ಮರ್ಯಾದೆಗೇಡು ಹತ್ಯೆ | ತಳ ಸಮುದಾಯದ ಅಳಿಯನನ್ನು ಗುಂಡಿಕ್ಕಿ ಕೊಂದ ಜಾತಿವಾದಿ ಮಾವ

Date:

Advertisements

ಜಾತೀಯತೆ, ಜಾತಿ ದೌರ್ಜನ್ಯವನ್ನು ತೊಡೆದು ಹಾಕಲು ಸಂವಿಧಾನದಲ್ಲಿ ನಾನಾ ಕಾನೂನುಗಳನ್ನು ರೂಪಿಸಲಾಗಿದೆ. ಆದರೂ, ಪ್ರಬಲ ಜಾತಿಗಳಲ್ಲಿ ಜಾತಿ ರೋಗ ವಾಸಿಯಾಗಿಲ್ಲ. ಜಾತಿಯ ಕಾರಣಕ್ಕಾಗಿ ದೌರ್ಜನ್ಯಗಳು, ಅತ್ಯಾಚಾರಗಳು, ಹತ್ಯೆಗಳು ಮುಂದುವರೆದಿವೆ. ಅಂತಹದ್ದೇ ಪ್ರಕರಣವೊಂದರಲ್ಲಿ ತನ್ನ ಅಳಿತ ತಳ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಅಳಿಯನನ್ನು ಜಾತಿವಾದಿ ಮಾವನೊಬ್ಬ ಗುಂಡಿಕ್ಕಿ ಕೊಂದರುವ ಅಮಾನುಷ ‘ಮರ್ಯಾದೆಗೇಡು ಹತ್ಯೆ’ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ದರ್ಭಂಗಾದಲ್ಲಿ ಘಟನೆ ನಡೆದಿದೆ. ದರ್ಭಂಗಾ ವೈದ್ಯಕೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ನರ್ಸಿಂಗ್‌ ವಿದ್ಯಾರ್ಥಿ ರಾಹುಲ್‌ ಎಂಬವರನ್ನು ಆತನ ಮಾವ ಕೊಂದಿದ್ದಾನೆ.

ತಳಸಮುದಾಯದ ರಾಹುಲ್ ಮತ್ತು ಆತನ ಸಹಪಾಠಿ, ಪ್ರಬಲ ಜಾತಿಯ ಯುವತಿ ಪರಸ್ಪರ ಪ್ರೀತಿಸಿ ಇದೇ ವರ್ಷದ ಏಪ್ರಿಲ್‌ನಲ್ಲಿ ವಿವಾಹವಾಗಿದ್ದರು. ಆ ಕಾರಣಕ್ಕಾಗಿಯೇ ಯುವತಿ ತಂದೆ ಪ್ರೇಮಶಂಕರ್‌ ಝಾ ಎಂಬಾತ ರಾಹುಲ್‌ನನ್ನು ಕಾಲೇಜಿನ ಆವರಣದಲ್ಲಿಯೇ ಗುಂಡು ಹಾರಿಸಿ ಕೊಂದಿದ್ದಾನೆ ಎಂದು ವರದಿಯಾಗಿದೆ.

Advertisements

ಈ ಲೇಖನ ಓದಿದ್ದೀರಾ?: ಬಿಹಾರದಲ್ಲಿ ಎದುರಾಳಿಗಳ ಕೈಕಾಲು ಕಟ್ಟಿ, ತಾನು ಗೆಲ್ಲುವುದು ಬಿಜೆಪಿ ಹುನ್ನಾರ

ರಾಹುಲ್ ಮೇಲೆ ಪ್ರೇಮಾಶಂಕರ್ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತನನ್ನು ಕಾಲೇಜಿನ ವಿದ್ಯಾರ್ಥಿಗಳು ಹಿಡಿದು, ಥಳಿಸಿದ್ದಾರೆ. ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ರಾಹುಲ್ ಹತ್ಯೆಯನ್ನು ಖಂಡಿಸಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಾಮಾಜಿಕ ಜಾಗೃತಿ, ಅರಿವು ಮೂಡಿಸಲು ಸಾವಿರಾರು ಕಾರ್ಯಕ್ರಮಗಳು ನಡೆಯುತ್ತಿದ್ದರೂ ಕೂಡಾ ಜನರಲ್ಲಿ ಅಂಟಿಕೊಂಡಿರುವ ಜಾತಿಯ ವೈರಸ್‌ ಇನ್ನೂ ತೊಲಗದೇ ಇರುವುದು ವಿಪರ್ಯಾಸ. ಭಾರತೀಯ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಸಮಾನತೆಯನ್ನು ಬೋಧಿಸಲಾಗಿದೆ. ಆದರೂ ಇಂದಿಗೂ ಜಾತಿ ಧರ್ಮಗಳ ಕಾರಣಕ್ಕಾಗಿ ತಮ್ಮ ಮಕ್ಕಳನ್ನು ಹತ್ಯೆಗೈಯ್ಯುತ್ತಿರುವ ಘಟನೆಗಳು ನಡೆಯುತ್ತಲೇ ಇವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X