ಕರಾವಳಿ ಭಾಗದಲ್ಲಿ ಮಳೆ ಸ್ಥಗಿತ; ಹೆಚ್ಚಿದ ತಾಪಮಾನ

Date:

Advertisements

ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ತಾಪಮಾನ ಏರಿಕೆಯಾಗಿದೆ. ರಾಜ್ಯದಲ್ಲಿ ರಾಯಚೂರಿನಲ್ಲಿ ಅತೀ ಹೆಚ್ಚು ತಾಪಮಾನ ದಾಖಲಾಗಿದ್ದರೆ, ನಂತರದ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕರ್ನಾಟಕ ಕರಾವಳಿ ಹಾಗೆಯೇ ಕೇರಳದ ಕನ್ನಡ ಕರಾವಳಿಯಾದ ಕಾಸರಗೋಡು ಜಿಲ್ಲೆ ಸೇರಿದಂತೆ ಕಡಲತೀರದಲ್ಲಿ ಗುರುವಾರವೂ ಬಿಸಿಲ ಝಳ ಹೆಚ್ಚಾಗಿರುವುದು ಕಂಡುಬಂದಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ.

ದಕ್ಷಿಣೋತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರದಂದು ಬಹುತೇಕ ಮೋಡ ಕವಿದ ವಾತಾವರಣ ಇತ್ತು. ಆದರೂ ಇಡೀ ದಿನ ಮಳೆ ಸುರಿಯಲಿಲ್ಲ. ಆಷಾಢ ಮಾಸದ ಬಿಸಿಲಿಗೆ ರೋಗರುಜಿನಗಳು ಜಾಸ್ತಿಯಾಗುತ್ತವೆ ಎಂಬ ಹೇಳಿಕೆಗೆ ಇಂಬು ನೀಡುವಂತೆ ವೈದ್ಯರ ಬಳಿ ಜನರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡುಬಂದಿದೆ.

Advertisements

ಕರಾವಳಿಯಲ್ಲಿ ಮಳೆ ಕಣ್ಣಾಮುಚ್ಚಾಲೆಯಾಡುತ್ತಿರುವ ಕಾರಣ, ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಸೊಳ್ಳೆ ರೋಗವಾಹಕಗಳಾಗಿ ಪರಿವರ್ತನೆ ಹೊಂದುತ್ತಿದ್ದು, ಸಾಂಕ್ರಾಮಿಕ ರೋಗಗಳಲ್ಲೂ ಹೆಚ್ಚಳ ಕಂಡುಬಂದಿದೆ. ಕರಾವಳಿಯಲ್ಲಿ ಬಿಸಿಲಿನ ತಾಪಕ್ಕೆ ವೈರಲ್ ಜ್ವರ ಜಾಸ್ತಿಯಾಗತೊಡಗಿದೆ. ಉಡುಪಿ ಜಿಲ್ಲೆಯಲ್ಲಿ ಶುಕ್ರವಾರವೂ ಗರಿಷ್ಠ ತಾಪಮಾನ ಕಂಡುಬಂದಿದೆ.

ಮಳೆ ವಿವರ : ದಕ್ಷಿಣೋತ್ತರ ಕನ್ನಡ ಜಿಲ್ಲೆಯ ನೆರಿಯದಲ್ಲಿ 34 ಮಿಮೀ, ಚೆನ್ನೈತೋಡಿಯಲ್ಲಿ 23.5, ಸೋಮೇಶ್ವರದಲ್ಲಿ 23, ಬಂಟ್ವಾಳದಲ್ಲಿ 23.5, ಐವರ್ನಾಡಿನಲ್ಲಿ 21.5, ಉಬರಡ್ಕ ಮಿತ್ತೂರಿನಲ್ಲಿ 20, ರಾಯಿಯಲ್ಲಿ 18.5, ಮಂಚಿಯಲ್ಲಿ 17, ಸರಪಾಡಿಯಲ್ಲಿ 17 ಮಿಮೀ ಮಳೆಯಾಗಿದ್ದರೆ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಳೆಯೇ ಕಾಣಿಸಲಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31.1 ಡಿ.ಸೆ, ಉಡುಪಿಯಲ್ಲಿ 34.4 ಡಿ.ಸೆ, ಉತ್ತರ ಕನ್ನಡದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ರಾಯಚೂರಿನ ಬಳಿಕ ಉಡುಪಿಯಲ್ಲೇ ರಾಜ್ಯದಲ್ಲಿ ಅತಿ ಹೆಚ್ಚಿನ ತಾಪಮಾನ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಸಲು ಅಡೆತಡೆಗಳಿಲ್ಲ: ಸಚಿವ ಶಿವರಾಜ್ ತಂಗಡಗಿ

ರಾಜ್ಯದಲ್ಲಿ ಮಳೆಗಾಲದಲ್ಲೂ ಬಿಸಿಲಿನ ತಾಪ ಜೋರಾಗಿಯೇ ಇದೆ. ಮಳೆಯ ಅಬ್ಬರ, ಮೋಡ ಕವಿದ ವಾತಾವರಣ, ಗುಡುಗು ಮಿಂಚು ಇಲ್ಲದೇ ಮಳೆಗಾಲದ ಅನುಭವವೇ ಇಲ್ಲದಂತಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗಿನ ಜಾವ ಕೆಲ ಹೊತ್ತು ಮಳೆಯಾಗಿತ್ತು.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಮೋಡ ಕವಿದ ವಾತಾವರಣವಿದ್ದು, ಮಿಂಚು ಕಾಣಿಸಿತ್ತು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಶುಕ್ರವಾರ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಕರ್ನಾಟಕ ವಿಭಾಗ ಐಎಂಡಿ ವರದಿ ಪ್ರಕಟವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X