ದಾವಣಗೆರೆ | ಆಸ್ಪತ್ರೆ ಎದುರು ಪ್ರದರ್ಶನಕ್ಕಷ್ಟೇ ನಿಂತಿದೆ ಆ್ಯಂಬುಲೆನ್ಸ್‌

Date:

Advertisements

ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ‘108’ ಆ್ಯಂಬುಲೆನ್ಸ್‌ಗಳನ್ನು ಒದಗಿಸಿದೆ. ಹೋಬಳಿ ಮಟ್ಟದ ಬಹುತೇಕ ಆಸ್ಪತ್ರೆಗಳಲ್ಲೂ ‘108’ ಆ್ಯಂಬುಲೆನ್ಸ್‌ಗಳಿವೆ. ಆದರೆ, ಅವುಗಳು ಬಳಕೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಸರ್ಕಾರಿ ಆಸ್ಪತ್ರೆಗಳಿಗೆ ‘108’ ಆ್ಯಂಬುಲೆನ್ಸ್ ವಾಹನವನ್ನು ಕೊಡುವುದು ರೋಗಿಗಳ ಸೇವೆಗೋ? ಅಥವಾ ಆವರಣದಲ್ಲಿ ನಿಲ್ಲಿಸಿ ಪ್ರದರ್ಶನ ಮಾಡುವುದಕ್ಕೋ? ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ನಗರದ ಸರ್ಕಾರಿ ಆಸ್ಪತ್ರೆ ಬಳಿ 108 ಅಂಬ್ಯುಲೆನ್ಸ್ ಕಳೆದ 25 ದಿನಗಳಿಂದ ಕೆಟ್ಟು ನಿಂತಿದೆ. ಪರಿಣಾಮವಾಗಿ ರೋಗಿಗಳು, ಗರ್ಭಿಣಿಯರು ತುರ್ತು ಸಂದರ್ಭಗಳಲ್ಲಿ 108ಕ್ಕೆ ಕರೆ ಮಾಡಿದರೆ ಅಂಬ್ಯುಲೆನ್ಸ್ ಸಿಗುತ್ತಿಲ್ಲ ಎಂದು ರೋಗಿಗಳು ಮತ್ತು ಅವರ ಪಾಲಕರು ದೂರಿದ್ದಾರೆ.

ಕಷ್ಟಕಾಲದಲ್ಲಿ ರೋಗಿಗಳಿಗೆ ನೆರವಿಗೆ ನಿಲ್ಲಬೇಕಾದ ‘108’ ಆ್ಯಂಬುಲೆನ್ಸ್, ರೋಗಿಗಳಿಗೆ ಉಪಯೋಗವಾಗುದಕ್ಕಿಂತಲೂ ಕೆಟ್ಟು ನಿಲ್ಲುವುದೇ ಹೆಚ್ಚಾಗಿದೆ. ಆಸತ್ರೆಯ ವೈದ್ಯಾಧಿಕಾರಿಗಳ ನಿರ್ಲಕ್ಷ ಅಥವಾ ಆ್ಯಂಬುಲೆನ್ಸ್ ನಿರ್ವಹಣೆ ಮಾಡುವ ಅಧಿಕಾರಿಗಳ ನಿರ್ಲಕ್ಷದಿಂದಾಗಿ, ಸೂಕ್ತ ನಿರ್ವಹಣೆ ಇಲ್ಲದೆ ಆ್ಯಂಬುಲೆನ್ಸ್ ಸಾರ್ವಜನಿಕರ ಬಳಕೆಗೆ ದೊರೆಯದಂತಾಗಿದೆ ಎಂದು ಕಿಡಿಕಾರಿದ್ದಾರೆ.

Advertisements

ಕಳೆದ 25 ದಿನಗಳಿಂದ 108 ಅಂಬುಲೆನ್ಸ್ ವಾಹನದ ಬ್ಯಾಟರಿ ಹಾಳಾಗಿದೆ. ಏಜೆನ್ಸಿಯವರಾಗಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾಗಲೀ ಆ ಬಗ್ಗೆ ಗಮನ ಕೊಡುತ್ತಿಲ್ಲ. ಪರಿಣಾಮ ತಾಲೂಕಿನ ಮಹಿಳೆಯರು, ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಹರಿಹರ ತಾಲೂಕಿನ ಜನರು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X