ಉಡುಪಿ | ಧರ್ಮಸ್ಥಳದ ವಿಷಯದಲ್ಲಿ ರಾಜಕೀಯ ಲಾಭಕ್ಕಾಗಿ ಶಾಸಕರಿಂದ ಕೋಮು ಸಂಘರ್ಷ – ನಾಗೇಂದ್ರ ಪುತ್ರನ್

Date:

Advertisements

ಧರ್ಮಸ್ಥಳ ವಿಚಾರದಲ್ಲಿ ಪಕ್ಷಾತೀತವಾಗಿ ನಡೆಯುತ್ತಿರುವ ತನಿಖೆಯನ್ನು ಕೋಮು ಸಂಘರ್ಷ ಮಾಡಲು ಹೊರಟು ಕಾರ್ಕಳ ಹಾಗೂ ಉಡುಪಿ ಶಾಸಕರು ರಾಜಕೀಯ ಲಾಭ ಪಡೆದು ಕೊಳ್ಳಲು ಪ್ರಯತ್ನಿಸುತ್ತಿರುವುದು ಹಿಂದೂ ಧರ್ಮಕ್ಕೆ ಮಾಡಿದ ದೊಡ್ಡ ಅಪಮಾನ.

ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ನಮ್ಮ ಪವಿತ್ರ ಕ್ಷೇತ್ರದ ಬಗ್ಗೆ ನಾವು ಅಗಾದವಾದ ನಂಬಿಕೆ ಇಟ್ಟು ಕೊಂಡವರು.
ಇಲ್ಲಿ ಯಾವುದೇ ಪಕ್ಷ ಬರೋದಿಲ್ಲ, ಶಾಸಕ ಸುನಿಲ್ ಕುಮಾರ್ ಹಾಗೂ ಯಶ್ಪಾಲ್ ಸುವರ್ಣ ಹುಟ್ಟುವ ಮೊದಲೇ ಪಕ್ಷತೀತವಾಗಿ ಧರ್ಮಸ್ಥಳ ಕ್ಷೇತ್ರಕ್ಕೆ ಗೌರವ ಕೊಟ್ಟು ಹಿಂದೂ ಧರ್ಮದ ಪರಂಪರೆಯನ್ನು ಉಳಿಸಿ ಕೊಂಡು ಬಂದವರು ಹಿಂದೂಗಳು.

ಈ ಇಬ್ಬರು ಶಾಸಕರು ರಾಜಕೀಯ ಮಾಡಲೆಂದು ಹುಟ್ಟಿಕೊಂಡಿರುವ ಹಾಗೆ ಇದೆ. ಇವರಿಗೆ ಧರ್ಮದ ಮೇಲೆ ಗೌರವ ಇಲ್ಲ ಅಧಿಕಾರದ ಮೇಲೆ ವ್ಯಾಮೋಹ ಇರುವುದರಿಂದ ಧರ್ಮಸ್ಥಳ ವಿಚಾರವನ್ನು ಬೇರೆ ಬೇರೆ ಪಕ್ಷದ ತಲೆಗೆ ಕಟ್ಟುವ ಹೇಳಿಕೆ ನೀಡುತ್ತಿದ್ದಾರೆ.

Advertisements

ಧರ್ಮಸ್ಥಳ ಮಂಜುನಾಥ ಹಾಗೂ ಅಣ್ಣಪ್ಪ ಸ್ವಾಮಿ ಬಗ್ಗೆ ನಮಗೆ ಹಾಗೂ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಅಗಾದವಾದ ನಂಬಿಕೆ ಮತ್ತು ಭಕ್ತಿ ಇದೆ. ಆದರೆ ನಿಮ್ಮ ಈ ಹೊಲಸು ಹೇಳಿಕೆಗಳು ನಿಮ್ಮ ದುಷ್ಟ ಬುದ್ದಿಯನ್ನು ಸಮಾಜದ ಮುಂದೆ ತೋರಿಸುತ್ತಿದೆ.

ಸುನಿಲ್ ಕುಮಾರ್ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಮೊದಲು ಉಮ್ಮಿ ಕಲ್ಲು ಬೆಟ್ಟವನ್ನು ಬೈಲೂರಿನಲ್ಲಿ ನಿಂತು ಒಮ್ಮೆ ನೋಡಲಿ ಆಗ ಹಿಂದೂ ಧರ್ಮಕ್ಕೆ ಮಾಡಿದ ಅಪಮಾನ ಅರಿವು ಆಗಬಹುದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಕೋಟ ನಾಗೇಂದ್ರ ಪುತ್ರನ್ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X