ರಾಯಚೂರು | ವ್ಯಾಪಾರ, ಕೈಗಾರಿಕೆ ಅಭಿವೃದ್ಧಿಗೆ ವೈಬ್‌ಪೇಜ್ ತಯಾರಿ: ವಾಣಿಜ್ಯೋಧ್ಯಮ ಸಂಘದ ಅಧ್ಯಕ್ಷ್ಯ

Date:

Advertisements

ವ್ಯಾಪಾರ, ಕೈಗಾರಿಕೆ ಸೇರಿದಂತೆ ಪೂರ್ಣ ಪ್ರಮಾಣ ಮಾಹಿತಿ ಸಂಗ್ರಹಿಸಲು ರಾಯಚೂರು ವಾಣಿಜ್ಯೋಧ್ಯಮ ಸಂಘದಿಂದ ವೈಬ್‌ಪೇಜ್ ಸಿದ್ದಪಡಿಸಲಾಗುತ್ತಿದೆ ಎಂದು ಸಂಘದ ನೂತನ ಅಧ್ಯಕ್ಷ ಎಸ್ ಕಮಲಕುಮಾರ ಜೈನ್ ಹೇಳಿದರು.

ರಾಯಚೂರು ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಿರಾಣಿ ಸೇರಿದಂತೆ ಎಲ್ಲ ವ್ಯಾಪಾರಸ್ಥರ ಮಾಹಿತಿ ದಾಖಲೀಕರಣ ಮಾಡುವುದರಿಂದ ಗ್ರಾಹಕರು ಹಾಗೂ ಕೈಗಾರಿಕೆಗಳಿಗೆ, ವ್ಯಾಪಾರಸ್ಥರಿಗೂ ವಹಿವಾಟು ನಡೆಸಲು ಸಹಕಾರಿಯಾಗಲಿದೆ. ವೈಬ್ ಡೈರಕ್ಟರಿಗೆ ವೀಕ್ಷಿಸುವವರಿಗೆ ಎಲ್ಲ ರೀತಿ ಮಾಹಿತಿ ಒಂದೇ ವೇದಿಕೆಯಲ್ಲಿ ದೊರೆಯುವಂತೆ ಮಾಡಲು ಉದ್ದೇಶಿಸಲಾಗಿದೆ” ಎಂದು ತಿಳಿಸಿದರು.

“ಬಿಕಾಂ ಮತ್ತು ಎಂಬಿಗೆ ವಿದ್ಯಾರ್ಥಿಗಳನ್ನು ಬಳಸಿಕೊಂಡು ಮಾಹಿತಿ ಸಂಗ್ರಹಿಸಲಾಗುತ್ತದೆ. ದಾಖಲೀಕರಣ ಮಾಡುವ ವಿದ್ಯಾರ್ಥಿಗಳಿಗೆ ಗೌರವಧನದ ಜೊತೆಗೆ ಪ್ರಮಾಣ ಪತ್ರ ನೀಡಲಾಗುತ್ತದೆ” ಎಂದರು.

Advertisements

“ರಾಯಚೂರಿನಲ್ಲಿ ಬಂಡವಾಳ ಹೂಡಿಕೆ ಉತ್ತೇಜಿಸುವುದು ಅಗತ್ಯವಾಗಿರುವ ಹಿನ್ನಲೆಯಲ್ಲಿ ಇತ್ತೀಚೆಗೆ ಕೈಗಾರಿಕಾ ಸಚಿವರನ್ನು ಭೇಟಿ ಮಾಡಿ ಕೃಷಿ ಆಧಾರಿತ ಹಾಗೂ ಔಷಧಿ ಉತ್ಪಾದನಾ ವಲಯ ಕೈಗಾರಿಕೆಗಳ ಸ್ಥಾಪನೆಗೆ ಒತ್ತನೀಡಬೇಕೆಂದು ಮನವಿ ಮಾಡಲಾಗಿದೆ” ಎಂದರು.

“ಕೈಗಾರಿಕಾ ವಲಯ ಸ್ಥಾಪನೆಗೆ 1500 ಎಕರೆ ಭೂಮಿಯ ಸ್ವಾಧೀನ, ಕೈಗಾರಿಕೆ ಪ್ರದೇಶಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ದೇವದುರ್ಗ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡುವದು, ಗ್ರಾಮ ಪಂಚಾಯಿತಿಗಳಲ್ಲಿ 9ಎ ಮತ್ತು 11ಎ ಫಾರಂ ನೀಡುವುದು ವಿಳಂಬವಾಗುತ್ತಿದೆ. ಟ್ರಕ್ ಟರ್ಮಿನಲ್ ಸ್ಥಾಪಿಸಲು, ಟೆಕ್ಸ್‌ಟೈಲ್ಸ್‌ ಪಾರ್ಕ್‌ ಸ್ಥಾಪಿಸಲು ಹಾಗೂ ವಾಟರ್‌ ಟ್ರೀಟ್‌ಮೆಂಟ್‌ ಟ್ಯಾಂಕ್ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗುತ್ತಿಗೆದಾರರ ಬಾಕಿ ಹಣ ಪಾವತಿಸದೇ ಇದ್ದರೆ ಹೋರಾಟ; ನಾಗಪ್ಪ ಗಿರಣಿ ಎಚ್ಚರಿಕೆ

“ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿ, ಮೂಲಭೂತ ಸೌಕರ್ಯಗಳಿಲ್ಲದೇ ಹೊಸ ಕೈಗಾರಿಕೆಗಳು ಬಾರದಂತಾಗಿವೆ. ಇದನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದು, ಕ್ರಮವಹಿಸುವುದಾಗಿ ಕೈಗಾರಿಕಾ ಸಚಿವರು ಭರವಸೆ ನೀಡಿದ್ದಾರೆ” ಎಂದರು.

ತ್ರಿವಿಕ್ರಮ ಜೋಷಿ, ಮಲ್ಲಿಕಾರ್ಜುನ ದೋತರಬಂಡಿ, ಕೆ ಎಂ ಪಾಟೀಲ್, ಜಂಬಣ್ಣ ಯಕ್ಲಾಸಪುರು, ಕೆ ವಿ ಮನೋಹರ, ಜಗದೀಶ ಗುಪ್ತಾ, ನಾಗನಗೌಡ ಹರವಿ, ಉದಯಕಿರಣ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X