ಚಿತ್ರದುರ್ಗ | ನರೇಗಾದಲ್ಲಿ ಕಡ್ಡಾಯ ನೂರು ದಿನಗಳ ಕೆಲಸ, ಬೇಡಿಕೆಗಳ ಈಡೇರಿಕೆಗಾಗಿ ಗ್ರಾಕೂಸ್ ಮನವಿ

Date:

Advertisements

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ನಿಯಮಾವಳಿಯಂತೆ ಕೆಲವು ಪಂಚಾಯತಿಗಳಲ್ಲಿ ಸರಿಯಾಗಿ ಕೆಲಸ ಕೊಟ್ಟಿರುವುದಿಲ್ಲ. ಅಲ್ಲದೇ ನೂರು ದಿನಗಳ ಸಂಪೂರ್ಣ ಕೆಲಸ ನೀಡಿರುವುದಿಲ್ಲ. ಪಂಚಾಯಿತಿಗಳಲ್ಲಿ ವಿವಿಧ ಸಮಸ್ಯೆಗಳಲ್ಲಿದ್ದು ಕನಿಷ್ಠ ನೂರು ದಿನಗಳ ಕೆಲಸ ಮತ್ತು ಸಮರ್ಪಕ ಕೂಲಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ- ಗ್ರಾಕೂಸ್ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು “ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಕೆರೆಕಲ್ಲಟ್ಟಿ, ದೊಡ್ಡೇರಿ, ಸಿದ್ದೇಶ್ವರನ ದುರ್ಗಾ, ದೇವರ ಮರಿಕುಂಟೆ, ಜಾಜೂರು ಪಂಚಾಯಿತಿ ಸೇರಿದಂತೆ ಜೆಜೆ ಕಾಲೋನಿ, ಬಸವೇಶ್ವರ ಕಾಲೋನಿ, ಅಲ್ಲಾಪುರ, ಬೊಮ್ಮನ ಕುಂಟೆ, ಗ್ರಾಮ ಪಂಚಾಯತಿಗಳಲ್ಲಿ ನಿರಂತರವಾಗಿ ಕೂಲಿಕಾರ್ಮಿಕರಿಗೆ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಕೆಲಸ ಬೇಕಾಗಿದ್ದು, ನಿರಂತರ ಕೆಲಸಕ್ಕೆ ಪಂಚಾಯತ್ ಅಧಿಕಾರಿಗಳಿಗೆ ನಿರ್ದೇಶಿಸಬೇಕು” ಎಂದು ಒತ್ತಾಯಿಸಿದರು.

1002491214

“ಬೊಮ್ಮನ ಕುಂಟೆ ಗ್ರಾಮದ ಕೂಲಿಕಾರರ ಕೆಲಸಕ್ಕೆ ಎನ್ ಎಂ ಆರ್ (NMR) ತೆಗೆದಿದ್ದು ಉದ್ಯೋಗ ಖಾತ್ರಿಯ ಕೆರೆಯ ಕೆಲಸಕ್ಕೆ ಹೋಗಲು ದಾರಿ ಇಲ್ಲದ್ದರಿಂದ ಅಕ್ಕಪಕ್ಕದ ಜಮೀನಿನವರು ಹೋಗಲು ದಾರಿ ಕೊಡುತ್ತಿಲ್ಲ. ಕೆಲಸಕ್ಕೆ ಕಾರ್ಮಿಕರು ತೆರಳಲು ಸಾಧ್ಯವಾಗಿಲ್ಲದಿರುವುದರಿಂದ ದಾರಿ ಕುರಿತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಲ್ಲದೇ ಕಾಮಸಮುದ್ರ ನಾಗಗೊಂಡನಹಳ್ಳಿ ಗ್ರಾಮ ಪಂಚಾಯತಿಯ ಕೂಲಿಕಾರ್ಮಿಕರಿಗೆ ‘ಸಮಸ್ಯೆ ಇದ್ದು ಕೆಲಸಕ್ಕೆ ಹೋಗಬೇಡಿ’ ಎಂದು ಪಂಚಾಯಿತಿ ಸಿಬ್ಬಂದಿಯೇ ತಿಳಿಸಿದ್ದಾರೆ. ಅಲ್ಲದೆ ನಮೂನೆ ಆರು ವಿತರಿಸಿ, ಕೆಲಸ ಕೊಟ್ಟಿರುವುದಿಲ್ಲ. ಸಿದ್ದೇಶ್ವರನ ದುರ್ಗಾ ಪಂಚಾಯತಿಯಲ್ಲಿ 3 ವಾರದ ಉದ್ಯೋಗ ಖಾತ್ರಿಯ ಕೂಲಿ ಹಣ ಬಾಕಿ ಇದ್ದು ಇದುವರೆಗೂ ಪಾವತಿ ಆಗಿರುವುದಿಲ್ಲ. ಈ ಎಲ್ಲ ಸಮಸ್ಯೆಗಳ ಬಗೆಹರಿಸಲು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

