ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಆದರೆ, ರಾಜಣ್ಣ ರಾಜೀನಾಮೆ ನೀಡಿದ ಕಾರಣ ಅವರನ್ನು ಸಂಪುಟದಿಂದಲೇ ವಜಾಗೊಳಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಶಿಫಾರಸು ಮಾಡಿದ ನಂತರ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸೋಮವಾರ ಸಚಿವ ಸಂಪುಟದಿಂದ ವಜಾಗೊಳಿಸಲಾಗಿದೆ.

ರಾಜಣ್ಣ ಅವರನ್ನು ಪದಚ್ಯುತಗೊಳಿಸುವ ಪತ್ರವನ್ನು ಮುಖ್ಯಮಂತ್ರಿಗಳು ಮಧ್ಯಾಹ್ನ ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ಇದರ ಶಿಫಾರಸನ್ನು ರಾಜಭವನ ಅಂಗೀಕರಿಸಿದೆ.

Advertisements

“ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಅಗತ್ಯ ಕ್ರಮಕ್ಕಾಗಿ ಕಳುಹಿಸಲು ನನಗೆ ಸೂಚಿಸಲಾಗಿದೆ” ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭುಶಂಕರ್ ಅವರು ಕರ್ನಾಟಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬರೆದಿದ್ದಾರೆ.

ರಾಜಣ್ಣ ಅವರ ಇತ್ತೀಚಿನ ಹೇಳಿಕೆಗಳಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಕಚೇರಿಯ ಮೂಲಗಳು ಹೇಳಿವೆ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ “ಮತ ಕಳ್ಳತನ”ಕ್ಕೆ ಸಿದ್ದರಾಮಯ್ಯ ಅವರ ನಿಷ್ಠಾವಂತ ರಾಜಣ್ಣ, ಕರ್ನಾಟಕದಲ್ಲಿ ತಮ್ಮ ಪಕ್ಷದ ನೇತೃತ್ವದ ಸರ್ಕಾರವನ್ನು ದೂಷಿಸಿದಾಗ ಕಾಂಗ್ರೆಸ್ ಹೈಕಮಾಂಡ್‌ನ ಕೋಪಕ್ಕೆ ಗುರಿಯಾಯಿತು.

WhatsApp Image 2025 08 11 at 5.26.47 PM 1

ರಾಹುಲ್ ಗಾಂಧಿ ಇತ್ತೀಚೆಗೆ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು ಮತ್ತು ನಂತರ ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದದ್ದು “ಮತ ಕಳ್ಳತನ”ದಿಂದ ಎಂದು ಹೇಳಿದ್ದರು. ಬೆಂಗಳೂರು ಕೇಂದ್ರ ಸಂಸದೀಯ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರು ಇದ್ದಾರೆ ಎಂದು ಉಲ್ಲೇಖಿಸಿದ್ದರು.

ಆದ,ರೆ ರಾಹುಲ್ ಗಾಂಧಿ ಆರೋಪದ ಬೆನ್ನಲ್ಲೆ ಕೆಎನ್ ರಾಜಣ್ಣ “ಮತ ಕಳ್ಳತನ”ಕ್ಕೆ ಕಾಂಗ್ರೆಸ್ ಸರ್ಕಾರವನ್ನೇ ದೂಷಿಸಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಕ್ರಮಗಳು ನಡೆದಿವೆ ಎಂದು ಸಚಿವರು ಹೇಳಿದರು ಮತ್ತು ಅದು “ನಮ್ಮ ಕಣ್ಣ ಮುಂದೆಯೇ” ಸಂಭವಿಸಿದೆ ಎಂದು ಆರೋಪಿಸಿದ್ದರು.

ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ರಾಜಣ್ಣ ಸಂಗತಿ ಚರ್ಚೆಯ ವಿಷಯವಾಯಿತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಮತ್ತು ರಾಜಣ್ಣ ಅವರು ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಶಾಸಕರು ಒತ್ತಾಯಿಸಿದರು. ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜಣ್ಣ ವಿರುದ್ಧದ ನಿರ್ದಿಷ್ಟ ಆರೋಪಗಳೇನು ಎಂದು ಕೇಳಿದರು.

ರಾಜಣ್ಣ ಕಳೆದ ಎರಡು ತಿಂಗಳಿನಿಂದ ಸೆಪ್ಟೆಂಬರ್ ಕ್ರಾಂತಿಯ ಬಗ್ಗೆ ಸುಳಿವು ನೀಡಿ ಸುದ್ದಿಯಲ್ಲಿದ್ದಾರೆ. ಈ ಕುರಿತು ಲೇವಡಿ ಮಾಡಿರುವ ಬಿಜೆಪಿ ಶಾಸಕ ಸುರೇಶ್ ಕುಮಾರ್‌, “ರಾಜ್ಯದ ಸಹಕಾರ ಸಚಿವರಾಗಿದ್ದ‌ ಕೆ ಎನ್ ರಾಜಣ್ಣರವರ ರಾಜೀನಾಮೆ ತೆಗೆದುಕೊಂಡಿಲ್ಲ. ಬದಲಿಗೆ ಅವರನ್ನು ಸಚಿವ ಸಂಪುಟದಿಂದ ಉಚ್ಛಾಟಿಸಲಾಗಿದೆ. ಕಾಂಗ್ರೆಸ್ ಯುವರಾಜರ “ಮತಗಳ್ಳತನ” ವೆಂಬ ಸುಳ್ಳನ್ನು ರಾಜ್ಯದ ಎದುರು ಬೆತ್ತಲು ಮಾಡಿದ್ದಕ್ಕಾಗಿ ಈ ಬಳುವಳಿ. ಹೇಗಿದೆ ಸೆಪ್ಟಂಬರ್ ಕ್ರಾಂತಿ? ಹುಷಾರ್!” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

ಚಿಕ್ಕಮಗಳೂರು l ಕಾಡಾನೆ ಸೆರೆ ಕಾರ್ಯಾಚರಣೆ: ಒಂದು ಪುಂಡಾನೆ ಸೆರೆ

ಕಾಡಾನೆ ದಾಳಿಗೆ ವಾರದಲ್ಲಿ ಎರಡು ಸಾವಿನ ಪ್ರಕರಣ ಕುರಿತು ಸೋಮವಾರ ಬಾಳೆಹೊನ್ನೂರು...

Download Eedina App Android / iOS

X