ಶಿವಮೊಗ್ಗ | ಆ. 16 ರಿಂದ 28ರ ವರೆಗೆ : “ಕರ್ನಾಟಕ ಸ್ಟಾರ್ ಸಿಂಗರ್ 2025 ಸೀಸನ್-2”

Date:

Advertisements

ಶಿವಮೊಗ್ಗ, ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಬಸವೇಶ್ವರ ಧರ್ಮ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸಂಘದ ಐದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಚಲನ ಚಿತ್ರಗೀತೆಗಳ ಗಾಯನ ಸ್ಪರ್ಧೆಯನ್ನು “ಕರ್ನಾಟಕ ಸ್ಟಾರ್ ಸಿಂಗರ್ 2025 ಸೀಸನ್-2” ಎಂಬ ಹೆಸರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದ ಸಂಘದ ಅಧ್ಯಕ್ಷ ಬಿ ಎ ಮಂಜುನಾಥ , ಕಾರ್ಯಕ್ರಮದ ಗಾಯಕ-ಗಾಯಕಿಯರ ಆಡಿಶನ್ ಆ. 16 ರಂದು ಲಯನ್ಸ್ ಕ್ಲಬ್, ಶುಗರ್ ಟೌನ್, ಇಲ್ಲಿ ನಡೆಯಲಿದೆ.

ಆಡಿಶನ್‌ನಲ್ಲಿ ಆಯ್ಕೆಯಾದ ಗಾಯಕ-ಗಾಯಕಿಯರಿಗೆ ಸೆಮಿಫೈನಲ್ ರೌಂಡ್ ‌ಆ. 17-08-2025 ರಂದು ಲಯನ್ಸ್ ಕ್ಲಬ್, ಜೆ.ಟಿ.ಎಸ್. ಸ್ಕೂಲ್ ಪಕ್ಕ, ಶುಗರ್ ಟೌನ್. ಇಲ್ಲಿ ಸೆಮಿಫೈನಲ್‌ ನಡೆಯಲಿದೆ ಎಂದರು.

Advertisements

ಸೆಮಿಫೈನಲ್‌ನಲ್ಲಿ ಆಯ್ಕೆಯಾದ ಗಾಯಕ-ಗಾಯಕಿಯರಿಗೆ ರಾಜ್ಯ ಮಟ್ಟದ ಚಲನಚಿತ್ರಗೀತೆಗಳ ಫೈನಲ್ ಮತ್ತು ಗ್ರಾಂಡ್ ಫಿನಾಲೆ ಸ್ಪರ್ಧೆಯು ಆ. 24 ರ ಭಾನುವಾರ ಬಸವೇಶ್ವರ ಸಭಾ ಭವನ ಸಿದ್ಧರೂಢನಗರ, ಭದ್ರಾವತಿಯಲ್ಲಿ ನಡೆಯಲಿದೆ. ವಿಜೇತರಾದವರಿಗೆ ಪ್ರಥಮ ಬಹುಮಾನ 25000/- ನಗದು ಮತ್ತು ಪಾರಿತೋಷಕ. ದ್ವೀತಿಯ ಬಹುಮಾನ 15000/- ನಗದು ಮತ್ತು ಪಾರಿತೋಷಕ. ತೃತೀಯ ಬಹುಮಾನ 10000/- ನಗದು ಮತ್ತು ಪಾರಿತೋಷಕ. ಸಮಾಧಾನಕರ ಬಹುಮಾನ 2000/- ಭಾಗವಹಿಸಿದ ಎಲ್ಲಾ ಗಾಯಕ ಗಾಯಕಿಯರಿಗೆ ಸರ್ಟಿಫೀಕೆಟ್‌ಗಳನ್ನು ನೀಡಕಾಗುವುದು ಎಂದರು.

ಇದೇ ಕಾರ್ಯಕ್ರಮದಲ್ಲಿ ಇಬ್ಬರು ಹಿರಿಯ ಕಲಾವಿದರಿಗೆ ದಿ॥ ಜಯಶೀಲನ್ ರಾಜ್ಯಪ್ರಶಸ್ತಿ ಮತ್ತು ದಿ| ಗೀತಾಂಜಲಿ ಶ್ರೀನಿವಾಸ್‌ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು, ಹಾಗೂ ಸಂಘದ ಹಿರಿಯ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ, ಕಲಾವಿದರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿ.ಯು.ಸಿ.ಯಲ್ಲಿ ಅತಿಹೆಚ್ಚು ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ವೈ ಕೆ ಹನುಮಂತಯ್ಯ, ಚರಣ್ ಕವಾಡ್, ಚಿದಾನಂದ, ಪ್ರಶಾಂತ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X