ಚುನಾವಣಾ ಆಯೋಗದ ನೋಟಿಸ್‌ಗೆಲ್ಲ ನಾವು ಹೆದರೋದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಚುನಾವಣೆಗಳಲ್ಲಿ ಏನು ತಪ್ಪಾಗಿದೆ ಎಂದು ರಾಜಕೀಯ ನಾಯಕರಾದ ನಾವುಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಅವರೇ ಈ ತಪ್ಪುಗಳನ್ನು ಬಗೆಹರಿಸಬೇಕು ಹಾಗೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಕೆಲಸ ಮಾಡುವುದು ನಾವಲ್ಲ. ಅವರು ನೀಡಿರುವ ನೋಟಿಸ್‌ಗೆಲ್ಲ ನಾವು ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳು ಮತಗಳ್ಳತನ ವಿಚಾರವಾಗಿ ಆಯೋಗವು ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಕೇಳಿದಾಗ “ನಾವು ತಪ್ಪು ಹೇಳಿದ್ದರೆ ನಮ್ಮ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಲಿ. ಚುನಾವಣಾ ಪ್ರಕ್ರಿಯೆಯಲ್ಲಿ ಏನೇನು ತಪ್ಪು ನಡೆದಿದೆ ಎಂದು ನಾವು ತಿಳಿಸಿದ್ದೇವೆ. ಇನ್ನೊಂದು ದೊಡ್ಡ ಅವಕಾಶ ನನಗಿದೆ. ಆದರೆ ಆ ವಿಚಾರವನ್ನು ನಾನು ಈಗ ಬಹಿರಂಗಪಡಿಸುವುದಿಲ್ಲ. ದಾಖಲೆಗಳನ್ನು ಪಡೆಯುವ ಜವಾಬ್ದಾರಿ ಅವರದ್ದು. ನಾವು ತಪ್ಪು ನಡೆದಿದೆ ಎಂದು ತಿಳಿಸಿದ್ದೇವೆ. ನಾವೇನು ಶಾಲಾಮಕ್ಕಳಲ್ಲ” ಎಂದರು.

ಆಯೋಗದಿಂದ ಒಂದಷ್ಟು ಮಾಹಿತಿ ಬರಬೇಕಿದೆ

Advertisements

“ರಾಹುಲ್ ಗಾಂಧಿ ಅವರು ಇಡೀ ದೇಶಕ್ಕೆ ಎಲ್ಲ ಮಾಹಿತಿ ನೀಡಿದ್ದಾರೆ. ನಾವು ಕರ್ನಾಟಕದ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿದ ವೇಳೆಯಲ್ಲಿ ಅವರು ರಾಹುಲ್ ಗಾಂಧಿ ಅವರು ಮಾಡಿದ ಆರೋಪಗಳ ಮೇಲೆ ತನಿಖೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ನಾವು ಸಹ ಒಂದಷ್ಟು ಮಾಹಿತಿಗಳನ್ನು ಕೇಳಿದ್ದೇವೆ” ಎಂದು ಹೇಳಿದರು.

“ರಾಹುಲ್ ಗಾಂಧಿ ಅವರು ದೇಶದ ಪ್ರಜಾಪ್ರಭುತ್ವ ಉಳಿಸಲು, ಎಲ್ಲರಿಗೂ ನ್ಯಾಯ ದೊರಕಿಸಿಕೊಡಲು ಹೋರಾಟ ಮಾಡುತ್ತಿದ್ದಾರೆ. ಒಂದು ಮತವೂ ಸಹ ದುರುಪಯೋಗವಾಗಬಾರದು ಜೊತೆಗೆ ಯಾವುದೇ ರಾಜಕೀಯ ಪಕ್ಷಗಳು ಅಕ್ರಮ ಮಾಡಿಕೊಳ್ಳಬಾರದು ಎಂದು ಈ ಹೋರಾಟ ಮಾಡಿದ್ದಾರೆ” ಎಂದರು.

ಆಯೋಗವು ನಿಮಗೂ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, “ನಾನು ಆಯೋಗದ ಬಳಿ ಒಂದಷ್ಟು ಮಾಹಿತಿಗಳನ್ನು ಕೇಳಿದ್ದೇನೆ. ನನಗೆ ಇನ್ನೂ ಕೊಟ್ಟಿಲ್ಲ. ನನಗೆ ವಾಟ್ಸ್ ಆಪ್ ನಲ್ಲಿ ಕಳುಹಿಸಿದ್ದಾರೆ. ನಾನು ಅದನ್ನು ಇನ್ನು ಗಮನಿಸಿಲ್ಲ. ಅವರಿಗೆ ಏನು ಬೇಕೋ ಅದೆಲ್ಲವನ್ನು ನೀಡೋಣ. ನಮ್ಮ ಸಂಶೋಧನಾ ತಂಡ ಯಾವ ವಿಚಾರಗಳನ್ನು ಶೋಧಿಸಿದ್ದಾರೋ ಅದೆಲ್ಲವನ್ನು ನಾವು ನೀಡುತ್ತೇವೆ. ಮಾಧ್ಯಮದವರು ಸಹ ಅಕ್ರಮ ನಡೆದ ಜಾಗಗಳಿಗೆ ತೆರಳಿ ಮನೆ ಸಂಖ್ಯೆ, ವಾಸವಿರುವ ಜನರ ಬಗೆಗಿನ ವಾಸ್ತವಾಂಶ ತಿಳಿಸಿದ್ದಾರೆ” ಎಂದು ಹೇಳಿದರು.

“ಬಿಹಾರದ ಡಿಸಿಎಂ ಅವರು ಸಹ ಎರಡು ಎಪಿಕ್ ನಂಬರ್ ಹೊಂದಿದ್ದಾರೆ ಎಂದು ಬಿಹಾರದ ತೇಜಸ್ವಿ ಯಾದವ್ ತಿಳಿಸಿದ್ದಾರೆ. ಇದನ್ನು ಚುನಾವಣಾ ಆಯೋಗ ನೋಡಲು ಆಗುವುದಿಲ್ಲವೇ? ಜವಾಬ್ದಾರಿ ಇಲ್ಲವೇ? ಬೇಕಾದಷ್ಟು ತಪ್ಪುಗಳಾಗಿವೆ. ನಾವು ಇದರ ಬಗ್ಗೆ ಹೋರಾಟ ಮುಂದುವರೆಸುತ್ತೇವೆ”ಎಂದರು.

“ತಪ್ಪು ಮಾಹಿತಿ ನೀಡಿದ್ದರೆ ಚುನಾವಣಾ ಆಯೋಗ ಪ್ರಕರಣ ದಾಖಲಿಸುವುದಾದರೆ ದಾಖಲಿಸಲಿ. ನಾವು ಈ ದೇಶದ ಜನರಿಗೆ ನಡೆದಿರುವ ಸಂಗತಿಗಳನ್ನು ತಿಳಿಸಿದ್ದೇವೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ಕೂಡ ಈ ಬಗ್ಗೆ ಜನರಿಗೆ ಹೆಚ್ಚು, ಹೆಚ್ಚು ಅರಿವು ಮೂಡಿಸಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X