ಸಿಂಧನೂರು | ಮುಕ್ಕುಂದಾ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ಸೌಲಭ್ಯಗಳ ಅಭಾವ – ದಲಿತ ಸೇನೆ ಒತ್ತಾಯ

Date:

Advertisements

ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಕಳೆದ 15 ವರ್ಷಗಳಿಂದ ಶವಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ದಲಿತ ಸೇನೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಶವ ಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ನಿಗದಿಯಾಗಿರುವ ಸ್ಥಳ ಕೇವಲ ದಾಖಲೆಗಳಲ್ಲಿ ಮಾತ್ರ ಸೀಮಿತವಾಗಿದೆ. ಇಂದಿಗೂ ಕೂಡ ಗ್ರಾಮಸ್ಥರು ತುಂಗಭದ್ರಾ ನದಿಯನ್ನು ದಾಟಿ ಶವಸಂಸ್ಕಾರ ಮಾಡುವ ದಾರುಣ ಪರಿಸ್ಥಿತಿಯೊಳಗಿದ್ದಾರೆ. ನದಿಯ ಪ್ರವಾಹದ ವೇಳೆಯಲ್ಲಿ ಇದು ಜೀವಪಣಕ್ಕಿಟ್ಟು ನಡೆಯುವ ಶವಸಂಸ್ಕಾರವಾಗಿ ಮಾರ್ಪಡುತ್ತಿದೆ.

ಡಿಜಿಟಲ್ ಯುಗ, ಸುಧಾರಿತ ಕರ್ನಾಟಕದ ಘೋಷಣೆಗಳನ್ನು ನಂಬಿ ನಿರೀಕ್ಷೆಯಲ್ಲಿ ಇರುವ ಈ ಗ್ರಾಮಸ್ಥರು ಇಂದು ಸಹ ಅಮಾನವೀಯ ಪರಿಸ್ಥಿತಿಯಲ್ಲಿ ಮೃತರ ಅಂತಿಮ ಸಂಸ್ಕಾರ ಮಾಡುತ್ತಿದ್ದಾರೆ. ಇದು ಆಡಳಿತದ ನಿರ್ಲಕ್ಷ್ಯವೇ? ಅಥವಾ ಪ್ರಭಾವಿಗಳ ಅಕ್ರಮದ ಪರಿಣಾಮವೇ ಎಂದು ಪ್ರಶ್ನಿಸಿದರು.

Advertisements

ಗ್ರಾಮಕ್ಕೆ ಶವಸಂಸ್ಕಾರಕ್ಕೆ ಸೂಕ್ತ ಸ್ಥಳ, ರಸ್ತೆ ಸಂಪರ್ಕ, ಹಾಗೂ ಮೂಲಭೂತ ಸೌಲಭ್ಯಗಳನ್ನು ನೀಡಬೇಕು ಎಂಬ ಬೇಡಿಕೆ ವರ್ಷಗಳಿಂದ ಅಲಕ್ಷ್ಯವಾಗುತ್ತಿದೆ. ಇಂತಹ ದುಸ್ಥಿತಿಯಲ್ಲಿ ಕಾನೂನು ಬದ್ಧವಾಗಿ ಕ್ರಮ ಕೈಗೊಂಡು ಗ್ರಾಮಸ್ಥರಿಗೆ ಮಾನವೀಯ ಸೌಲಭ್ಯ ಒದಗಿಸುವುದು ಅತಿ ಅಗತ್ಯವಾಗಿದೆ

ಮುಕುಂದಾ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ನಿಗದಿತ ಜಾಗವನ್ನು ನಿಖರವಾಗಿ ಗಡಿ ಗುರುತಿಸಿ ಭೌತಿಕವಾಗಿ ಹಸ್ತಾಂತರಿಸಬೇಕು. ಶವಸಂಸ್ಕಾರ ಸ್ಥಳಕ್ಕೆ ರಸ್ತೆ ಸಂಪರ್ಕ, ಶೆಡ್, ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಒದಗಿಸಬೇಕು. ನದಿಯ ಪ್ರವಾಹದ ಸಂದರ್ಭದಲ್ಲಿ ಶವ ಸಾಗಣೆ ಇತ್ಯಾದಿ ಅವ್ಯವಹಾರ ತಪ್ಪಿಸಲು ತಾತ್ಕಾಲಿಕ ಬೋಟು ಪರವಾನಗಿ ನೀಡುವುದು ಅಥವಾ ಸೇತುವೆ ನಿರ್ಮಾಣದ ಪ್ರಸ್ತಾವನೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪ್ರೀತಿ ವಿಚಾರದಲ್ಲಿ ಯುವಕನ ಹತ್ಯೆ ಖಂಡಿಸಿ – ಸಾಲಿಡಾರಿಟಿ ಪ್ರತಿಭಟನೆ

ಈ ವೇಳೆ ಸುರೇಶ್ ಬಾಬು, ಬಾಬಾಬಾವುದ್ದೀನ್ ,ಬಾಬುರಾವ್, ತಾಜುದ್ದೀನ್ , ರಾಜಸಾಬ್ , ಶಾಂತಕುಮಾರ್ ಕುರುಡಿ, ದಲಿತ ಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಜಾವಿದ್ ಖಾನ್, ದಲಿತ ಸೇನೆ ಜಿಲ್ಲಾಧ್ಯಕ್ಷರು ಮಾರುತಿ ಚಿಕ್ಕ ಸ್ಕೋರ್, ಅನೇಕ ಕಾರ್ಯಕರ್ತರು ಸಮಾಜ ಮುಖಂಡರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X