ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ: ವೇದಿಕೆಯಲ್ಲಿ ವಿಪಕ್ಷ ನಾಯಕ ಅಶೋಕ್‌ಗಿಲ್ಲ ಆಹ್ವಾನ, ಪ್ರಿಯಾಂಕ್ ವ್ಯಂಗ್ಯ

Date:

Advertisements

ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು(ಆಗಸ್ಟ್ 10) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಹಲವು ನಾಯಕರುಗಳಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ. ಆದರೆ ವಿಪಕ್ಷ ನಾಯಕ, ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ್ ಅವರಿಗೆ ವೇದಿಕೆಯಲ್ಲಿ ಸ್ಥಾನವೇ ನೀಡಿಲ್ಲ. ಈ ವಿಚಾರದಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಅವರು, “ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಸ್ವಪಕ್ಷದವರು ವಿರೋಧಿಸುವ ನಾಯಕನಾಗಿದ್ದಾರೆಯೇ! ಬೆಂಗಳೂರು ಮೆಟ್ರೋ ಫೇಸ್ 2 ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ ಕೇಂದ್ರ ಸರ್ಕಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೇ ವೇದಿಕೆಯಲ್ಲಿ ಜಾಗ ನೀಡುವುದನ್ನು ನಿರಾಕರಿಸಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆಗಸ್ಟ್ 10ರಂದು ಪ್ರಧಾನಿ ಚಾಲನೆ

Advertisements

“ಕೇಂದ್ರ ಸರ್ಕಾರ ಪ್ರೊಟೋಕಾಲ್ ಮರೆತಿದೆಯೇ? ಅಥವಾ ಉದ್ದೇಶಪೂರ್ವಕ ಕಡೆಗಣನೆಯೇ? ಮೊದಲ ಬಾರಿ ಶಾಸಕರಾಗಿರುವ ಹಾಗೂ ಬೆಂಗಳೂರಿನ ಶಾಸಕರಲ್ಲದಿರುವ ಬಿ ವೈ ವಿಜಯೇಂದ್ರ ಅವರಿಗೆ ಸಿಕ್ಕ ಅವಕಾಶ ಅಶೋಕ್ ಅವರಿಗಿಲ್ಲ” ಎಂದು ಪ್ರಿಯಾಂಕ್ ಉಲ್ಲೇಖಿಸಿದ್ದಾರೆ.

ಹಾಗೆಯೇ, “ಮಾನ್ಯ ಅಶೋಕ್ ಅವರೇ, ತಾವು ಬೆಂಗಳೂರು ಶಾಸಕರಾಗಿದ್ದರೂ, ವಿರೋಧ ಪಕ್ಷದ ನಾಯಕನಾಗಿದ್ದರೂ, ಬಿಜೆಪಿಯ ಹಿರಿಯ ನಾಯಕ ಎನಿಸಿಕೊಂಡಿದ್ದರೂ, ಹಲವು ಬಾರಿ ಆಯ್ಕೆ ಆಗಿದ್ದರೂ ನಿಮ್ಮನ್ನು ಕಡೆಗಣಿಸಲಾಗಿದೆ ಎಂದರೆ ನಿಮ್ಮ ಕುರ್ಚಿ ಕಿತ್ತುಕೊಳ್ಳುವ ಸಂದೇಶ ಬಂದಿದೆ ಎಂದು ಭಾವಿಸೋಣವೇ” ಎಂದು ಪ್ರಶ್ನಿಸಿದ್ದಾರೆ.

“ಯಾರು ಯಾರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿಲ್ಲ ಎಂದು ತಲೆಕೆಡಿಸಿಕೊಂಡು ಕುಳಿತಿದ್ದ ತಮಗೆ ಈಗ ‘ನನಗೇಕೆ ಆಹ್ವಾನವಿಲ್ಲ’ ಎಂದು ತಲೆಕೆಡಿಸಿಕೊಂಡು ಕೂರುವ ಸಮಯ ಬಂದಿದೆ. ಇನ್ನಾದರೂ ಇತರರ ಮನೆ ಇಣುಕುವ ಬದಲು ನಿಮ್ಮ ಬುಡ ಅಲ್ಲಾಡುತ್ತಿರುವುದನ್ನು ಗಮನಿಸಿದರೆ ಒಳ್ಳೆಯದು” ಎಂದು ತಿಳಿಸಿದ್ದಾರೆ.

ಈ ಹಿಂದೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಿಷ್ಠ ಪಕ್ಷ ಒಂದು ಟ್ವೀಟ್ ಮಾಡಿಯೂ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿಲ್ಲ. ಒಬ್ಬರ ಮುಖ ಒಬ್ಬರು ನೋಡಲಾಗದ ಈ ನಾಯಕರು ರಾಜ್ಯವನ್ನು ಹೇಗೆ ಮುನ್ನಡೆಸುತ್ತಾರೆ ಎಂದು ಆರ್ ಅಶೋಕ್ ಪ್ರಶ್ನಿಸಿದ್ದರು. ಆದರೆ ಈಗ ವಿಪಕ್ಷ ನಾಯಕರಾದರೂ ಅಶೋಕ್ ಅವರಿಗೆ ಸ್ಥಾನ ನೀಡದಿರುವುದನ್ನು ಕಾಂಗ್ರೆಸ್ ಅಶೋಕ್ ಟೀಕೆಗೆ ಬಳಸಿಕೊಳ್ಳುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X