ಗುಬ್ಬಿ | ಮುಸುಕುಧಾರಿ ಕಳ್ಳರ ಬೈಕ್ ಸಂಚಾರ : ಆತಂಕಕ್ಕೆ ಒಳಗಾದ ನಾಗರಿಕರು

Date:

Advertisements

ಗುಬ್ಬಿ ಪಟ್ಟಣದ ಮಹಾಲಕ್ಷ್ಮೀ ಬಡಾವಣೆಯ ನಾಲ್ಕನೇ ಕ್ರಾಸ್ ನಲ್ಲಿ ತಡರಾತ್ರಿ ಮುಸುಕುಧಾರಿ ಕಳ್ಳರು ಎರಡು ಬೈಕ್ ನಲ್ಲಿ ಸಂಚಾರ ಮಾಡಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪರಿಣಾಮ ಸ್ಥಳೀಯ ನಾಗರೀಕರು ಆತಂಕಕ್ಕೆ ಒಳಗಾಗಿದ್ದಾರೆ.

ತಡರಾತ್ರಿ 1.30 ರ ಸಮಯದಲ್ಲಿ ಎರಡು ಬೈಕ್ ನಲ್ಲಿ ನಾಲ್ಕು ಮಂದಿ ಒಂದೇ ರಸ್ತೆಯಲ್ಲಿ ಎರಡು ಬಾರಿ ಓಡಾಡಿದ್ದಾರೆ. ಅವರ ಬಳಿ ಮಾರಕಾಸ್ತ್ರಗಳು ಕೂಡ ಇದ್ದು, ಮೊದಲು ಚಲಿಸುವ ಬೈಕ್ ಹೆಡ್ ಲೈಟ್ ಆಫ್ ಮಾಡಲಾಗಿದೆ. ಮತ್ತೊಂದು ಬೈಕ್ ಮಾತ್ರ ಲೈಟ್ ಹಾಕಿದೆ. ಕಳ್ಳರ ಚಲನವಲನ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ಲಕ್ಷಣಗಳು ಕಾಣುತ್ತಿವೆ. ಎಂಬ ಚರ್ಚೆ ಆರಂಭವಾಗಿದೆ. ಬಡಾವಣೆಯ ನಿವಾಸಿಗಳು ಸಹ ತಮ್ಮ ಮನೆಗಳ ಕಾಪಾಡುವ ಕೆಲಸ ಮಾಡಿಕೊಳ್ಳಬೇಕಿದೆ. ಅಗತ್ಯ ಮುನ್ನೆಚ್ಚರಿಕೆ ವಹಿಸಿ ಕಳ್ಳತನ ಅವಕಾಶ ಮಾಡಿಕೊಡದಂತೆ ಕ್ರಮ ವಹಿಸಬೇಕಿದೆ.

1001878643

ಹಾಡು ಹಗಲೇ ಮಾರುತಿನಗರ ಬಡಾವಣೆಯಲ್ಲಿ ದೊಡ್ಡ ಮಟ್ಟದ ಕಳ್ಳತನ ನಡೆದಿದ್ದು ಜನರ ಮನಸ್ಸಿನಲ್ಲಿ ಹಸಿಯಾಗಿರುವಾಗಲೇ ಪಕ್ಕದ ರಸ್ತೆಯಲ್ಲಿ ರಾತ್ರಿ ಕಳ್ಳರ ಸಂಚಾರ ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿದೆ. ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಬೈಕ್ ಗಳು ಒಂದೇ ರಸ್ತೆಯಲ್ಲಿ ಆರಾಮಾಗಿ ಓಡಾಟ ಮಾಡಿದೆ. ಪೊಲೀಸರ ರಾತ್ರಿ ಪಾಳಿ ಇಲ್ಲದಿರುವುದು ಕಳ್ಳರಿಗೆ ಅನುಕೂಲವಾಗಿದೆ. ಸಾರ್ವಜನಿಕರ ಕುಂದುಕೊರತೆ ಕೇಳಲು ಸಭೆಯನ್ನು ಪೊಲೀಸ್ ಇಲಾಖೆ ಮಾಡಿಲ್ಲ. ಸಭೆ ನಡೆಸಿದರೆ ನಾಗರೀಕರು ಸಾಕಷ್ಟು ಸಲಹೆ ಸೂಚನೆ ನೀಡುತ್ತಾರೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಗಂಭೀರವಾಗಿ ಚರ್ಚೆ ನಡೆದಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X