ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

Date:

Advertisements

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗಬಹುದು ಎಂಬ ಊಹಾಪೋಹಗಳು ತಳ್ಳಿಹಾಕಲ್ಪಟ್ಟಿವೆ. ಆಯೋಜಕರ ಮೂಲಗಳ ಪ್ರಕಾರ, ಪಂದ್ಯ ನಿಗದಿಯಂತೆ ನಡೆಯಲಿದೆ.

ಸೆಪ್ಟೆಂಬರ್‌ 9ರಿಂದ ಆರಂಭವಾಗುವ ಏಷ್ಯಾಕಪ್‌ನಲ್ಲಿ, ಎ ಗುಂಪಿನಲ್ಲಿರುವ ಭಾರತ ತನ್ನ ಮೊದಲ ಪಂದ್ಯವನ್ನು ಸೆ.10ರಂದು ಯುಎಇ ವಿರುದ್ಧ ಆಡಲಿದೆ. ಭಾರತ–ಪಾಕಿಸ್ತಾನ ನಡುವಿನ ಪಂದ್ಯ ಸೆ.14ರಂದು ದುಬೈನಲ್ಲಿ ನಡೆಯಲಿದೆ. 2024ರ ಟಿ20 ವಿಶ್ವಕಪ್‌ನಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದವು.

ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್‌ ಪಂದ್ಯವನ್ನು ಆಡಬಾರದು ಎಂದು ಸಂಸದರೂ ಸೇರಿದಂತೆ ಹಲವರು ಒತ್ತಡ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಮುಕ್ತಾಯವಾದ ವಿಶ್ವ ಲೆಜೆಂಡ್ಸ್‌ ಚಾಂಪಿಯನ್‌ ಶಿಪ್‌ ಪಂದ್ಯಾವಳಿಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಆಡಿರಲಿಲ್ಲ. ಹೀಗಾಗಿ ಏಷ್ಯಾಕಪ್‌ನಲ್ಲೂ ಭಾರತ ಹಿಂದೆ ಸರಿಯಬಹುದು ಎಂಬ ಗೊಂದಲಗಳು ಸೃಷ್ಟಿಯಾಗಿತ್ತು.

Advertisements

ಇದನ್ನು ಓದಿದ್ದೀರಾ? ಟೆಸ್ಟ್ ಕ್ರಿಕೆಟ್‌ನಲ್ಲಿರುವ ನಿಜವಾದ ಸೌಂದರ್ಯ ಹಾಗೂ ಭರವಸೆ ಮೂಡಿಸಿದ ಯಂಗ್ ಇಂಡಿಯಾ ಟೀಮ್

ಪಾಕಿಸ್ತಾನದ ವಿರುದ್ಧ ಭಾರತ ಆಡಬಾರದೆಂದು ರಾಜಕೀಯ ವಲಯದಲ್ಲೂ ಒತ್ತಡವಿದ್ದರೂ, ಏಷ್ಯಾಕಪ್‌ಗೆ ಹಾಗೂ ಪಾಕಿಸ್ತಾನದ ವಿರುದ್ಧ ಪಂದ್ಯವಾಡಲು ಸರ್ಕಾರದ ಅನುಮತಿ ಈಗಾಗಲೇ ದೊರೆತಿದೆ. ದುಬೈನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಭಾರತ ಹಿಂದೆ ಸರಿಯುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ, ಆ.29ರಿಂದ ಸೆ.7ರವರೆಗೆ ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ ಏಷ್ಯಾಕಪ್‌ ಹಾಕಿ ಟೂರ್ನಿಯಿಂದ ಪಾಕಿಸ್ತಾನ ಭದ್ರತೆಯ ಕಾರಣ ನೀಡಿ ಹಿಂದೆ ಸರಿಯಿತು. ಪಾಕಿಸ್ತಾನ ಆಟಗಾರರಿಗೆ ಭಾರತ ಸರ್ಕಾರ ವೀಸಾ ನೀಡಲು ಸಿದ್ಧವಿದ್ದರೂ, ಪಾಕಿಸ್ತಾನ ತಂಡ ಭಾರತ ಪ್ರವಾಸ ನಿರಾಕರಿಸಿತು ಎಂದು ಹಾಕಿ ಇಂಡಿಯಾ ತಿಳಿಸಿದೆ. ಈ ಹಾಕಿ ಟೂರ್ನಿ 2026ರ ವಿಶ್ವಕಪ್‌ ಅರ್ಹತೆ ಪಡೆಯಲು ಪ್ರಮುಖವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

ಬಾಗಲಕೋಟೆಯ ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾದ ಸ್ಟಾರ್ ಕ್ರಿಕೆಟರ್‌ ರಿಷಬ್‌ ಪಂತ್;‌ ಎಲ್ಲೆಡೆ ಮೆಚ್ಚುಗೆ

ಬಡತನದಲ್ಲಿ ಬೆಳೆದರೂ ಉನ್ನತ ಶಿಕ್ಷಣ ಪಡೆಯುವ ಕನಸು ಕಂಡಿದ್ದ ಪ್ರತಿಭಾವಂತ ವಿದ್ಯಾರ್ಥಿನಿಗೆ...

Download Eedina App Android / iOS

X