ಉತ್ತರಕಾಶಿ ಪ್ರವಾಹ | ಆ. 5ರಿಂದ ನಾಪತ್ತೆಯಾಗಿರುವ 43 ಮಂದಿ ಪತ್ತೆಗಾಗಿ ಮುಂದುವರೆದ ಶೋಧ

Date:

Advertisements

ಆಗಸ್ಟ್‌ 5ರಂದು ಉತ್ತರಪ್ರದೇಶದ ಉತ್ತರಕಾಶಿಯಲ್ಲಿ ಸಂಭವಿಸಿದ ಹಠಾತ್‌ ಪ್ರವಾಹದಲ್ಲಿ ಸಿಲುಕಿ ನಾಪತ್ತೆಯಾದ 43 ಮಂದಿಯ ಸುಳಿವು ಇನ್ನೂ ಪತ್ತೆಯಾಗಿಲ್ಲ ಎಂದು ಉತ್ತರಾಖಂಡ ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ. 43 ಮಂದಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವಿನಯಶಂಕರ ಪಾಂಡೆ “ಧಾರಾಲಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಅವಶೇಷಗಳ ಅಡಿ ಸಿಲುಕಿರುವವರ ಪತ್ತೆ ಮಾಡುವುದು ಜಿಲ್ಲಾಡಳಿತದ ಮೊದಲ ಆದ್ಯತೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ, ಇಂಡೋ ಟಿಬೆಟಿಯನ್‌ ಗಡಿ ಪೊಲೀಸ್‌, ಭೂಗರ್ಭಶಾಸ್ತ್ರಜ್ಞರ ತಂಡಗಳು ಜಂಟಿಯಾಗಿ ವಿಪತ್ತು ಪ್ರದೇಶದಲ್ಲಿ ಶೋಧ ಕಾರ್ಯ ನಿರ್ವಹಿಸುತ್ತಿವೆ” ಎಂದರು.

ಇದನ್ನು ಓದಿದ್ದೀರಾ? ಉತ್ತರಕಾಶಿಯಲ್ಲಿ ಪ್ರವಾಹ: 100ಕ್ಕೂ ಹೆಚ್ಚು ಮಂದಿ ನಾಪತ್ತೆ

Advertisements

“ಕಾಣೆಯಾಗಿರುವ 43 ಮಂದಿಯಲ್ಲಿ ಒಂಬತ್ತು ಸೇನಾ ಸಿಬ್ಬಂದಿ, ಎಂಟು ಮಂದಿ ಧಾರಾಲಿ ಸ್ಥಳೀಯರು, ಐದು ಮಂದಿ ನೆರೆಯ ಗ್ರಾಮಸ್ಥರು ಹಾಗೂ ತೆಹ್ರಿ, ಬಿಹಾರ, ಉತ್ತರಪ್ರದೇಶ ಮತ್ತು ನೇಪಾಳದ ಜನರೂ ಸೇರಿದ್ದಾರೆ” ಎಂದು ಹೇಳಿದ್ದಾರೆ.

“29 ಮಂದಿ ನೇಪಾಳಿ ಕಾರ್ಮಿಕರ ಪೈಕಿ ಐವರ ಸಂಪರ್ಕ ಸಾಧ್ಯವಾಗಿದೆ. ಆದರೆ ಉಳಿದವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಇಲ್ಲಿಯವರೆಗೆ ಇಬ್ಬರ ಮೃತ ದೇಹವನ್ನು ಮಾತ್ರ ಹೊರತೆಗೆಯಲಾಗಿದೆ. ರಸ್ತೆಗಳಲ್ಲಿ ಬಿರುಕು ಮತ್ತು ಭೂ ಕುಸಿತ ಉಂಟಾಗಿರುವ ಪರಿಣಾಮವಾಗಿ ಕಾರ್ಯಾಚರಣೆ ನಡೆಸುವುದು ಸವಾಲಾಗಿದೆ” ಎಂದು ತಿಳಿಸಿದ್ದಾರೆ.

“ನಿರಾಶ್ರಿತರ ಪರಿಹಾರ ವಾಹನಗಳ ನಿಯಮಿತ ಸಂಚಾರ ಮತ್ತು 300 ಮಂದಿ ಮಾತ್ರವೇ ಧಾರಾಲಿಯಲ್ಲಿ ಉಳಿದಿದ್ದಾರೆ. ಉಳಿದ ಕುಟುಂಬಗಳನ್ನು ಉತ್ತರಕಾಶಿ ಮತ್ತು ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ. ಈವರೆಗೆ ಒಟ್ಟು 1,278 ಮಂದಿಯನ್ನು ಸ್ಥಳಾಂತರಿಸಲಾಗಿದ್ದು, ಅದರಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದ್ದಾರೆ” ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X