ಚಿತ್ರದುರ್ಗ | ದಸಂಸ ನೇತೃತ್ವದಲ್ಲಿ ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆ ಸಂತ್ರಸ್ತರ ಹೋರಾಟ 8ನೇ ದಿನಕ್ಕೆ

Date:

Advertisements

ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಸಂತ್ರಸ್ತರಿಗೆ ಜಿಲ್ಲಾಡಳಿತ ಮತ್ತು ಸರಕಾರಗಳು ಇದುವರೆಗೂ ನೆರವು ಒದಗಿಸಿಲ್ಲ ಎಂದು ಆರೋಪಿಸಿ, ಕೂಡಲೇ ನೆರವನ್ನು ಒದಗಿಸಲು ಆಗ್ರಹಿಸಿ ದಸಂಸ ನೇತೃತ್ವದಲ್ಲಿ ನಡೆಸುತ್ತಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರಹಳ್ಳಿ, ದೊಡ್ಡಬೀರನಹಳ್ಳಿಯ ದೌರ್ಜನ್ಯಕ್ಕೊಳಗಾದ ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆಯ ಸಂತ್ರಸ್ತರ ಹೋರಾಟ 8ನೇ ದಿನಕ್ಕೆ ಕಾಲಿಟ್ಟ ವೇಳೆ ಆಕ್ರೋಶಕ್ಕೆ ತಿರುಗಿದ್ದು ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗದಲ್ಲಿ ರಸ್ತೆ ಬದಿಯಲ್ಲಿ ಆಹಾರ ತಯಾರಿಸಿ ಸಂತ್ರಸ್ತರ ನೋವಿನ ಊಟ ಸಿದ್ಧವಿದೆ ಎಂದು ಕೂಗಿ ಹೇಳುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ..

1002487242

ತಾಲೂಕು ಕಚೇರಿ ಮುಂಭಾಗದ ರಸ್ತೆ ಪಕ್ಕದ ಪಾದಾಚಾರಿ ಮಾರ್ಗದಲ್ಲಿ ಸಂತ್ರಸ್ತ ಕುಟುಂಬಗಳು ಸೌದೆ ಒಲೆಯ ಮೇಲೆ ಅಡುಗೆ ಮಾಡುವುದರ ಮೂಲಕ ವಿನೂತನವಾಗಿ ತಾಲೂಕು ಆಡಳಿತಕ್ಕೆ ಹಾಗೂ ಜಿಲ್ಲಾ ಆಡಳಿತಕ್ಕೆ ಬಿಸಿ ಮುಟ್ಟಿಸಿದರು. ಅಡುಗೆ ಮಾಡಿ ಫುಟ್ ಬಾತ್ ನಲ್ಲಿಯೇ ಸ್ಥಳದಲ್ಲಿ ಊಟ ಮಾಡುವುದರ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

“ಹೋರಾಟ ಪ್ರಾರಂಭಿಸಿ ಎಂಟು ದಿನಗಳಾದರೂ ನಮ್ಮ ಸಂಕಷ್ಟ ಕೇಳಲು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬಂದಿಲ್ಲ . ಸಂತ್ರಸ್ತರ ಕುಟುಂಬಗಳ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಮುಂದುವರಿಯಲಿದೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಟಿಡಿ.ರಾಜಗಿರಿ ಆಕ್ರೋಶ ವ್ಯಕ್ತಪಡಿಸಿದರು.

Advertisements
1002487241

“ಕಳೆದ ಎಂಟು ದಿನಗಳಿಂದ ಮಳೆ, ಗಾಳಿ, ಚಳಿ ಎನ್ನದೆ ನ್ಯಾಯಕ್ಕಾಗಿ ಧರಣಿ ಮಾಡುತ್ತಿದ್ದೇವೆ. ಆದರೆ ಜಿಲ್ಲಾಡಳಿತ, ತಾಲೂಕು ಆಡಳಿತ ಇತ್ತ ಕಡೆ ಗಮನಹರಿಸಿಲ್ಲ. ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ದೊರೆತಿಲ್ಲ. ಇಲ್ಲಿನ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ” ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

‘ಸಂತ್ರಸ್ತರ ನೋವಿನ ಊಟ ಸಿದ್ಧವಿದೆ. ಇನ್ನು ಜಿಲ್ಲಾಧಿಕಾರಿ ಬರುವಿಕೆಗಾಗಿ ರಸ್ತೆ ಪಕ್ಕದ ಫುಟ್ ಬಾತ್ ಮೇಲೆ ಅಡಿಗೆ ತಯಾರಿಸಿದ್ದೇವೆ’ ಎಂದು ಧರಣಿ ನಿರತ ಮಹಿಳೆಯರು ಅಳಲು ತೋಡಿಕೊಂಡರು.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ವೇತನ ಹೆಚ್ಚಳ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ದಲಿತ ಸಂಘರ್ಷ ಸಮಿತಿಯ ತಿಮ್ಮಪ್ಪ, ಕೆ ಎಂ ಎಸ್ ಹರೀಶ್ ಕೊನಿಗಾರಹಳ್ಳಿ, ಹನುಮಂತ, ಹಾಗೂ ಬೀರನಹಳ್ಳಿಯ ತಿಪ್ಪೇಸ್ವಾಮಿ, ರತ್ನಮ್ಮ, ಸೇರಿದಂತೆ ಹಲವರು ಹೋರಾಟದಲ್ಲಿ ಭಾಗವಹಿಸಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

Download Eedina App Android / iOS

X