ಕೊರಟಗೆರೆ | ಅತ್ತೆಯ ಡೆತ್ ಸೆಂಟೆನ್ಸ್ ಬರೆದ ಡೆಂಟಲ್ ಡಾಕ್ಟರ್ ಈಗ ಪೊಲೀಸರ ಅತಿಥಿ

Date:

Advertisements

ಕೊರಟಗೆರೆ  ತಾಲೂಕಿನ  ಚಿಂಪುಗಾನಹಳ್ಳಿಯ ಮುತ್ಯಾಲಮ್ಮ ದೇವಸ್ಥಾನದ ಬಳಿಯಿಂದ ಸಿದ್ದರಬೆಟ್ಟದ ರಸ್ತೆ ತನಕ ಸುಮಾರು 30 ಕಿ.ಮೀ. ದೂರ ವ್ಯಾಪ್ತಿಯಲ್ಲಿ 17 ಸ್ಥಳಗಳಲ್ಲಿ ಮಹಿಳೆಯ ದೇಹದ ತುಂಡುಗಳನ್ನು ಎಸೆದಿರುವ ಪ್ರಕರಣಕ್ಕೆ ಹೊಸ ತಿರುವು ದೊರಕಿದೆ.

ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮೃತ ಮಹಿಳೆ ಬೆಳ್ಳಾವಿ ಮೂಲದ ಲಕ್ಷ್ಮಿದೇವಮ್ಮ (42) ಹತ್ಯೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಅಳಿಯ, ವೃತ್ತಿಯಲ್ಲಿ ದಂತ ವೈದ್ಯನಾಗಿರುವ ರಾಮಚಂದ್ರಯ್ಯ ಮತ್ತು ಸತೀಶ್, ಕಿರಣ್ ಎಂಬವರು ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಾಗಿದ್ದಾರೆ.

ತುಮಕೂರು ನಗರದಲ್ಲಿ ದಂತ ಕ್ಲಿನಿಕ್ ಇಟ್ಟು ಕೊಂಡಿದ್ದ ಆರೋಪಿ ಡಾ‌. ರಾಮಚಂದ್ರಯ್ಯ ಕುವೆಂಪು ನಗರದಲ್ಲಿ ವಾಸವಾಗಿದ್ದ ಎಂದು ತಿಳಿದು ಬಂದಿದ್ದು, ಅತ್ತೆಯ ಚಟುವಟಿಕೆಗಳ ಬಗ್ಗೆ ಬೇಸತ್ತ ಅಳಿಯ ಅಸಮಾದಾನಗೊಂಡು ಈ ದುಷ್ಕೃತ್ಯ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದ್ದು, ತನ್ನ ಸ್ನೇಹಿತರ ಜೊತೆಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ, ಸದ್ಯ ಕೊರಟಗೆರೆ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisements

ಮೊದಲ ಹೆಂಡತಿಯು ವಿಚ್ಚೇದನ ಪಡೆಯುವ ಹಂತದಲ್ಲಿದಾಗ 2ನೇ ಮದುವೆಯಾಗಿದ್ದ ಡಾಕ್ಟರ್, 2ನೇ ಹೆಂಡತಿಯ ತಾಯಿಯನ್ನೇ  ಮರ್ಡರ್ ಮಾಡಿದ್ದಾನೆ. ಈ ಕೃತ್ಯಕ್ಕೆ ಬಳಸಲಾಗಿದ್ದ ಕಾರ್ ನಿಂದಲ್ಲೇ ಪತ್ತೆಯಾದರೂ ಆರೋಪಿಗಳು, ಸ್ನೇಹಿತ ಸತೀಶ್ ನ ಕಾರ್ ನಲ್ಲಿಯೇ ಅತ್ತೆಯ ತುಂಡು ತುಂಡಾದ ಶರೀರದ ಭಾಗಗಳನ್ನು ದಿಕ್ಕಾಪಾಲು ಮಾಡಿ ಎಸೆದಿದ್ದ ಆರೋಪಿ ಡಾ. ರಾಮಚಂದ್ರಯ್ಯನನ್ನು ಬಂಧಿಸಲಾಗಿದೆ.

ಮೂರು ದಿನಗಳ ಕಾಲ ಮೃತದೇಹವನ್ನು ತಮ್ಮ ಬಳಿಯೇ ಇಟ್ಟುಕೊಂಡು ಆ.6ರಂದು ದೇಹವನ್ನು ತುಂಡು ಮಾಡಿ ಎಸೆದಿದ್ದರು. ಬಳಿಕ ರಾಮಚಂದ್ರ ಧರ್ಮಸ್ಥಳಕ್ಕೆ ತೆರಳಿದ್ದ. ಆತನ ಮೇಲೆ ಅನುಮಾನಗೊಂಡು ಪೊಲೀಸರು ವಿಚಾರಣೆ ನಡೆಸಿದ ಬಳಿಕ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X