ಯಾದಗಿರಿ | ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿತ : ತಮ್ಮ ಸಾವು, ಅಣ್ಣ ಗಂಭೀರ ಗಾಯ

Date:

Advertisements

ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಹೋದರರಿಬ್ಬರಿಗೆ ಸಿಡಿಲು ಬಡಿದ ಪರಿಣಾಮ ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡ ಅಣ್ಣನನ್ನು ಆಸ್ಪತ್ರೆಗೆ ದಾಖಲಿಸಿದ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ ಜಮೀನಿನಲ್ಲಿ ಕೆಲಸ ಮಾಡುವಾಗ ಸಂಜೆ ಘಟನೆ ಜರುಗಿದ್ದು, ಘಟನೆಯಲ್ಲಿ ಪರಮಣ್ಣ(33) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಹೋದರರಿಬ್ಬರು ಹಾಗೂ ಹೆಂಡತಿ ಮಕ್ಕಳು ಎಲ್ಲರೂ ಜಮೀನಿಗೆ ತೆರಳಿದರು. ಗುಡುಗು ಸಹಿತ ಮಳೆ ಬಂದ ಹಿನ್ನೆಲೆ ಮರದ ಕೆಳಗೆ ಕುಳಿತ ವೇಳೆ ಸಿಡಿಲು ಬಡಿದಿದೆ ಎನ್ನಲಾಗಿದೆ.

ವಿಷಯ ತಿಳಿದು ಕಾಂಗ್ರೆಸ್ ಮುಖಂಡ ರವಿಚಂದ್ರ ಆನಂದ ಅವರು ಆಗಮಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ತಿಳಿಸಿದರು. ಸ್ಥಳಕ್ಕೆ ಆಗಮಿಸಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.

Advertisements

ವರದಿ : ಸಿಟಿಜನ್ ಜರ್ನಲಿಸ್ಟ್ ಪರಶುರಾಮ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X