ಮತಗಳ್ಳತನ | ಚುನಾವಣಾ ಆಯೋಗ ಬಿಜೆಪಿ ಏಜೆಂಟ್: ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

Date:

Advertisements

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರದಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.

ಈ ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಕಾಂಗ್ರೆಸ್‌ ಕಾರ್ಯಕರ್ತರು ಬಂದಿದ್ದರು. ಈ ವೇಳೆ ಈದಿನ ಡಾಟ್‌ ಕಾಮ್ ಜೊತೆಗೆ ಮಾತನಾಡಿದ ಹಲವರು, “ಬಿಜೆಪಿ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳು ಸೇರಿಕೊಂಡು ಈ ಸಂಚನ್ನು ರೂಪಿಸಿದ್ದಾರೆ. ಹಾಗಾಗಿ, ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದ್ದಾರೆ.

WhatsApp Image 2025 08 08 at 1.50.58 PM

ಬಸವನಗುಡಿಯಿಂದ ಬಂದಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡರೋರ್ವರು ಮಾತನಾಡಿ, “ರಾಹುಲ್ ಗಾಂಧಿಯವರ ಹೋರಾಟಕ್ಕೆ ನಮ್ಮ ಬೆಂಬಲ ನೀಡಲು ಬಂದಿದ್ದೇವೆ. ಈ ಹಿಂದೆ ಶೇಷನ್ ಅವರಂತಹ ಪ್ರಾಮಾಣಿಕ ಅಧಿಕಾರಿಗಳು ಚುನಾವಣಾ ಆಯೋಗದಲ್ಲಿ ಕೆಲಸ ಮಾಡಿದ್ದಾರೆ. ಆದರೆ, ಈಗಿನ ಕೆಲವು ಅಧಿಕಾರಿಗಳು ಬಿಜೆಪಿಯ ಕೇಂದ್ರ ಕಚೇರಿಯಿಂದ ನಿಯೋಜಿಸಲ್ಪಡುತ್ತಿದ್ದಾರೆ. ಒಂದು ರೀತಿಯಲ್ಲಿ ಏಜೆಂಟ್ ಥರ ಕೆಲಸ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಡಿವಾಣ ಹಾಕಬೇಕಾದರೆ ಚುನಾವಣಾ ಆಯೋಗದ ಬಗ್ಗೆ ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದರು.

Advertisements

ಮೈಸೂರಿನಿಂದ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತ ಮಾತನಾಡಿ, “ಪ್ರಧಾನಿ ಮೋದಿ, ಚುನಾವಣಾ ಆಯೋಗವೂ ಒಳಗೊಂಡಂತೆ ಮತಗಳ್ಳತನದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು. ಮಹದೇವಪುರದಲ್ಲಿ 1 ಲಕ್ಷ ಮತಗಳವು ಆಗಿರುವುದಾಗಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು. ಮುಂದಿನ ದಿನಗಳಲ್ಲಿ ಚುನಾವಣೆಗೂ ಮೊದಲು ಕಾಂಗ್ರೆಸ್ ಕಾರ್ಯಕರ್ತರು ಎಲ್ಲವನ್ನೂ ಹೆಚ್ಚು ಜಾಗರೂಕತೆಯಿಂದ ಪರಿಶೀಲನೆ ನಡೆಸುತ್ತೇವೆ” ಎಂದು ತಿಳಿಸಿದರು.

ಬ್ಯಾಟರಾಯನಪುರದಿಂದ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತೆ ಮಾತನಾಡಿ, “ದಾಖಲೆ ಇಟ್ಟುಕೊಂಡೇ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ, ಅಕ್ರಮ ನಡೆದಿರುವುದು ಸ್ಪಷ್ಟ. ಜನರು ಈ ಬಗ್ಗೆ ಜಾಗೃತರಾಗಬೇಕು. ತಮ್ಮ ವೋಟನ್ನು ಬೇರೆಯವರು ಹಾಕದಂತೆ ನೋಡಿಕೊಳ್ಳಬೇಕು” ಎಂದು ತಿಳಿಸಿದರು.

WhatsApp Image 2025 08 08 at 1.47.45 PM

ಪುಲಕೇಶಿನಗರದಿಂದ ಬಂದಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡರೋರ್ವರು ಮಾತನಾಡಿ, “ಮೋದಿ ಹವಾ ಅಂತ ಚುನಾವಣಾ ಸಮಯದಲ್ಲಿ ಬೊಗಳೆ ಬಿಡಲಾಗುತ್ತಿದೆ. ಮೋದಿ ಹವಾ ಏನೂ ಇಲ್ಲ. ಇದೆಲ್ಲ ಚೋರ್ ಹವಾ ಇದು. ಎಲೆಕ್ಷನ್ ಕಮಿಷನ್ ಹಾಗೂ ಬಿಜೆಪಿಗೆ ಧಿಕ್ಕಾರ ಹೇಳುತ್ತೇವೆ” ಎಂದು ಆಕ್ರೋಶ ಹೊರಹಾಕಿದರು.

