ಮಂಗಳೂರು ವಿವಿ ಪ್ರಾಧ್ಯಾಪಕ, ಇತಿಹಾಸ ತಜ್ಞ ಡಾ. ಉದಯ‌ ಬಾರ್ಕೂರು ನಿಧನ

Date:

Advertisements

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ,ಇತಿಹಾಸ ತಜ್ಞ ಡಾ. ಉದಯ ಬಾರ್ಕೂರು(59) ಶುಕ್ರವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಸಂಜೆ 5.30ರ ಸುಮಾರಿಗೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಅವರ ಸ್ನೇಹಿತರೋರ್ವರು ಈ ದಿನ.ಕಾಮ್‌ಗೆ ತಿಳಿಸಿದರು.

ರಾಜ್ಯದ ಅತ್ಯುತ್ತಮ ಇತಿಹಾಸಕಾರರಲ್ಲೋರ್ವರಾಗಿದ್ದ ಉದಯ ಬಾರ್ಕೂರು, ಇತ್ತೀಚೆಗೆ ಮಂಗಳೂರು ವಿವಿಯ ನೆಹರೂ ಚಿಂತನ ಕೇಂದ್ರದ ನಿರ್ದೇಶಕರಾಗಿ ಕೂಡ ಆಯ್ಕೆಯಾಗಿದ್ದರು.

Advertisements

ಟಿಪ್ಪು ಸುಲ್ತಾನ್ ಕುರಿತಂತೆ ಹೆಚ್ಚು ಅಧ್ಯಯನ ನಡೆಸಿದ್ದ ರಾಜ್ಯದ ಬೆರಳೆಣಿಕೆಯ ಇತಿಹಾಸಕಾರರಲ್ಲಿ ಉದಯ್ ಬಾರ್ಕೂರು ಕೂಡ ಒಬ್ಬರಾಗಿದ್ದರು. ‘ಟಿಪ್ಪು- ಹೈದರಾಲಿ : ಇತಿಹಾಸ ಕಥನ’ ಎಂಬ ಅವರ ಕೃತಿ ಬಹಳ ಅಮೂಲ್ಯವಾದುದಾಗಿತ್ತು. ಇದಲ್ಲದೇ ಸುಮಾರು ಹತ್ತರಷ್ಟು ಅಮೂಲ್ಯ ಇತಿಹಾಸ ಗ್ರಂಥಗಳನ್ನು‌ ಕನ್ನಡದಲ್ಲಿ ರಚಿಸಿದ್ದಾರೆ.

ಉಡುಪಿ ಜಿಲ್ಲೆಯ ಬಾರ್ಕೂರು ನಿವಾಸಿಯಾಗಿದ್ದ ಇವರು, ದೇರಳಕಟ್ಟೆಯ ನಾಟೇಕಲ್ ಸಮೀಪ ಕುಟುಂಬದೊಂದಿಗೆ ವಾಸವಿದ್ದರು. 33 ವರ್ಷ ಇತಿಹಾಸ ಪ್ರಾಧ್ಯಾಪರಾಗಿ ಸೇವೆ ಸಲ್ಲಿಸುತ್ತಿದ್ದರು. ಮಧ್ಯಕಾಲೀನ ಭಾರತೀಯ ಇತಿಹಾಸ, ಮಧ್ಯಕಾಲೀನ ಕರ್ನಾಟಕ ಮತ್ತು ಕರಾವಳಿಯ ಸಾಮಾಜಿಕ ಇತಿಹಾಸದ, ಎಪಿಗ್ರಫಿ ಸೇರಿದಂತೆ ಸಮಗ್ರ ಜ್ಞಾನ ಹೊಂದಿದ್ದ ಇವರು, ಆಕ್ಸ್‌ಫರ್ಡ್ ವಿವಿಯಿಂದ ಪೊಸ್ಟರಲ್ ಡಾಕ್ಟರೇಟ್ ಪದವಿ ಕೂಡ ಪಡೆದಿದ್ದರು. ಅಲ್ಲದೇ, ಕಾಮನ್ವೆಲ್ತ್ ಫೆಲೋಶಿಪ್ ಕೂಡ ಪಡೆದಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X