ರಾಯಚೂರು | ಪ್ರೀತಿ ವಿಚಾರದಲ್ಲಿ ಯುವಕನ ಹತ್ಯೆ ಖಂಡಿಸಿ – ಸಾಲಿಡಾರಿಟಿ ಪ್ರತಿಭಟನೆ

Date:

Advertisements

ಕೊಪ್ಪಳದಲ್ಲಿ ನಡೆದ ಪ್ರೀತಿ ವಿಚಾರಕ್ಕೆ ಸಂಬಂಧಿಸಿದ ಕೊಲೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸಿಂಧನೂರು ಘಟಕದ ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ವತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

ಮಾನವೀಯ ಮೌಲ್ಯಗಳನ್ನು ಹಾಳುಮಾಡುವ ಇಂತಹ ಕ್ರೂರ ಘಟನೆಗಳು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತವೆ. ಇಂತಹ ಅಹಿತಕರ ಘಟನೆಗಳು ನಡೆಯದಂತೆ ನಿಗಾವಹಿಸಬೇಕು ಎಂದು ಒತ್ತಾಯಿಸಿದರು.

ಆರೋಪಿಗಳು ಗಾಂಜಾ ಸೇವನೆಯ ನಶೆಯಲ್ಲಿ ಕೃತ್ಯ ಎಸಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೂಡಲೇ ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು.

1000165913

ಇಂತಹ ಘಟನೆಯಿಂದ ಸೌಹಾರ್ದತೆಗೆ ಧಕ್ಕೆ ಉಂಟಾಗದಂತೆ, ಪ್ರಚೋದನೆಯಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು. ಸಮಾಜದಲ್ಲಿ ಮೇಲಾಗುವ ಪ್ರಭಾವವನ್ನು ಗಮನದಲ್ಲಿಟ್ಟುಕೊಂಡು ನಿಗಾ ಹಾಗೂ ಭದ್ರತೆ ವಹಿಸಬೇಕು ಎಂದು ಸಂಘಟನಾಕಾರರು ಆಕ್ರೋಶಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳಮೀಸಲಾತಿ ಜಾರಿಗೆ ಒತ್ತಾಯ – ಬೈಕ್ ರ್ಯಾಲಿ ಮೂಲಕ ಪ್ರತಿಭಟನೆ

ಈ ವೇಳೆ ಸಂಘಟನೆ ತಾಲ್ಲೂಕು ಮುಖಂಡ ಅಬುಸಲೈ ನಾಯ್ಕ , ಇಮ್ತಿಯಾಜ್, ಮನ್ಸೂರು ಅತ್ತಾರ, ಮೆಹಬೂಬ್ ಖಾನ್, ಕರ್ನಾಟಕ ಜನಶಕ್ತಿ ಮುಖಂಡ ಬಸವರಾಜ್ ಬಾದರ್ಲಿ, ಚಿಟ್ಟಿಬಾಬು, ಮಹಾವೀರ ಜೈನ್, ಬಾಬರ ಪಾಷಾ, ಜಾಫರ್ ಅಲಿ, ನದೀಮುಲ್ಲಾ , ಡಾ.ವಸೀಂ, ನೈಮ ಇರ್ಫಾನ್ ,ಇನ್ನಿತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X