ದಾವಣಗೆರೆ | ಬೈಕ್ ಕೆಎಸ್ಆರ್ಟಿಸಿ ಬಸ್ ಅಪಘಾತ; ಸಾರಿಗೆ ಇಲಾಖೆ ಅಧೀಕ್ಷಕ ಸ್ಥಳದಲ್ಲಿ ದುರ್ಮರಣ

Date:

Advertisements

ಸಾರಿಗೆ ಕಚೇರಿಗೆ ಹೊಂಡಾ ಆಕ್ಟಿವಾ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯಗಳಾಗಿ ಸಾರಿಗೆ ಕಛೇರಿ ಅಧೀಕ್ಷಕರೊಬ್ಬರು ಮೃತ ಪಟ್ಟ ಧಾರುಣ ಘಟನೆ ದಾವಣಗೆರೆ ರಿಂಗ್ ರಸ್ತೆಯಲ್ಲಿ ನಡೆದಿದೆ. ದುರ್ಮರಣ ಹೊಂದಿದ ದುರ್ದೈವಿ ಚಿಕ್ಕಮಗಳೂರು ಮೂಲದವರು ಎಂದು ತಿಳಿದು ಬಂದಿದೆ.

ದಾವಣಗೆರೆ ಆರ್ ಟಿ ಓ ಕಚೇರಿಯ ಸೂಪರಿಂಡೆಂಟ್ ತಿಪ್ಪೇಶಪ್ಪ ಮೃತ ಪಟ್ಟ ದುರ್ದೈವಿಯಾಗಿದ್ದು, ಅವರು ತೆರಳುತ್ತಿದ್ದ ಹೋಂಡಾ ಆಕ್ಟಿವಾ ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಗುದ್ದಿದ ಪರಿಣಾಮ, ಬಸ್ ನ ಹಿಂಬದಿ ಚಕ್ರವು ತಿಪ್ಪೇಶಪ್ಪನವರ ತಲೆಗೆ ಅಪ್ಪಳಿಸಿದ್ದರಿಂದ ಹೆಲ್ಮೆಟ್ ಧರಿಸಿದ್ದರೂ ಕೂಡ ತಲೆಗೆ ಬಲವಾದ ಹೊಡೆತ ಬಿದ್ದಿದ್ದು, ಹೆಲ್ಮೆಟ್ ನ ಒಳಗೆ ತಲೆ ನುಜ್ಜುಗುಜ್ಜಾಗಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿದ್ದಾರೆ ಮೃತಪಟ್ಟಿದ್ದಾರೆ.

1002465743
ಅಪಘಾತದಲ್ಲಿ ಮೃತಪಟ್ಟ ಸಾರಿಗೆ ಇಲಾಖೆ ಅಧೀಕ್ಷಕ ತಿಪ್ಪೇಶಪ್ಪ.

ಆರ್ ಟಿ ಓ ಅಧೀಕ್ಷಕ ತಿಪ್ಪೇಶಪ್ಪನವರು ದಾವಣಗೆರೆಯ ಸಾರಿಗೆ ಕಚೇರಿಯಲ್ಲಿ ಕಳೆದ ಮೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನವರಾದ ಅವರು ದಾವಣಗೆರೆಯ ಜೆ ಎಚ್ ಪಟೇಲ್ ಬಡಾವಣೆಯಲ್ಲಿ ವಾಸವಿದ್ದು, ಕಚೇರಿಗೆ ಹೊರಹೊರ್ತುಲ ರಸ್ತೆ ಮಾರ್ಗವಾಗಿ ಪ್ರತಿನಿತ್ಯ ಕಚೇರಿಗೆ ಆಗಮಿಸುತ್ತಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಸ್ಮಶಾನ ಒತ್ತುವರಿ | ಹಲವು ವರ್ಷಗಳಾದರೂ ತೆರವುಗೊಳಿಸದೆ ಅಧಿಕಾರಿಗಳ ನಿರ್ಲಕ್ಷ್ಯ

ಅಪಘಾತ ಸಂಭವಿಸುತ್ತಿದ್ದಂತೆ ಜನರು ದೌಡಾಯಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದರಾದರೂ ತೀವ್ರ ಸ್ವರೂಪದ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದರು. ಸೌಮ್ಯ ಸ್ವಭಾವದ ವ್ಯಕ್ತಿಯೆಂದೇ ಹೆಸರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

Download Eedina App Android / iOS

X