ಗುಬ್ಬಿ | ತಹಶೀಲ್ದಾರ್ ವಸತಿ ಗೃಹ ಅವರಣದಲ್ಲೇ ಗಂಧದ ಮರಗಳನ್ನು ಕಡಿದ ಕಳ್ಳರು

Date:

Advertisements

ಗುಬ್ಬಿ ತಾಲ್ಲೂಕು ದಂಡಾಧಿಕಾರಿಗಳ ವಸತಿ ಗೃಹದಲ್ಲಿ ಸೊಗಸಾಗಿ ಬೆಳೆದಿದ್ದ ಗಂಧದ ಮರಗಳಿಗೆ ಕೊಡಲಿ ಇಟ್ಟ ಖದೀಮರು ಗಂಧದ ಮರ ಕಡಿದು ದುಷ್ಕೃತ್ಯ ಮೆರೆದಿರುವ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ.

ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಸಮೀಪದ ಕೂಗಳತೆ ದೂರದಲ್ಲಿರುವ ಎಂ.ಜಿ.ರೋಡ್ ರಸ್ತೆಯ ತಹಶೀಲ್ದಾರ್ ವಸತಿಗೃಹದ ಆವರಣದಲ್ಲಿದ್ದ ಸುಮಾರು ಆರು ಗಂಧದ ಮರಗಳ ಪೈಕಿ ಎರಡು ಮರಗಳನ್ನು ಮಧ್ಯ ಭಾಗದವರೆಗೆ ಕುಯ್ದು ಒಂದು ಮರವನ್ನು ಬುಡಸಹಿತ ಕಡಿದು ಹಾಕಲಾಗಿದೆ.

ನಂತರ ಪಟ್ಟಣದ ಹಳೇ ಏಕೆ ಕಾಲೋನಿ ಬಳಿಯ ಸರ್ಕಾರಿ ಶಾಲೆಯ ಮುಂಭಾಗ ಇದ್ದ ಒಂದು ಗಂಧದ ಮರವನ್ನು ಬುಡಕ್ಕೆ ಕೊಡಲಿ ಪೆಟ್ಟು ನೀಡಿ ಧರೆಗುರುಳಿಸಿದ್ದಾರೆ. ಇತ್ತೀಚಿಗೆ ಗುಬ್ಬಿ ಪಟ್ಟಣದಲ್ಲಿ ಹಾಡಾಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಜೊತೆಗೆ ಒಡವೆ ಕದ್ದು ಕಳ್ಳರು ಕೈ ಚಳಕ ತೋರಿರುವ ಘಟನೆ ಜೊತೆಗೆ ವೈಯಕ್ತಿಕ ದ್ವೇಷಕ್ಕೆ ರೈತರ ಅಡಿಕೆ ಮರ ಕಡಿದು ದುಷ್ಕೃತ್ಯ ಮೆರೆಯುತ್ತಿರುವ ಘಟನೆ ಹೀಗೆ ಅನೇಕ ಅಪರಾಧ ಕೃತ್ಯಗಳು ಕಂಡಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

Advertisements

ತಹಶೀಲ್ದಾರ್ ಮನೆಯಲ್ಲೇ ಗಂಧದ ಮರಗಳನ್ನು ಕಡಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ಗುಬ್ಬಿ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಮಟ್ಟ ಹಾಕಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X