ಕಥುವಾ | ಪಾಕಿಸ್ತಾನಿ ನುಸುಳುಕೋರನ ಹತ್ಯೆ; ಭಯೋತ್ಪಾದಕರ ಅಡಗುತಾಣ ಪತ್ತೆ

Date:

Advertisements

ಸೋಮವಾರ ಕಥುವಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ (ಐಬಿ)ಯಲ್ಲಿ ಬಿಎಸ್‌ಎಫ್ ಸಿಬ್ಬಂದಿ ಪಾಕಿಸ್ತಾನಿ ನುಸುಳುಕೋರನನ್ನು ಗುಂಡಿಕ್ಕಿ ಕೊಂದಿದ್ದಾರೆ. ಹಾಗೆಯೇ ಭಯೋತ್ಪಾದಕರ ಅಡಗುತಾಣ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಕಥುವಾದ ಹಿರಾನಗರ ಸೆಕ್ಟರ್‌ನಲ್ಲಿರುವ ಚಂದ್ವಾನ್ ಮತ್ತು ಕೊಥೆ ಗಡಿ ಹೊರಠಾಣೆಗಳ ನಡುವೆ ಸಂಜೆ ಒಳನುಸುಳುಕೋರ ಬರುವುದನ್ನು ಗಮನಿಸಿದೆ. ಆತನಿಗೆ ಒಳಬರದಂತೆ ಎಚ್ಚರಿಕೆ ನೀಡಲಾಗಿದೆ. ಆದರೂ ಆತ ಕೇಳದೆ ಒಳನುಗ್ಗಲು ಯತ್ನಿಸಿದ, ಈ ವೇಳೆ ಬಿಎಸ್‌ಎಫ್ ಸಿಬ್ಬಂದಿ ಒಳನುಸುಳುಕೋರನ ಕಾಲುಗಳ ಮೇಲೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಜಾಗತಿಕವಾಗಿ ಪಾಕಿಸ್ತಾನವನ್ನು ‘ಭಯೋತ್ಪಾದನೆಯ ಕೇಂದ್ರಬಿಂದು’ ಎಂದು ಗುರುತಿಸಲಾಗುತ್ತದೆ: ಭಾರತ

Advertisements

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಅಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಸದ್ಯ ಒಳನುಸುಳುಕೋರನ ಗುರುತು ಮತ್ತು ಉದ್ದೇಶವನ್ನು ಪರಿಶೀಲಿಸಲಾಗುತ್ತಿದೆ.

ಈ ನಡುವೆಯೇ ದುಲ್ ಕಿಶ್ತ್ವಾರ್ ಅರಣ್ಯ ಪ್ರದೇಶದಲ್ಲಿ ಜಂಟಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಎರಡನೇ ದಿನವೂ ಮುಂದುವರೆದಿದೆ. ಕಾರ್ಯಾಚರಣೆಯ ಸಮಯದಲ್ಲಿ, ಭದ್ರತಾ ಪಡೆಗಳು ಅರಣ್ಯ ಪ್ರದೇಶದ ಗುಹೆಯಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಕಂಡುಕೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X