಸೃಷ್ಟಿ ಸೇರಿದಂತೆ ರಾಜ್ಯದ ಹಲವಾರು ಅಭಿವೃದ್ಧಿಪರ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಉಕ್ಕು ಕ್ಷೇತ್ರದತ್ತ ಆಂಧ್ರ ಪ್ರದೇಶ ಸರ್ಕಾರ ತೋರುತ್ತಿರುವ ಉತ್ಸುಕತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಕುಮಾರಸ್ವಾಮಿ, “ಪ್ರಧಾನಿಗಳು ಪುನಶ್ಚೇತನ ಪ್ಯಾಕೇಜ್ ನೀಡಿದ ನಂತರ ವೈಜಾಗ್ ಸ್ಟೀಲ್ ಕಾರ್ಖಾನೆ ಉತ್ತಮವಾಗಿ ಕೆಲಸ ಮಾಡುತ್ತಿದೆ. ನಿರೀಕ್ಷಿತ ಪ್ರಮಾಣಕ್ಕೂ ಮೀರಿ ಉಕ್ಕು ಉತ್ಪಾದನೆ ಮಾಡುತ್ತಿದೆ. 2030ರ ವೇಳೆಗೆ ದೇಶದಲ್ಲಿ ವಾರ್ಷಿಕ 300 ಮಿಲಿಯನ್ ಟನ್ ಉಕ್ಕು ಉತ್ಪಾದನೆ ಮಾಡುವ ಪ್ರಧಾನಿಗಳ ಸಂಕಲ್ಪದಂತೆ ಕಾರ್ಖಾನೆ ಕಾರ್ಯ ನಿರ್ವಹಣೆ ಮಾಡುತ್ತಿದೆ” ಎಂದು ನಿಯೋಗಕ್ಕೆ ತಿಳಿಸಿದರು.

Advertisements

ಆಂಧ್ರ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಉಕ್ಕು ಕ್ಷೇತ್ರದ ಪಾತ್ರ ಹಿರಿದಾಗಿದ್ದು, ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಕಾರ ಅತ್ಯಗತ್ಯವಾಗಿದೆ ಎಂದು ನಿಯೋಗವು ಸಚಿವರಲ್ಲಿ ಮನವಿ ಮಾಡಿತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕುಮಾರಸ್ವಾಮಿ ಅವರು; ಆಂಧ್ರ ಪ್ರದೇಶದ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಜತೆ ನಿಕಟವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ತೆಲುಗು ದೇಶಂ ಸಂಸದರಾದ ಶ್ರೀ ಭರತ್, ಲಾವು ಶ್ರೀಕೃಷ್ಣ ದೇವರಾಯಲು, ಬಿ.ಕೆ. ಪಾರ್ಥಸಾರಥಿ, ಮಾಗುಂಟ ಶ್ರೀನಿವಾಸಲು ರೆಡ್ಡಿ, ದಗ್ಗುಮಳ್ಳ ಪ್ರಸಾದರಾವು, ಸಾನಾ ಸತೀಶ್ ಬಾಬು, ಬೀದಾ ಮಸ್ತಾನ್ ರಾವು ಮುಂತಾದವರು ನಿಯೋಗದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X