ಜೋಗ್ ಫಾಲ್ಸ್‌ನ ನಿಷೇಧಿತ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣ; ಯೂಟ್ಯೂಬರ್, ಗೈಡ್ ವಿರುದ್ಧ ದೂರು

Date:

Advertisements

ವಿಶ್ವವಿಖ್ಯಾತ ಜೋಗ್ ಜಲಪಾತದ ನಿಷೇಧಿತ ಮತ್ತು ಅತ್ಯಂತ ಅಪಾಯಕಾರಿ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಆರೋಪದ ಮೇಲೆ ಯೂಟ್ಯೂಬರ್ ಸೇರಿದಂತೆ ಇಬ್ಬರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಮೂಲದ ಯೂಟ್ಯೂಬರ್ ಗೌತಮ್ ಅರಸು ಮತ್ತು ಅವರಿಗೆ ಮಾರ್ಗದರ್ಶನ ನೀಡಿದ ಸೊರಬ ಮೂಲದ ಗೈಡ್ ಸಿದ್ದರಾಜ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದಾರೆ. ಕಳೆದ ಜುಲೈ 6ರಂದು ಗೌತಮ್ ಅರಸು, ಗೈಡ್ ಸಿದ್ಧರಾಜ್ ಅವರ ಸಹಾಯದಿಂದ ಜೋಗ ಜಲಪಾತ ಬೀಳುವ ಅತ್ಯಂತ ಅಪಾಯಕಾರಿ ರಾಜಾ ಫಾಲ್ಸ್‌ನ ಬಂಡೆಯ ಮೇಲೆ ಹೋಗಿ ವಿಡಿಯೋ ಚಿತ್ರೀಕರಿಸಿದ್ದಾರೆ. ಈ ಪ್ರದೇಶದಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದ್ದರೂ, ನಿಯಮ ಉಲ್ಲಂಘಿಸಿ ಈ ಕೃತ್ಯ ಎಸಗಿದ್ದಾರೆ.

WhatsApp Image 2025 08 08 at 12.46.33 PM

“ಸ್ಲಿಪ್ ಆದರೆ ಗೋವಿಂದ” ಮತ್ತು “ಸಾಯೋದರೊಳಗೆ ನೋಡು ಒಮ್ಮೆ ಜೋಗದ ಗುಂಡಿ” ಎಂಬಂತಹ ಪ್ರಚೋದನಕಾರಿ ಶೀರ್ಷಿಕೆ ಮತ್ತು ಸಂಭಾಷಣೆಗಳೊಂದಿಗೆ ಈ ವಿಡಿಯೋವನ್ನು ‘Gowtham Naidu’ ಎಂಬ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಇದು ಇತರ ಪ್ರವಾಸಿಗರಿಗೂ ಅಪಾಯಕಾರಿ ಸಾಹಸಗಳಿಗೆ ಪ್ರೇರಣೆ ನೀಡುವ ಸಾಧ್ಯತೆ ಇರುವುದರಿಂದ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

Advertisements

ಇದನ್ನೂ ಓದಿ: ಈ ದಿನ ಸಂಪಾದಕೀಯ | ಪಾಠ ಕಲಿಯದ ಪ್ರಜ್ವಲ್‌, ಕಲಿಸಿದ್ದು ಯಾರಿಗೆ?

ನಿನ್ನೆ (ಆ.7) ಸಿದ್ದಾಪುರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಶಾಂತಿನಾಥ ಕೆ. ಪಾಸಾನೆ ಅವರು ಸರ್ಕಾರದ ಪರವಾಗಿ ಯೂಟ್ಯೂಬರ್ ಮತ್ತು ಗೈಡ್ ವಿರುದ್ಧ ದೂರು ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X