21 ಲಕ್ಷಕ್ಕೂ ಹೆಚ್ಚು ವೃದ್ಧರು, ಅಂಗವಿಕಲರ ಮನೆ ಬಾಗಿಲಿಗೆ ಪಡಿತರ ತಲುಪಿಸಲು ಮುಂದಾದ ತಮಿಳುನಾಡು ಸರ್ಕಾರ

Date:

Advertisements

21 ಲಕ್ಷಕ್ಕೂ ಹೆಚ್ಚು ವೃದ್ಧರು ಮತ್ತು ಅಂಗವಿಕಲರಿಗೆ ಪಡಿತರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸಲು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮುಂದಾಗಿದ್ದಾರೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ಮುಖ್ಯಮಂತ್ರಿಗಳ ಥಾಯುಮನವರ್ ಯೋಜನೆಯನ್ನು ಸ್ಟಾಲಿನ್ ಚೆನ್ನೈನಲ್ಲಿ ಉದ್ಘಾಟಿಸಲಿದ್ದಾರೆ.

ಈ ಯೋಜನೆಯಡಿಯಲ್ಲಿ ಅಕ್ಕಿ ಮತ್ತು ಸಕ್ಕರೆ ಸೇರಿದಂತೆ ಪಡಿತರ ಸಾಮಗ್ರಿಗಳನ್ನು ಉದ್ದೇಶಿತ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಪಡಿತರ ಚೀಟಿ ಹೊಂದಿರುವ 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಈ ಯೋಜನೆಯ ಫಲಾನುಭವಿಗಳು ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ರಾಜ್ಯ ಬಜೆಟ್‌ | 2024-25ನೇ ಸಾಲಿನ ಹೊಸ ಯೋಜನೆಗಳ ಪೂರ್ಣ ವಿವರ ಇಲ್ಲಿದೆ…

Advertisements

ಸುಮಾರು 20.42 ಲಕ್ಷ ಹಿರಿಯ ನಾಗರಿಕರು ಮತ್ತು 1.27 ಲಕ್ಷಕ್ಕೂ ಹೆಚ್ಚು ಅಂಗವಿಕಲರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಪ್ರತಿ ಎರಡನೇ ಶನಿವಾರ ಮತ್ತು ಭಾನುವಾರ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಈ ಜನಪರ ಕ್ರಮದಿಂದ ಸರ್ಕಾರಕ್ಕೆ 30.16 ಕೋಟಿ ರೂ.ಗಳ ಹೊರೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನು ಕರ್ನಾಟಕ, ಆಂಧ್ರ ಪ್ರದೇಶ ಸೇರಿ ಕೆಲವು ರಾಜ್ಯಗಳಲ್ಲಿ ಈ ರೀತಿಯ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಂಡಿದೆ. ರಾಜ್ಯದಲ್ಲಿಯೂ ಈ ಸಂಬಂಧ ಅನ್ನ ಸುವಿಧ ಎಂಬ ಯೋಜನೆಯಿದೆ. ಆದರೆ ಸರಿಯಾದ ರೀತಿಯಲ್ಲಿ ಅನುಷ್ಠಾನಗೊಂಡಿಲ್ಲ. 80 ವರ್ಷ ದಾಟಿದ ವೃದ್ಧರಿಗೆ ಅನ್ನ ಸುವಿಧ ಯೋಜನೆ ಮೂಲಕ ಮನೆ ಬಾಗಿಲಿಗೆ ಪಡಿತರ ತಲುಪಿಸುವ ವ್ಯವಸ್ಥೆಯಿದಾಗಿದ್ದು, ಇದಕ್ಕಾಗಿ ಆಪ್‌ ಬಿಡುಗಡೆಯಾಗಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X