ಪ್ರಧಾನಿಯ ಸುದೀರ್ಘ ಭಾಷಣ | ಕೇಂದ್ರ ಸಚಿವರು, ಬಿಜೆಪಿ ಸಂಸದರ ಸಹಿತ ನಿದ್ದೆಗೆ ಜಾರಿದ ಸ್ಪೀಕರ್!

Date:

Advertisements

ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು(ಗುರುವಾರ) ಲೋಕಸಭೆಯಲ್ಲಿ ಸುಮಾರು ಎರಡು ಗಂಟೆ ಹತ್ತು ನಿಮಿಷ ಸುದೀಘವಾದ ಭಾಷಣಗೈದರು.

ವಿಪಕ್ಷಗಳು ಮಣಿಪುರ ಘಟನೆಯ ಬಗ್ಗೆ ಉಲ್ಲೇಖಿಸಿ ಮಾತನಾಡುವಂತೆ ಪಟ್ಟು ಹಿಡಿದಿದ್ದರೂ, ತಮ್ಮ ಇಡೀ ಭಾಷಣದ ಹೆಚ್ಚಿನ ಸಮಯವನ್ನು ತಮ್ಮ ಸರ್ಕಾರದ ಸಾಧನೆ ಹಾಗೂ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವನ್ನು ಜರೆಯಲು ಉಪಯೋಗಿಸಿದರು.

ಸುಮಾರು ಒಂದು ಮುಕ್ಕಾಲು ಗಂಟೆ ಕಾದರೂ ಕೂಡ ಮಣಿಪುರ ಬಗ್ಗೆ ಒಂದೇ ಒಂದು ಪದ ಮಾತನಾಡದಿದ್ದ ಹಿನ್ನೆಲೆಯಲ್ಲಿ ವಿಪಕ್ಷಗಳು ಸಭಾತ್ಯಾಗ ನಡೆಸಿದರು.

Advertisements
sleeping

ಈ ಮಧ್ಯೆ ಪ್ರಧಾನಿಯವರ ಭಾಷಣವನ್ನು ಆಲಿಸಬೇಕಿದ್ದ ಬಿಜೆಪಿ ಸಂಸದರ ಸಹಿತ ಹಲವು ಮಂದಿ ಕೇಂದ್ರ ಸಚಿವರುಗಳೇ ನಿದ್ದೆಗೆ ಜಾರಿರುವ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ. ಅಲ್ಲದೇ, ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಕೂಡ ಕೆಲ ಸೆಕೆಂಡುಗಳ ಕಾಲ ನಿದ್ದೆಗೆ ಜಾರುತ್ತಿರುವ ದೃಶ್ಯಗಳನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ.

‘ಜನರು ನಿದ್ರಿಸಬೇಕಾದರೆ ಇಂತಹ ಭಾಷಣವನ್ನು ನೀಡಿ’ ಎಂಬ ಶೀರ್ಪಿಕೆಯೊಂದಿಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಪ್ರಧಾನಿ ಮೋದಿಯವರ ಭಾಷಣವನ್ನು ಟ್ರೋಲ್ ಮಾಡಿದೆ.

ವಿಡಿಯೋ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಕಾಂಗ್ರೆಸ್ ಐಟಿ ಸೆಲ್, ಕೇಂದ್ರ ಸಚಿವರಾದ ಜೈಶಂಕರ್, ಜ್ಯೋತಿರಾದಿತ್ಯ ಸಿಂಧ್ಯಾ, ನಿತಿನ್ ಗಡ್ಕರಿ ಸಹಿತ ಕೆಲ ಬಿಜೆಪಿ ಸಂಸದರು ನಿದ್ದೆಗೆ ಜಾರಿರುವುದನ್ನು ಹಂಚಿಕೊಂಡಿದೆ.

ಇದಕ್ಕೆ ಸಾಥ್ ನೀಡಿರುವ ಹಲವು ನೆಟ್ಟಿಗರು, ಅಮಿತ್ ಶಾ, ತೇಜಸ್ವಿ ಸೂರ್ಯ ಸೇರಿದಂತೆ ಹಲವರ ದೃಶ್ಯಗಳನ್ನು ಹಂಚಿಕೊಂಡು ಟ್ರೋಲ್ ಮಾಡಿದ್ದಾರೆ.

ಜೊತೆಗೆ, ‘ಸಂಸದ್ ಟಿವಿ’ ಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಯಾಮರಾಮೆನ್ ಹಾಗೂ ವಿಡಿಯೋ ಪ್ರಸಾರದ ಸಿಬ್ಬಂದಿಯ ನೌಕರಿಯಿಂದ ನಾಳೆ ಹೋಗದಿದ್ದರೆ ಸಾಕು’ ಎಂದು ಕೆಲವರು ಆತಂಕ ವ್ಯಕ್ತಪಡಿಸಿ, ವ್ಯಂಗ್ಯವಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X