ಮುಂದುವರೆದ ಅಮಾನತು ಸರಣಿ: ಈ ಬಾರಿ ಎಎಪಿಯ ರಾಘವ್‌ ಚಡ್ಡಾ ಸರದಿ

Date:

Advertisements

ಸಂಸತ್ತಿನಲ್ಲಿ ವಿಪಕ್ಷ ಸಂಸದರ ಅಮಾನತು ಸರಣಿ ಮುಂದುವರೆದಿದ್ದು, ಈ ಬಾರಿ ಎಎಪಿಯ ರಾಜ್ಯಸಭಾ ಸದಸ್ಯ ರಾಘವ್‌ ಚಡ್ಡಾ ಅವರನ್ನು ಅಮಾನತುಗೊಳಿಸಲಾಗಿದೆ.

ಐವರು ರಾಜ್ಯಸಭಾ ಸಂಸದರ ಸಹಿಯನ್ನು ‘ಫೋರ್ಜರಿ’ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಎಎಪಿ ಸಂಸದ ರಾಘವ್ ಚಡ್ಡಾ ಅವರನ್ನು ಶುಕ್ರವಾರ(ಆಗಸ್ಟ್ 11) ಸಂಸತ್ತಿನ ಮೇಲ್ಮನೆಯಿಂದ ಅಮಾನತು ಮಾಡಲಾಗಿದೆ.

ರಾಘವ್ ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅವರನ್ನು ರಾಜ್ಯಸಭೆಯಿಂದ ಅಮಾನತಿನಲ್ಲಿ ಇಡಲಾಗಿದೆ. ಅಲ್ಲದೆ ಮತ್ತೋರ್ವ ಎಎಪಿ ಸಂಸದ ಸಂಜಯ್ ಸಿಂಗ್ ಅವರ ಅಮಾನತು ಅವಧಿಯನ್ನು ಸಹ ವಿಸ್ತರಿಸಲಾಗಿದೆ.

Advertisements

ದೆಹಲಿ ಸೇವಾ ಮಸೂದೆ ಮಸೂದೆಯನ್ನು ಆಯ್ಕೆದಾರರ ಸಮಿತಿಗೆ ಕಳಿಸಬೇಕು ಎನ್ನುವ ನಿಟ್ಟಿನಲ್ಲಿ ಸದಸ್ಯರ ಸಹಿ ಇರುವ ಪತ್ರವನ್ನು ಫೋರ್ಜರಿ ಮಾಡಿದ ಆರೋಪ ಹೊತ್ತಿರುವ ಎಎಪಿ ಸಂಸದ ರಾಘವ್‌ ಚಡ್ಡಾ ಅವರನ್ನು ರಾಜ್ಯಸಭಾ ಅಧ್ಯಕ್ಷರಾದ ಜಗದೀಪ್‌ ಧನ್‌ಕರ್‌ ಅನಿರ್ದಿಷ್ಟಾವಧಿಗೆ ಅಮಾನತು ಮಾಡಿದ್ದಾರೆ.

ವಿಶೇಷಾಧಿಕಾರ ಸಮಿತಿ ತನ್ನ ವರದಿಯನ್ನು ಸಲ್ಲಿಸುವವರೆಗೆ ಅವರನ್ನು ರಾಜ್ಯಸಭೆಯಿಂದ ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿ ವರ್ಗಾವಣೆ

ನಾಲ್ವರು ರಾಜ್ಯಸಭಾ ಸಂಸದರು ತಮ್ಮ ಅನುಮತಿಯಿಲ್ಲದೆ ತಮ್ಮ ಹೆಸರನ್ನು ಆ.7 ರಂದು ನಿರ್ಣಯದಲ್ಲಿ ರಾಘವ್‌ ಚಡ್ಡಾ ಸೇರಿಸಿದ್ದಾರೆ ಎಂದು ಹೇಳಿಕೊಂಡಿದ್ದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಬುಧವಾರ ಈ ವಿಷಯವನ್ನು ಪರಿಶೀಲಿಸಲು ವಿಶೇಷಾಧಿಕಾರ ಸಮಿತಿಗೆ ಸಂಸದರ ದೂರುಗಳನ್ನು ಕಳುಹಿಸಿದ್ದಾರೆ.

ಸಂಸದರಾದ ಸಸ್ಮಿತ್ ಪಾತ್ರ, ಎಸ್ ಫಾಂಗ್ನಾನ್ ಕೊನ್ಯಾಕ್, ಎಂ ತಂಬಿದುರೈ ಮತ್ತು ನರಹರಿ ಅಮೀನ್ ಅವರು, ಆಪ್‌ ಸಂಸದ ರಾಘವ್‌ ಚಡ್ಡಾ ನಮ್ಮನ್ನು ಕೇಳದೆ ಸದನ ಸಮಿತಿಗೆ ತಮ್ಮ ಹೆಸರನ್ನು ಸೇರಿಸಿದ್ದಾರೆ ಎಂದು ಆರೋಪಿಸಿದರು.

ಈ ನಡುವೆ, ಚಡ್ಡಾ ಅವರನ್ನು ಬಿಜೆಪಿ “ಉದ್ದೇಶಪೂರ್ವಕವಾಗಿ ಸಿಲುಕಿಸಲು ಪ್ರಯತ್ನಿಸುತ್ತಿದೆ” ಎಂದು ಎಎಪಿ ಆರೋಪಿಸಿದೆ. ರಾಘವ್ ಚಡ್ಡಾ ವಿರುದ್ಧದ ‘ನಕಲಿ ಸಹಿ’ ಆರೋಪಗಳು “ಸುಳ್ಳು ಮತ್ತು ರಾಜಕೀಯ ಪ್ರೇರಿತ” ಎಂದು ಪಕ್ಷವು ಹೇಳಿದೆ.

“ವಿವಾದಾತ್ಮಕ ಮಸೂದೆಯು ಸದನಕ್ಕೆ ಬಂದಾಗ ಮತ್ತು ಮತದಾನದ ಮೊದಲು ಈ ಮಸೂದೆಯನ್ನು ಸುದೀರ್ಘವಾಗಿ ಚರ್ಚಿಸಬೇಕೆಂದು ಸದಸ್ಯರು ಬಯಸಿದಾಗ, ಅವರು ಅದನ್ನು ಆಯ್ಕೆ ಸಮಿತಿಗೆ ಕಳುಹಿಸಲು ಶಿಫಾರಸು ಮಾಡುತ್ತಾರೆ. ಈ ಸಮಿತಿಗೆ ಸಂಸದರ ಹೆಸರನ್ನು ಪ್ರಸ್ತಾಪಿಸಲಾಗುತ್ತದೆ. ಚರ್ಚೆಯ ಭಾಗವಾಗಲು ಇಚ್ಛಿಸದವರನ್ನು ಸಮಿತಿಯು ಅವರ ಹೆಸರನ್ನು ಹಿಂಪಡೆಯಬಹುದು. ಯಾವುದೇ ಸಹಿ ಇಲ್ಲದಿರುವಾಗ ಅದನ್ನು ನಕಲಿ ಮಾಡುವುದು ಹೇಗೆ? ಎಂದು ಚಡ್ಡಾ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X