ಯಾದಗಿರಿ | ಕರ್ತವ್ಯ ಲೋಪವೆಸಗಿದ ಕಂದಾಯ ನಿರೀಕ್ಷಕ ಮಹೇಂದ್ರ ಹಿರೇಮಠ ಅಮಾನತಿಗೆ ಆಗ್ರಹ

Date:

Advertisements

ಚಾಲಕನ ಮೇಲೆ ಸುಳ್ಳು ದೂರು ದಾಖಲಿಸಿ ದರ್ಪದಿಂದ ಮೆರೆದು ಕರ್ತವ್ಯ ಲೋಪ ಎಸಗಿದ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದ ಕಂದಾಯ ನಿರೀಕ್ಷಕ ಮಹೇಂದ್ರ ಹಿರೇಮಠ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟಿಸಿದರು.

ಸಿದ್ದಾರ್ಥ ಟಿಪ್ಪರ್ ಚಾಲಕರ ಸಂಘದಿಂದ ಶಹಾಪುರ ನಗರದ ತಹಸೀಲ್ದಾರ್ ಕಚೇರಿ ಎದುರುಗಡೆ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕದಸಂಸ ರಾಜ್ಯ ಸಂಘಟನಾ ಸಂಚಾಲಕ ಶರಣು ದೋರನಹಳ್ಳಿ ಮಾತನಾಡಿ, ʼಕಂದಾಯ ನೀರಿಕ್ಷಕರಾದ ಮಹೇಂದ್ರ ಹಿರೇಮಠ ಅವರು ಆ.9ರಂದು ದೋರನಹಳ್ಳಿ ಸೀಮಾಂತರದಲ್ಲಿ ಅಕ್ರಮ ಮರಮು ಸಾಗಾಣಿಕೆ ಮಾಡುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಸುಳ್ಳು ದೂರು ನೀಡಿ, ದೋರನಹಳ್ಳಿ ಗ್ರಾಮದ ಖಾಲಿ ಟಿಪ್ಪರ್ ಜಿಪಿಎಸ್ ಪೋಟೋಗಳ ತಮ್ಮ ಕಚೇರಿಯ ಸಿಬ್ಬಂದಿಯಿಂದ ತೆಗೆಸಿ ಅದರ ಆಧಾರದ ಮೇಲೆ ಅಕ್ರಮ ಮರಮು ಸಾಗಣಿಕೆ ಮಾಡುತ್ತಿವುದನ್ನು ಆರೋಪಿಸಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿದ್ದಾರೆʼ ಎಂದು ಆರೋಪಿಸಿದರು.

Advertisements

“ಕಂದಾಯ ನೀರಿಕ್ಷಕರಾದ ಮಹೇಂದ್ರ ಹೀರೇಮಠ ಅವರು ಆಗಸ್ಟ್‌ 09 2025ರಂದು ಬೆಳಿಗ್ಗೆ 10 ರಿಂದ ಸಂಜೆ 8 ಗಂಟೆವರೆಗೂ ಕೇಂದ್ರಸ್ಥಾನದಲ್ಲಿಯೇ ಇರಲಿಲ್ಲ. ಆದರೂ ದೋರನಹಳ್ಳಿ ಗ್ರಾಮದಲ್ಲಿ ನನ್ನನ್ನು ನನ್ನ ಕರ್ತವ್ಯಕ್ಕೆ ಅಡ್ಡಿ ಪಡಿಸಿದರು ಎಂದು ಆರೋಪಿಸಿ ಅಮಾಯಕ ಟಿಪ್ಪರ್ ಚಾಲಕನ ಮೇಲೆ ಮತ್ತು ಜಮೀನಿನ ಮಾಲಿಕನ ಮೇಲೆ ಸುಳ್ಳು ದೂರು ದಾಖಲಿಸಿರುವುದು ಖಂಡನೀಯʼ ಎಂದು ಹೇಳಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಧರ್ಮಸ್ಥಳ ಕೇಸ್‌ನಲ್ಲಿ ಮುಸ್ಲಿಂ, ಕಮ್ಯುನಿಸ್ಟರ ಹೆಸರು ತಂದು ದಿಕ್ಕು ತಪ್ಪಿಸುವುದು ಅಕ್ಷಮ್ಯ

ಈ ಸಂದರ್ಭದಲ್ಲಿ ಮುಖಂಡರಾದ ಸಾಬಣ್ಣ ಗೋಷಿ, ಶಿವು ಪೋತೆ, ಶಿವಕುಮಾರ್ ತಳವಾರ, ಹಣಮಂತ ದಿಗ್ಗಿ, ಸುರೇಶ ರೆಡ್ಡಿ, ಸುಭಾಷ್ ತಳವಾರ, ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X