ಯಲ್ಲಾಪುರ | ಕವಲಗಿ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಯುವಕನ ಶವ ಪತ್ತೆ: ಮತ್ತೊಬ್ಬನಿಗಾಗಿ ಮುಂದುವರೆದ ಶೋಧ

Date:

Advertisements

ಯಲ್ಲಾಪುರದ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋಗಿ ಭಾನುವಾರದಂದು ಕವಲಗಿ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಇಬ್ಬರು ಸಹೋದರರ ಪೈಕಿ ಓರ್ವನ ಶವ ಪತ್ತೆಯಾಗಿದೆ. ಮತ್ತೊಬ್ಬನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾದನಸರದ ನಿವಾಸಿಗಳಾದ ರಫೀಕ್ ಇಬ್ರಾಹಿಂ ಸಾಬ್ ಸೈಯದ್(27) ಮತ್ತು ಆತನ ಸಹೋದರ ಮಹ್ಮದ್ ಹನೀಫ್ ಇಬ್ರಾಹಿಂ ಸೈಯದ್(25) ಭಾನುವಾರ ಬೇಡ್ತಿ ನದಿಯಲ್ಲಿ ಮೀನು ಹಿಡಿದು ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ, ಕವಲಗಿ ಹಳ್ಳವನ್ನು ದಾಟುವಾಗ ನೀರಿನ ರಭಸಕ್ಕೆ ಸಿಲುಕಿ ಇಬ್ಬರೂ ಕೊಚ್ಚಿಹೋಗಿದ್ದರು.

ಸ್ಥಳೀಯರು, ಅಧಿಕಾರಿಗಳು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಹಯೋಗದೊಂದಿಗೆ ತಕ್ಷಣವೇ ಶೋಧ ಕಾರ್ಯ ಆರಂಭಿಸಿದ್ದರು. ಸೋಮವಾರ ಮಧ್ಯಾಹ್ನ, ಯುವಕರು ಕೊಚ್ಚಿಹೋದ ಸ್ಥಳದಿಂದ ಸುಮಾರು 300 ಮೀಟರ್ ದೂರದಲ್ಲಿ ಹಿರಿಯ ಸಹೋದರ ರಫೀಕ್ ಇಬ್ರಾಹಿಂ ಸಾಬ್ ಸೈಯದ್ ಅವರ ಮೃತದೇಹ ಪತ್ತೆಯಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಮಳವಳ್ಳಿ | ತಳಗವಾದಿ ಗ್ರಾಮಕ್ಕೆ ಮೂಲಸೌಕರ್ಯ ಮರೀಚಿಕೆ: ಜನಪ್ರತಿನಿಧಿಗಳ ನಿರ್ಲಕ್ಷ್ಯ

ಕಿರಿಯ ಸಹೋದರ ಮಹ್ಮದ್ ಹನೀಫ್‌ಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿವೈಎಸ್‌ಪಿ ಗೀತಾ ಪಾಟೀಲ್‌, ಸಿಪಿಐ ರಮೇಶ ಹಾನಾಪುರ, ಪಿಎಸ್‌ಐಗಳಾದ ಯಲ್ಲಾಲಿಂಗ ಕುನ್ನೂರು, ಸಿದ್ದಪ್ಪ ಗುಡಿ ಹಾಗೂ ಸಿಬ್ಬಂದಿ ವರ್ಗ ಶೋಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X