ಈ ದಿನ ಡಾಟ್‌ ಕಾಮ್ ಜೊತೆಗೆ ಮಾತನಾಡಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, “ಇಡಿ, ಸಿಬಿಐ ಸೇರಿದಂತೆ ಕೇಂದ್ರದ ಸಂಸ್ಥೆಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಅದೇ ರೀತಿ ಚುನಾವಣಾ ಆಯೋಗವನ್ನೂ ಕೂಡ ಬಿಜೆಪಿಯವರು ಬಳಸಿಕೊಳುತ್ತಿದ್ದಾರೆ. ಇದರ ಬಗ್ಗೆ ಜನರು ಜಾಗೃತರಾಗಬೇಕು” ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಬರುತ್ತಿದ್ದ ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿದ ಪೊಲೀಸರು

ಇನ್ನು ಫ್ರೀಡಂ ಪಾರ್ಕಿನಲ್ಲಿ ಭದ್ರತೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್‌ ಅನ್ನು ಮಾಡಲಾಗಿತ್ತು. ಪ್ರತಿಭಟನಾ ಸ್ಥಳದ ಸುತ್ತಲೂ ಕಾಂಗ್ರೆಸ್‌ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿತ್ತು.

ಎರಡು ಕಡೆ ನಿರ್ಮಿಸಲಾಗಿದ್ದ ಪ್ರವೇಶ ದ್ವಾರಗಳ ಬಳಿ ಮಾಧ್ಯಮದ ಪ್ರತಿನಿಧಿಗಳೂ ಸೇರಿದಂತೆ ಸಭಾಂಗಣಕ್ಕೆ ಬರುತ್ತಿದ್ದ ಪ್ರತಿಯೊಬ್ಬರನ್ನೂ ಕೂಡ ಪೊಲೀಸರು ತಪಾಸಣೆ ನಡೆಸುತ್ತಿದ್ದ ದೃಶ್ಯ ಕಂಡು ಬಂತು. ಮಹಿಳೆಯರಿಗೆ ಸಭಾಂಗಣದ ಒಳಗೆ ಪ್ರವೇಶಿಸಲು ವಿಶೇಷವಾಗಿ ಬೇರೆಯದೇ ಪ್ರವೇಶದ್ವಾರವನ್ನು ಕೂಡ ಪೊಲೀಸರು ಮಾಡಿದ್ದರು.

ಬಾಟಲ್

ಕೇವಲ ತಪಾಸಣೆ ಮಾತ್ರವಲ್ಲದೇ, ಕೈಯ್ಯಲ್ಲಿದ್ದ ಗುಟ್ಕಾ ಪಾಕೆಟ್, ನೀರಿನ ಬಾಟಲ್, ಪ್ಲೆ ಕಾರ್ಡ್‌ಗಳನ್ನೂ ಕೂಡ ಸಭಾಂಗಣದೊಳಗೆ ಕೊಂಡೊಯ್ಯಲು ಪೊಲೀಸರು ಅನುಮತಿಸಲಿಲ್ಲ. ಈ ಹಿನ್ನೆಲೆಯಲ್ಲಿ ದೊಡ್ಡ ದೊಡ್ಡ ಪ್ಲೆಕಾರ್ಡ್‌ ಇಟ್ಟುಕೊಂಡು ಉತ್ಸಾಹದಿಂದ ಬಂದಿದ್ದ ಕೆಲವು ಕಾರ್ಯಕರ್ತರಿಗೆ ನಿರಾಸೆಯಾಯಿತು. ಫ್ರೀಡಂ ಪಾರ್ಕಿನ ಕಟ್ಟೆಯ ಬಳಿ ಪ್ಲೆ ಕಾರ್ಡ್, ಕಾಂಗ್ರೆಸ್ ಬಾವುಟಗಳ ರಾಶಿಯೇ ಬಿದ್ದಿದ್ದು ಕಂಡು ಬಂತು.

WhatsApp Image 2025 08 08 at 1.47.45 PM 2

ಬೃಹತ್ ಪ್ರಮಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೆರೆದಿದ್ದರಿಂದ ಫ್ರೀಡಂ ಪಾರ್ಕಿನಿಂದ ಮೆಜೆಸ್ಟಿಕ್‌ನವರೆಗೆ ಸ್ವಲ್ಪಮಟ್ಟಿಗೆ ಟ್ರಾಫಿಕ್ ಜಾಮ್ ಉಂಟಾದದ್ದು ಕಂಡುಬಂತಾದರೂ, ವಾಹನಗಳು ರಸ್ತೆಯ ಬದಿಗಳಲ್ಲಿ ಪಾರ್ಕಿಂಗ್ ಮಾಡದಂತೆ ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸುತ್ತಿದ್ದರು. ಅಲ್ಲಲ್ಲಿ ಪಾರ್ಕಿಂಗ್ ಮಾಡಿ ತೆರಳಿದ್ದ ವಾಹನಗಳಿಂದ ಸಮಸ್ಯೆಯಾದಾಗ ಟೋಯಿಂಗ್ ಮಾಡಿ, ಪೊಲೀಸರೇ ತೆರವುಗೊಳಿಸಿದರು.

mm
WhatsApp Image 2025 08 08 at 1.47.45 PM 3
WhatsApp Image 2025 08 08 at 1.47.45 PM 4
Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

Download Eedina App Android / iOS

X