ಉಡುಪಿ | ಯುವ ಜನಾಂಗದ ಭವಿಷ್ಯ ರೂಪಿಸಲು ಪೋಷಕರು ಮಾದರಿಯಾಗಲಿ — ವಲಿ ರಹ್ಮಾನಿ

Date:

Advertisements

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ ಭಾನುವಾರದಂದು ಉಡುಪಿ ಮಣಿಪಾಲ್ ಇನ್ ಹೋಟೆಲ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಭಾರತದ ಭವಿಷ್ಯದ ಯುವ ನಾಯಕ ಹಾಗೂ ಸಮಾಜಸೇವಕ ವಲಿ ರಹ್ಮಾನಿ ಅವರು ಯುವಕರಿಗೂ, ಪೋಷಕರಿಗೂ ಪ್ರೇರಣಾದಾಯಕ ಸಂದೇಶ ನೀಡಿದರು.

ಈ ಕಾರ್ಯಕ್ರಮದಲ್ಲಿ ಸುಮಾರು 350 ವಿದ್ಯಾರ್ಥಿಗಳು ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿದರು. ವಲಿ ರಹ್ಮಾನಿ ತಮ್ಮ ಭಾಷಣವನ್ನು ಉತ್ಸಾಹಭರಿತ ಶೈಲಿಯಲ್ಲಿ, ಪ್ರಶ್ನೋತ್ತರ, ಪಿಪಿಟಿ ಪ್ರದರ್ಶನ ಹಾಗೂ ವಿವಿಧ ಚಟುವಟಿಕೆಗಳ ಮೂಲಕ ನಿರ್ವಹಿಸಿ, ಶ್ರೋತೃಗಳ ಮನಗೆದ್ದರು.

1006653684

ಅವರು ಯುವಕರಿಗೆ ತಮ್ಮ ಮಾನಸಿಕ, ಬೌದ್ಧಿಕ, ನೈತಿಕ ಮತ್ತು ಶೈಕ್ಷಣಿಕ ಸಾಮರ್ಥ್ಯವನ್ನು ಬೆಳೆಸಿ, ಶಿಸ್ತಿನ, ಕೌಶಲ್ಯಸಂಪನ್ನ ಹಾಗೂ ಜವಾಬ್ದಾರಿಯುತ ವ್ಯಕ್ತಿಗಳಾಗಿ ರೂಪುಗೊಳ್ಳುವಂತೆ ಕರೆ ನೀಡಿದರು. “ಸಮಯವನ್ನು ವ್ಯರ್ಥ ಮಾಡಬೇಡಿ, ಕಿಶೋರ ವಯಸ್ಸನ್ನು ಸುರಕ್ಷಿತ ಮತ್ತು ಫಲಪ್ರದವಾಗಿ ಬಳಸಿ” ಎಂದು ಅವರು ಒತ್ತಿ ಹೇಳಿದರು.

Advertisements

ಸಂಜೆಯ ನಡೆದ ಕಾರ್ಯಕ್ರಮದಲ್ಲಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದ ವಲಿ ರಹ್ಮಾನಿ “ಮಕ್ಕಳು ಪೋಷಕರಿಗೆ ಅಮಾನತ್‌. ಅವರ ದೈಹಿಕ, ಬೌದ್ಧಿಕ, ನೈತಿಕ ಮತ್ತು ಧಾರ್ಮಿಕ ಹಿತವನ್ನು ಪ್ರಾಮುಖ್ಯತೆಯಿಂದ ನೋಡಿಕೊಳ್ಳಬೇಕು. ಮನೆ ಒಂದು ಶಾಲೆಯಾಗಲಿ, ಪೋಷಕರು ಗುರುಗಳಾಗಲಿ, ಮಕ್ಕಳ ಮೊದಲ ಪಾಠ ಮನೆಯಲ್ಲಿಯೇ ಪ್ರಾರಂಭವಾಗಲಿ” ಎಂದು ಹೇಳಿದರು.

ಈ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ (ರಿ) ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ಇರ್ಷಾದ್ ನೇಜಾರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

1006653844 1


ಜಿಲ್ಲಾಧ್ಯಕ್ಷ ಮೊಹಮ್ಮದ್ ಮೌಲಾ ಸ್ವಾಗತಿಸಿದರು, ಕಾರ್ಯಕ್ರಮದ ಸಂಚಾಲಕರಾದ ಶೇಖ್ ಅಬ್ದುಲ್ ಲತೀಫ್ ಮದನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಕಟಪೂರ್ವ ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಒಕ್ಕೂಟದ ಉಡುಪಿ ತಾಲೂಕು ಅಧ್ಯಕ್ಷರಾದ ಇರ್ಷಾದ್ ನೇಜಾರ್ ಧನ್ಯವಾದ ಸಲ್ಲಿಸಿದರು.

1006653842
1006653789 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X