ಮಾಲೂರು | ವರ್ಗಾ ಅಟ್ಯಾಚ್ಮೆಂಟ್ ಕಾರ್ಖಾನೆ ಮುಚ್ಚದಂತೆ ಸಿಐಟಿಯು ಒತ್ತಾಯ

Date:

Advertisements

ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ವರ್ಗಾ ಅಟ್ಯಾಚ್ಮೆಂಟ್ ಕಾರ್ಖಾನೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ನಷ್ಟವನ್ನು ತೋರಿಸಿ ಅಕ್ರಮವಾಗಿ ಕಾರ್ಖಾನೆಯನ್ನು ಮುಚ್ಚಲು ಹೊರಟಿದ್ದಾರೆ. ಕೂಡಲೇ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಯಾವುದೇ ಕಾರಣಕ್ಕೂ ಕಾರ್ಖಾನೆ ಮುಚ್ಚದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಹೆಚ್ ಎನ್ ಗೋಪಾಲಗೌಡ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸುಮಾರು 20 ವರ್ಷದಿಂದ ಕಾರ್ಮಿಕರಾಗಿ ವರ್ಗಾ ಕಾರ್ಖಾನೆಯಲ್ಲಿ ದುಡಿಯುತ್ತಿದ್ದ ಕಾರ್ಮಿಕರನ್ನು ಮಾಲೀಕ ವರ್ಗವು ಏಕಾಏಕಿ ಹೊರಹಾಕಲು ಮುಂದಾಗಿದೆ. ನಷ್ಟದ ನೆಪದಲ್ಲಿ ಕೈಗಾರಿಕೆ ಮುಚ್ಚಲು ಹೊರಟಿದ್ದಾರೆ. ಸುಮಾರು 81 ಖಾಯಂ ಕಾರ್ಮಿಕರನ್ನು ಕೆಲಸದಿಂದ ಹೊರಹಾಕಲು ಮುಂದಾಗಿದ್ದು ಇದು ಕಾರ್ಮಿಕ ವಿರೋಧಿಯಾಗಿದೆ. ಕೂಡಲೇ ಕಾರ್ಖಾನೆಯನ್ನು ಮುಚ್ಚುವ ಆದೇಶವನ್ನು ವಾಪಸು ಪಡೆದು ಕಾರ್ಮಿಕರ ಹಿತ ಕಾಪಾಡುವಂತೆ ಸಂಬಂಧಿಸಿದವರು ಮಾಲೀಕರನ್ನು ಒತ್ತಾಯಿಸಬೇಕಾಗಿದೆ” ಎಂದರು.

ಈ ಕೈಗಾರಿಕೆಯಲ್ಲಿ ಬುಲ್ಡೋಜರ್ಗೆ ಬೇಕಾಗುವ ಬಿಡಿ ಭಾಗಗಳನ್ನು ತಯಾರಿಸಿ ವಿದೇಶಕ್ಕೆ ಕಳಸಲಾಗುತ್ತದೆ. ಇದರಿಂದ ಕಂಪನಿ ಲಾಭದಾಯಕವಾಗಿಯೇ ನಡೆಯುತ್ತಿದೆ. ಕಂಪನಿಯನ್ನು ಮೂರು ಹೆಸರಿನಲ್ಲಿ ವಿಂಗಡಿಸಲಾಗಿದೆ ವರ್ಗಾ, 1 ವರ್ಗಾ, 2 ವೀರ್ಯ ಎಂದು ನಾಮಕಾರಣ ಮಾಡಿಕೊಂಡು ಖಾಯಂ ಕಾರ್ಮಿಕರನ್ನು ಕೆಲಸಕ್ಕೆ ರಾಜೀನಾಮೆ ಕೊಡಿಸಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಹುನ್ನಾರಗಳಾಗಿವೆ. ಈ ಮೂರು ಕೈಗಾರಿಕೆಗಳ ಮಾಲೀಕರು ಒಂದೇ ಕುಟುಂಬದವರು ಪಾಲುದಾರಿಕೆಯಲ್ಲಿ ನಡೆಯುತ್ತಿದೆ” ಎಂದು ಆರೋಪಿಸಿದರು.

Advertisements

ಇದನ್ನೂ ಓದಿ: ಕೋಲಾರ | ವ್ಯಸನಮುಕ್ತ ಸಮಾಜಕ್ಕೆ ಎಲ್ಲರೂ ಕೈ ಜೋಡಿಸಿ: ಜಿಲ್ಲಾಧಿಕಾರಿ ಎಂ ಆರ್ ರವಿ

“ಈಗಾಗಲೇ ಕಂಪನಿಯನ್ನು ಮುಚ್ಚದಂತೆ ಕ್ರಮ ವಹಿಸಿ ಕಾರ್ಮಿಕರ ರಕ್ಷಣೆ ಮಾಡುವಂತೆ ಮನವಿ ಹೋರಾಟಗಳನ್ನು ನಡೆಸಲಾಗಿದೆ. ಕೂಡಲೇ ಜಿಲ್ಲಾಧಿಕಾರಿ ಮಾಲೀಕ ವರ್ಗವನ್ನು ಕರೆಸಿ ವರ್ಗ ಕಾರ್ಖಾನೆಯಲ್ಲಿ ದುಡಿಯುತ್ತಿರುವ ಖಾಯಂ ಕಾರ್ಮಿಕರಿಗೆ ಕೈಗಾರಿಕೆಯಲ್ಲಿ ಕೆಲಸದಲ್ಲಿ ಮುಂದುವರೆಸುವಂತೆ ಕ್ರಮ ವಹಿಸಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಯಲಿದೆ” ಎಂದು ಎಚ್ಚರಿಕೆ ನೀಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಕಾರ್ಖಾನೆಯ ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಪ್ರಭಾಕರ್, ಶ್ರೀಧರ್ ರಾವ್, ಅಂಜನಪ್ಪ, ಹರೀಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X