ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲು

Date:

Advertisements

ವರದಕ್ಷಿಣೆ ತರುವಂತೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೀದರ್‌ ನಗರದ ಶಹಾಗಂಜ ಬಡಾವಣೆಯು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ʼ2022ರಲ್ಲಿ ಮದುವೆ ಸಮಯದಲ್ಲಿ 5 ತೊಲೆ ಬಂಗಾರ ಹಾಗೂ ₹5 ಲಕ್ಷ ವರದಕ್ಷಿಣೆ ನೀಡುವುದಾಗಿ ಮಾತಾಗಿತ್ತು. 2022ರ ಡಿಸೆಂಬರ್‌ನಲ್ಲಿ ಮದುವೆ ನಿಗದಿಯಾಗಿತ್ತು. ಮದುವೆ ಮುಂಚೆಯೇ ₹5 ಲಕ್ಷ ವರದಕ್ಷಿಣೆ ಗಂಡನ ಮನೆಯವರು ತೆಗೆದುಕೊಂಡಿದ್ದರು. ಮದುವೆ ವೇಳೆ ನನ್ನ ಹಾಗೂ ಗಂಡನಿಗೆ 5 ತೊಲೆ ಬಂಗಾರದ ಆಭರಣಗಳು ಮಾಡಿಕೊಟ್ಟಿದ್ದರುʼ ಎಂದಿದ್ದಾರೆ.

ʼಮದುವೆಯಾದ ವರ್ಷದವರೆಗೆ ಎಲ್ಲರೂ ಚನ್ನಾಗಿಯೇ ಇದ್ದರು. ಬಳಿಕ ಮದುವೆ ಸಂದರ್ಭದಲ್ಲಿ ಹೆಚ್ಚಿನ ವರದಕ್ಷಿಣೆ ನೀಡಲಿಲ್ಲ. ಇನ್ನೂ 2 ತೊಲೆ ಬಂಗಾರ ₹2 ಲಕ್ಷ ವರದಕ್ಷಿಣೆ ತೆಗೆದುಕೊಂಡು ಬರುವಂತೆ ಗಂಡ ಸೇರಿದಂತೆ ಅತ್ತೆ, ಮಾವ, ಮೈದುನ ಎಲ್ಲರೂ ಕಿರುಕುಳ ಕೊಟ್ಟು ನನ್ನ ಗಂಡ ದೈಹಿಕ ಹಲ್ಲೆ ಮಾಡಿದ್ದಾರೆ. ಈ ವಿಷಯ ನನ್ನ ತವರು ಮನೆಯವರಿಗೆ ತಿಳಿಸಿದಾಗ ನನ್ನ ತಂದೆ, ಸಹೋದರ ಬಂದು ಕಲಬುರಗಿ ಜಿಲ್ಲೆಯ ನನ್ನ ತವರೂರು ಆಳಂದಗೆ ಕರೆದುಕೊಂಡು ಹೋಗಿದ್ದರುʼ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Advertisements

ʼಎರಡು ತಿಂಗಳ ಕಳೆದ ನಂತರ ಗಂಡ ಸೇರಿದಂತೆ ಎಲ್ಲರೂ ನನ್ನ ತವರು ಮನೆಗೆ ಬಂದು ʼನಮ್ಮಿಂದ ತಪ್ಪಾಗಿದೆ, ಚನ್ನಾಗಿ ಇರುತ್ತೇವೆʼ ಎಂದು ಹೇಳಿ ಬೀದರ್‌ಗೆ ಕರೆದುಕೊಂಡು ಬಂದಿದ್ದರು. ಸ್ವಲ್ಪ ದಿನಗಳ ಬಳಿಕ ʼನಿನಗೆ ವರದಕ್ಷಿಣೆ ತರಲು ಹೇಳಿದರೂ ತಂದಿಲ್ಲʼ ಪುನಃ ಕಿರುಕುಳ ಕೊಟ್ಟು ಅವಾಚ್ಯ ಶಬ್ದಗಳಿಂದ ಬೈಯುವುದು ಮಾಡಿದ್ದಾರೆ. 2025ರ ಜುಲೈ 9ರಂದು ರಾತ್ರಿ ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಗಂಡ, ಮಾವ, ಅತ್ತೆ, ಮೈದುನ ಹಾಗೂ ನೆಗೆಣಿ ಸೇರಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಹೊಡೆಯುವುದು ಮಾಡುತ್ತಿದ್ದರುʼ ಎಂದು ಆರೋಪಿಸಿದರು.

ʼಗಂಡ, ಮಾವ, ಅತ್ತೆ ಸೇರಿದಂತೆ ಮನೆಯವರೆಲ್ಲರೂ ನನ್ನನ್ನು ಹೊಡೆದು ಗಾಯಗೊಳಿಸಿದ್ದರು. ವರದಕ್ಷಿಣೆ ತರದಿದ್ದರೆ ನಮ್ಮ ಮನೆಗೆ ಬರಬೇಡಾ, ನಮ್ಮ ಮಗನಿಗೆ ಬೇರೆ ಮದುವೆ ಮಾಡುತ್ತೇವೆ. ಬಂದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಜೀವ ಭಯದಿಂದ ನಮ್ಮ ಪೋಷಕರು ನನ್ನ ತವರು ಮನೆಗೆ ಜುಲೈ 10ರಂದು ತವರು ಮನೆಗೆ ಕರೆದು ಹೋಗಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿಗೆ ಗಾಯ : ಜಿಲ್ಲಾಡಳಿತಕ್ಕೆ ಖಡಕ್‌ ಸೂಚನೆ ನೀಡಿದ ಸಚಿವ ಈಶ್ವರ ಖಂಡ್ರೆ

ದೂರಿನ್ವಯ ಶಹಾಗಂಜನ ಮಹಿಳೆ ಪೂಜಾ ಅವರ ಪತಿ ಆಕಾಶ, ಮಾವ ಸೂರ್ಯಕಾಂತ, ಮೈದುನ ಸಾಗರ, ರಾಹುಲ್‌ ಹಾಗೂ ನೆಗೆಣಿ ವಿಜಯಲಕ್ಷ್ಮಿ ಸೇರಿ ಒಟ್ಟು ಏಳು ಜನರ ವಿರುದ್ಧ ವಿರುದ್ಧ ಐಪಿಸಿಯ ಕಲಂ 85, 115(2), 352, 351(2) ಜೊತೆ 3 (5) ಬಿಎನ್‌ಎಸ್ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಕಲಂ 3 ಮತ್ತು 4ರಡಿ ಬೀದರ್‌ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X