Advertisements

“ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಸಾಕಷ್ಟು ಆರ್ಥಿಕ ನೆರವು, ಬಲ ತುಂಬ ಯೋಜನೆಯಾಗಿದ್ದು ಚಳ್ಳಕೆರೆ ತಾಲೂಕಿನಲ್ಲಿ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ಗ್ರಾಕೂಸ್ ಸಂಘಟನೆಯು ಚಳ್ಳಕೆರೆ ತಾಲೂಕಿನಲ್ಲಿ ಹಲವು ಹಳ್ಳಿಗಳಲ್ಲಿ ಭೇಟಿ ಮಾಡಿ ಬಡ ಕಾರ್ಮಿಕರ ಗುಂಪುಗಳನ್ನು ಮಾಡಿಸಿದೆ. ಕಾರ್ಮಿಕರಿಗಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದು, ಕಾರ್ಮಿಕರಿಗೆ ನಿರಂತರವಾಗಿ ಕೆಲಸ ಕೊಡಬೇಕೆಂದು” ವಿನಂತಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶ್ರಮಿಕ ಶಕ್ತಿ ಸಂಯೋಜಿತ ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ ಘಟಕ ಉದ್ಘಾಟನೆ

“ಅಲ್ಲದೆ ಕೂಲಿ ಕಾರ್ಮಿಕರ ಬೇಡಿಕೆಗಳಾದ ಕಡ್ಡಾಯ ನೂರು ದಿನಗಳ ಕೆಲಸ ಮತ್ತು ಜಾಬ್ ಕಾರ್ಡ್ಗಳನ್ನು ಅನುಮತಿ ಇಲ್ಲದೆ ಬೇರೆಯವರು ಬಳಕೆ ಮಾಡಿದರೆ ಕೂಡಲೇ ಕ್ರಮ ಜರುಗಿಸಬೇಕು, ಕಾರ್ಮಿಕರಿಗೆ ಮಾತ್ರ ಜಾಬ್ ಕಾರ್ಡ್ ನೀಡಬೇಕು. ಕಾರ್ಮಿಕರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ಕೊಡಬೇಕು ಹಾಗೂ ನಿರಂತರವಾಗಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿಸಬೇಕು ಅಲ್ಲದೇ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಇಂಜಿನಿಯರ್ ಬಿ ಎಫ್ ಟಿಗಳಿಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಹಿರಿಯ ಅಧಿಕಾರಿಗಳು ಮತ್ತು ತಾವು ಕಾಲಕಾಲಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.‌

ಮನವಿ ಸಲ್ಲಿಸುವ ವೇಳೆ ಚಳ್ಳಕೆರೆ ಗ್ರಾಕೂಸ್ ಸಂಘಟನಾ ಸಂಚಾಲಕರಾದ ಮಂಜಮ್ಮ ಪರಶುರಾಂಪುರ,
ಸಂಧ್ಯಾ ಎಂಆರ್ ಸಿದ್ದೇಶ್ವರನದುರ್ಗ,
ಪರಮೇಶ್ ಬಿ ಜುಂಜರಗುಂಟೆ,
ತಿಪ್ಪೇಸ್ವಾಮಿ ಸಿ ಉಪ್ಪಾರಟ್ಟಿ ಸೇರಿದಂತೆ ಗ್ರಾಕೂಸ್ ಸಂಘಟನೆಯು ಕಾರ್ಯಕರ್ತರು ಪಾಲ್ಗೊಂಡಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X