ರಾಯಚೂರು | ಗುತ್ತಿಗೆದಾರರ ಬಾಕಿ ಹಣ ಪಾವತಿಸದೇ ಇದ್ದರೆ ಹೋರಾಟ; ನಾಗಪ್ಪ ಗಿರಣಿ ಎಚ್ಚರಿಕೆ

Date:

Advertisements

ಹಿಂದಿನ ಬಿಜೆಪಿ ಸರ್ಕಾರದಂತೆ ಕಾಂಗ್ರೆಸ್ ಸರ್ಕಾರವೂ ಕೂಡ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಅನ್ಯಾಯ ಮಾಡುತ್ತಿರುವುದನ್ನು ಅನ್ಯಾಯ ಖಂಡಿಸಿ 15 ದಿನಗಳ ನಂತರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗಪ್ಪ ಗಿರಣಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಜಿಲ್ಲೆಯಲ್ಲಿ ಸರಿ ಸುಮಾರು ₹300 ಕೋಟಿಯಿಂದ ₹500 ಕೋಟಿಯಷ್ಟು ಬಾಕಿ ಹಣವನ್ನು ಗುತ್ತಿಗೆದಾರರಿಗೆ ಪಾವತಿ ಮಾಡಬೇಕು. ಆದರೆ ರಾಜ್ಯದ ಮುಖ್ಯಮಂತ್ರಿಯವರು ಬಾಕಿಬಿಲ್ ಪಾವತಿಸುವಂತೆ ಸೂಚಿಸಿದ್ದರೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಧಿಕೃತ ಆದೇಶ ನೀಡದ ಹೊರತು ಬಿಲ್ ಪಾವತಿಸುವುದಿಲ್ಲವೆಂದು ಹೇಳುತ್ತಿದ್ದಾರೆ. ಸಾಲ ಮಾಡಿ ಗುತ್ತಿಗೆ ಕೆಲಸ ಮಾಡುವ ಗುತ್ತಿಗೆದಾರರನ್ನು ಎಲ್ಲ ಸರ್ಕಾರಗಳು ಸಾಲಗಾರರನ್ನಾಗಿಸಿವೆ. ಕೆಕೆಆರ್‌ಡಿಬಿ ಒಂದರಲ್ಲಿಯೇ ₹1,957 ಕೋಟಿ ಬಾಕಿಯಿದೆ. ರಾಜ್ಯಾದ್ಯಂತ 47 ಸಾವಿರ ಕೋಟಿ ರೂ. ಬಾಕಿಯಿದೆ. ಹಿಂದಿನ ಬಿಜೆಪಿ ಸರ್ಕಾರವೂ ಗುತ್ತಿಗೆದಾರರರಿಗೆ ಬಾಕಿ ಹಣ ನೀಡದೇ ನಿರ್ಲಕ್ಷವಹಿಸಿತ್ತು” ಎಂದು ಆರೋಪಿಸಿದರು.

“ಕಾಂಗ್ರೆಸ್ ಸರ್ಕಾರ ಬಿಟ್ಟಿ ಯೋಜನೆಗಳನ್ನು ರೂಪಿಸಿ ಜಾರಿಯಲ್ಲಿ ತೊಡಗಿದೆ. ಹಣಹಾಕಿ ಮಾಡಿದ ಗುತ್ತಿಗೆದಾರರನ್ನು ಕಡೆಗಣಿಸಿದೆ” ಎಂದರು.

Advertisements

“ಬೆಂಗಳೂರಿನಲ್ಲಿ ಬಿಬಿಎಂಪಿ ಗುತ್ತಿಗೆದಾರರಿಗೆ ಬಾಕಿ ಹಣ ನೀಡದೇ ಇರುವುರಿಂದ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಸರ್ಕಾರವೇ ಹೊಣೆಯಾಗಿದೆ. ಉಪ ಮುಖ್ಯಮಂತ್ರಿ ಡಿ ಕೆ ಶಿವುಕುಮಾರ್ ಅವರು ಗುತ್ತಿಗೆದಾರರ ಕುರಿತು ಅಹಂಕಾರವಾಗಿ ಮಾತನಾಡಿರುವುದು ಖಂಡನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಆಟೋ ಚಾಲಕರ ನಿಗಮ ಮಂಡಳಿ ರಚನೆಗೆ ಒತ್ತಾಯ

ಎಲ್ಲ ಶಾಸಕರು ಗುತ್ತಿಗೆದಾರರಾಗಿಯೇ ಶಾಸಕರು, ಸಚಿವರುಗಳಾಗಿದ್ದಾರೆ. ಗುತ್ತಿಗೆದಾರರ ಸಮಸ್ಯೆ ಏನು ಎಂದು ಗೊತ್ತಿದ್ದರೂ ಬಿಲ್ ಪಾವತಿಸುತ್ತಿಲ್ಲ. ಕೂಡಲೇ ಬಾಕಿಯಿರುವ ಬಿಲ್ ಪಾವತಿಗೆ ಮುಂದಾಗಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ, ಆಂಜಿನಯ್ಯ, ಸುರೇಶ ಹೊಸೂರು, ವೀರಯ್ಯ ಸ್ವಾಮಿ ಆಶಾಪುರು, ಡಿ.ರವೀಂದ್ರ ನಾಯಕ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X