ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರ ಧರಣಿ

Date:

Advertisements

ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬೀದರ್‌, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಜನವರಿಯಲ್ಲಿ ಬೆಂಗಳೂರಿನಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಾಗ, ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ಕೊಟ್ಟಿತ್ತು. ಆದರೆ, ಈವರೆಗೂ ಅದು ಈಡೇರಿಲ್ಲ. ಹಾಗಾಗಿ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ಹೊರಡಿಸಿದ ಆದೇಶವನ್ನು ತಾವೇ ಜಾರಿ ಮಾಡುತ್ತಿಲ್ಲ. ಇದು ಅನ್ಯಾಯದ ಧೋರಣೆ. ಹಳ್ಳಿಗಳಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಯೊಂದು ಜವಾಬ್ದಾರಿ ಹೊತ್ತುಕೊಂಡು ಕೆಲಸ ಮಾಡುತ್ತಿದ್ದಾರೆ. ಆದರೂ ಸರ್ಕಾರ ಸೇವೆ ನಿರ್ಲಕ್ಷ್ಯ ಮಾಡುತ್ತಿದೆ. ಈ ಕೂಡಲೇ ಆದೇಶ ಜಾರಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.

ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯನ್ನು ಅವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡುವುದನ್ನು ಕೈಬಿಡಬೇಕು. ಸೂಕ್ತ ವೇತನದೊಂದಿಗೆ ಆಶಾ ಸುಗಮಕಾರರನ್ನು ಮುಂದುವರಿಸಬೇಕು. ಸೇವಾನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗೂ ₹1,000 ಪ್ರೋತ್ಸಾಹಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಮಂಡಿಸಿದರು.

ಕಲಬುರಗಿ ಜಿಲ್ಲಾ ಗೌರವಾಧ್ಯಕ್ಷ ವಿ.ಜಿ.ದೇಸಾಯಿ ಸೇರಿದಂತೆ ಪ್ರಮುಖರಾದ ಗೀತಾ ಮಳ್ಳಿ, ಶಿವಲಿಂಗಮ್ಮ, ಸಂಗೀತಾ ಸಾವಳಗಿ, ಜಯಶ್ರೀ, ವಿಜಯಲಕ್ಷ್ಮೀ ತಾಯಮ್ಮ, ಶಾರದಾ ಈಜೇರಿ, ಲಕ್ಷ್ಮೀ ಮಂದೇವಾಲ, ಯಾಸಮೀನ ಅಂಕಲಗಾ, ಸುಗಂಧಾ ಅನ್ನೋಳ್ಳಿ, ಪ್ರಭಾ ಶಹಾಬಾದ, ಮಂಜುಳಾ ವಾಡಿ, ಸಾವಿತ್ರಿ ಇಂಗಳಗಿ, ರೇಣುಕಾ, ನಾಗವೇಣಿ ಚಿಂಚೋಳಿ, ಯಶೋಧಾ, ಲಕ್ಷ್ಮೀ ಸುಲೆಪೇಟ, ಲಕ್ಷ್ಮೀ ಚಿಮ್ಮನಚೂಡ, ಸಾಬಮ್ಮ, ವಿಜಯಲಕ್ಷ್ಮೀ, ಲಕ್ಷ್ಮೀ ಮಲಖೇಡ, ಲಕ್ಷ್ಮೀ ಕುರಕುಂಟಾ, ಸವಿತಾ ಅಫಜಲಪುರ, ಭಾರತಿ, ಗೌರಮ್ಮ, ಲಕ್ಷ್ಮೀ ಗೊಬ್ಬುರ, ಮಮತಾಜ, ಸೇರಿದಂತೆ, ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕಿನ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ :

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಯಾದಗಿರಿ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

IMG 20250812 WA0057
ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು

ಸಂಘದ ಜಿಲ್ಲಾಧ್ಯಕ್ಷೆ ಡಿ.ಉಮಾದೇವಿ, ಸಂಘದ ಕಾರ್ಯದರ್ಶಿ ದೇವಕ್ಕಿ ವನದುರ್ಗ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್ ಸೇರಿದಂತೆ ಪುಷ್ಪಲತಾ, ನೀಲಮ್ಮ, ತಾಯಮ್ಮ , ಶಾಂತವ್ವ, ನಿಂಗಮ್ಮ, ಅಮೃತ, ದಾನಮ್ಮ, ಗೀತಾ, ಮೀನಾಕ್ಷಿ, ಗೌರಮ್ಮ, ಶಾರದಾದೇವಿ ಹಾಗೂ ನೂರಾರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಅಂಗವಿಕಲ ಸಹೋದರಿಯರಿಗೆ ಬೇಕಿದೆ ಸಹಾಯಹಸ್ತ!

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X