ಚಿಂಚೋಳಿ ತಾಲ್ಲೂಕಿನ ನಾಗರಾಳ ಜಲಾಶಯದ ಹಿನ್ನೀರಿನಲ್ಲಿ ಬರುವ ಚನ್ನೂರು ಸೇತುವೆಯಿಂದ ಬಿದ್ದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಬೀದರ್ ಜಿಲ್ಲೆಯ ಕೂಡಾಂಬಲ ಗ್ರಾಮದ ಶಂಕರ ಚಿಮ್ಮನಚೋಡ (63) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದವರು ಎಂದು ತಿಳಿದು ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮನೆಯವರು ನೀಡಿದ ದೂರಿನ ಮೇರೆಗೆ ಜಲಾಶಯಕ್ಕೆ ತೆರಳಿದ ಚಿಂಚೋಳಿ ಠಾಣೆಯ ಸಬ್ ಇನಸ್ಪೆಕ್ಟರ್ ನಿಂಗಮ್ಮ ಜಿನಿಕೇರಿ ಅವರು ಶವ ಪರಿಶೀಲಿಸಿದರು.
ಶಂಕರ ಚಿಮ್ಮನಚೋಡ ಅವರಿಗೆ ಸ್ವಗ್ರಾಮದ ಪಂಜಾಬ್ ನ್ಯಾಷನಲ್ ಬ್ಯಾಂಖ್ ಶಾಖೆಯಲ್ಲಿ ಕೃಷಿ ಸಾಲದ ಜತೆಗೆ ಖಾಸಗಿ ವ್ಯಕ್ತಿಗಳ ಬಳಿಯೂ ಸೇರಿ ಅಂದಾಜು ₹4 ಲಕ್ಷ ಸಾಲವಿತ್ತು. ಇದರಿಂದ ಜಿಗುಪ್ಸೆಗೊಂಡು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೀದರ್ | ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಅಂಗವಿಕಲ ಸಹೋದರಿಯರಿಗೆ ಬೇಕಿದೆ ಸಹಾಯಹಸ್ತ!